ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

Interim report on Dharmasthala issue opens up confusion: B.Y. Vijayendra

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಡಿ.ಸಿ.ಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಆರೋಪ ಮಾಡಿದ್ದಾರೆ. ಧರ್ಮಸ್ಥಳದ ವಿಚಾರದಲ್ಲಿ ಬಹಳ ದೊಡ್ಡ ಷಡ್ಯಂತ್ರ ಇದೆ ಎಂದು ಡಿ.ಕೆ.ಶಿವಕುಮಾರ್ ಅವರೇ ಹೇಳಿಕೆ ಕೊಟ್ಟಿದ್ದಾರೆ.

ಸಂದರ್ಭ ಬಂದಾಗ ಉತ್ತರ ನೀಡುತ್ತೇನೆ ಎಂದಿದ್ದಾರೆ. ಇನ್ನೂ ಯಾವಾಗ ಸಮಯ ಬರಲಿದೆ? ರಾಜ್ಯದ ಜನರು- ಕೋಟಿ, ಕೋಟಿ ಭಕ್ತಾದಿಗಳು ಇವತ್ತು ಆತಂಕದಲ್ಲಿದ್ದಾರೆ. ಧರ್ಮಸ್ಥಳದಲ್ಲಿ ಯಾವ ರೀತಿ ತನಿಖೆ ನಡೆಯುತ್ತಿದೆ. ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ.

ಇದೆಲ್ಲ ವಿಷಯದಲ್ಲಿ ಜನರು ನಿದ್ದೆ ಮಾಡದಂಥ ಸ್ಥಿತಿ ಇದೆ ಎಂದು ವಿವರಿಸಿದರು. ಇನ್ನೂ ಕೂಡ ಡಿ.ಕೆ.ಶಿವಕುಮಾರ್ ಅವರಿಗೆ ಸಮಯ ಬಂದಿಲ್ಲ ಎಂದು ಕಾಣುತ್ತದೆ ಎಂದು ಹೇಳಿದರು.

ನಿನ್ನೆ ದಿನ ನಮ್ಮ ಪಕ್ಷದ ಸಂಸದರು, ಎಲ್ಲ ಹಿರಿಯ ಶಾಸಕರು, ವಿಧಾನಪರಿಷತ್ ಸದಸ್ಯರ ಜೊತೆಗೂಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಶ್ರೀ ಮಂಜುನಾಥೇಶ್ವರನ ದರ್ಶನ ಪಡೆದುಕೊಂಡಿದ್ದೇವೆ. ನಂತರ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನೂ ಭೇಟಿ ಮಾಡಿದ್ದೇವೆ ಎಂದು ವಿವರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ನಡೆಯುತ್ತಿದ್ದು, ಆ ಅಪಪ್ರಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಯಾಕೆ ಎಚ್ಚತ್ತುಕೊಂಡಿಲ್ಲ? ರಾಜ್ಯ ಸರಕಾರಕ್ಕೆ ಅಪಪ್ರಚಾರಕ್ಕೆ ಕಡಿವಾಣ ಹಾಕುವ ಇಚ್ಛೆ ಇರಲಿಲ್ಲವೇ? ಯಾವ ಕಾರಣಕ್ಕೆ ಇದು ಆಗಿಲ್ಲ ಎಂಬ ಕುರಿತು ಗೃಹ ಸಚಿವರು ಇವತ್ತು ತಮ್ಮ ಉತ್ತರದಲ್ಲಿ ತಿಳಿಸಬೇಕು ಎಂದು ಒತ್ತಾಯಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಸದನದಲ್ಲಿ ಏನು ಉತ್ತರ ನೀಡುತ್ತಾರೆಂದು ನೋಡಲಿದ್ದೇವೆ ಎಂದು ನುಡಿದರು.

ರಾಜ್ಯ ಸರಕಾರವು ತುಮಕೂರಿನಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಪದೇಪದೇ ಎಫ್‍ಐಆರ್ ದಾಖಲಿಸುತ್ತದೆ. ಮೈಸೂರಿನಲ್ಲೂ ಪೋಸ್ಟ್ ವಿರುದ್ಧ ಕಾರ್ಯಕರ್ತನ ಮೇಲೆ ಎಫ್‍ಐಆರ್ ದಾಖಲಿಸಿ ಬಂಧಿಸಿದೆ. ರಾಜ್ಯ ಸರಕಾರವು ಹಿಂದೂ ಕಾರ್ಯಕರ್ತರ ಬಗ್ಗೆ ತೋರುವ ಆಸಕ್ತಿಯನ್ನು ಧರ್ಮಸ್ಥಳದ ವಿಷಯದಲ್ಲಿ ಅಪಪ್ರಚಾರದ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ತೋರಿಲ್ಲ ಎಂದು ಟೀಕಿಸಿದರು.

ಹಣಕಾಸಿನ ಪರಿಸ್ಥಿತಿ- ದುಸ್ಥಿತಿ
ನುಡಿದಂತೆ ನಡೆಯುವ ರಾಜ್ಯ ಸರಕಾರದಡಿ ರಾಜ್ಯದ ಹಣಕಾಸಿನ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂದರೆ ಸ್ವಾತಂತ್ರ್ಯ ಹೋರಾಟಗಾರರ ಮಾಸಾಶನ ಕೊಡುವ ಯೋಗ್ಯತೆಯೂ ಈ ಸರಕಾರಕ್ಕೆ ಇಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಸ್ವಾತಂತ್ರ್ಯ ಹೋರಾಟಗಾರರ ಮಾಸಾಶನ 4.85 ಕೋಟಿ ಮೊತ್ತವನ್ನು ಕೊಡದೇ ತಡೆ ಹಿಡಿದಿದ್ದಾರೆ. ಇದನ್ನು ಪ್ರಶ್ನಿಸಿದರೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳ ಚೆನ್ನಾಗಿದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣವನ್ನು ಬಿಡುಗಡೆ ಮಾಡದಂಥ ದುಸ್ಥಿತಿಗೆ ಬಂದು ನಿಂತಿದೆ ಎಂದು ಆಕ್ಷೇಪಿಸಿದರು.

ತುಂಗಭದ್ರಾ ಅಣೆಕಟ್ಟಿನ ವಿಚಾರದಲ್ಲಿ ಅಲ್ಲಿನ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆಯನ್ನೂ ಗಮನಿಸಿದ್ದೇನೆ. ಕಳೆದ ಆಗಸ್ಟ್‍ನಲ್ಲಿ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು. ರೈತರೂ ಆತಂಕದಲ್ಲಿ ಇದ್ದರು. ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಖಾಯಂ ಪರಿಹಾರ ನೀಡಿಲ್ಲ. ಇವರು ತಡ ಮಾಡಿದ್ದು, ಒತ್ತಡ ಇತರ ಗೇಟ್‍ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಒದಗಿಬಂದಿದೆ ಎಂದು ಗಮನ ಸೆಳೆದರು.

ಮತ್ತೊಂದು ಕಡೆ ಕೊಪ್ಪಳ, ರಾಯಚೂರು, ಬಳ್ಳಾರಿ ಮೊದಲಾದ ಜಿಲ್ಲೆಗಳ ರೈತರು ಪ್ರತಿವರ್ಷ 2 ಬೆಳೆ ಬೆಳೆಯುತ್ತಿದ್ದರು. ಆದರೆ, ಸಚಿವರ ಮತ್ತು ರಾಜ್ಯ ಸರಕಾರದ ಬೇಜವಾಬ್ದಾರಿತನದಿಂದ ರಾಜ್ಯ ಸರಕಾರ ಅಥವಾ ಸಂಬಂಧಿತ ಸಚಿವರು, ಟಿ.ಬಿ. ನೀರಾವರಿ ಮಂಡಳಿಯಲ್ಲಿ ಚರ್ಚೆ ಮಾಡಿ ಒತ್ತಡ ಹಾಕದ ಪರಿಣಾಮವಾಗಿ ಈ ಬಾರಿ ರೈತರು ಒಂದೇ ಬೆಳೆಗೆ ತೃಪ್ತಿ ಪಡುವ ಸಂದರ್ಭ ಬಂದಿದೆ ಎಂದು ಟೀಕಿಸಿದರು.

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]