Home Minister's warning to YouTubers...celebration for some private channels

ಯೂಟ್ಯೂಬರ್‌ಗಳಿಗೆ ಗೃಹಸಚಿವರ ವಾರ್ನಿಂಗ್‌‌‌.. ಕೆಲ ಖಾಸಗಿ ಚಾನಲ್‌ಗಳಿಗೆ ಸಂಭ್ರಮ

ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ಯೂಟ್ಯೂಬರ್‌ಗಳಿಗೆ (YouTubers) ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳ‌ನ ನಿಲ್ಲಿಸುವಂತೆ ಸೂಚನೆ ನೀಡಿದ್ದು, ಮತ್ತೆ ಮುಂದವರಿಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಧರ್ಮಸ್ಥಳ ಕ್ಷೇತ್ರದ ಕುರಿತು ಯೂಟ್ಯೂಬರ‌್‌ಗಳು ಅವಹೇಳನ ಮಾಡಿದ್ದಾರೆ, ಅವರ ವಿರುದ್ಧ ಕ್ರಮ ಏಕಿಲ್ಲವೆಂದು ಬಿಜೆಪಿಯ ಶಾಸಕರು ಸದನದಲ್ಲಿ ನಿನ್ನೆ ಆಕ್ರೋಶ ವ್ಯಕ್ತಪಡಿಸಿದರು.

ಈ ಬೆನ್ನಲ್ಲೇ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಯೂಟ್ಯೂಬರ್‌ಗಳಿಗೆ ಕ್ಷೇತ್ರದ ಬಗ್ಗೆ ಅವಹೇಳ‌ನ ನಿಲ್ಲಿಸುವಂತೆ ಸೂಚನೆ ನೀಡಿದ್ದು, ಮತ್ತೆ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಗೃಹಸಚಿವರ ಎಚ್ಚರಿಕೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಅದರಲ್ಲಿ ಪ್ರಮುಖವಾಗಿ ಚರ್ಚಿತ ವಿಚಾರ ಈ ರೀತಿಯಾಗಿದೆ.

ಸಾಮಾಜಿಕ ಜಾಲತಾಣ ಸಕ್ರಿಯವಾದಂತೆ ಪತ್ರಿಕೋದ್ಯಮವನ್ನು ಮಾರಾಟಕ್ಕಿಟ್ಟವರಿಗೆ ಸಿಕ್ಕಾಪಟ್ಟೆ ಆತಂಕ ಎದುರಾಗಿದೆ. ಏಕೆಂದರೆ ಯಾರದೋ ಹಂಗು, ಯಾರದೋ ಸ್ಪಾನ್ಸರ್, ಜಾಹೀರಾತು ಪಡೆದು ಅವರಿಗೆ ಪೂರಕವಾಗಿ ವರದಿ ಮಾಡಬೇಕಾದ ಅನಿರ್ವಾರ್ಯತೆಯಿಂದ ಸಾಮಾಜಿಕ ಜಾಲತಾಣ ಮುಕ್ತವಾಗಿದೆ.

ಆದರೆ ಇದು ಮಾಧ್ಯಮ ಎಂದರೆ ನಾವು ಮಾತ್ರ ಎಂದು 1970 ರ ನಿಯಮಕ್ಕೆ ಅಂಟಿಕೊಂಡಿರುವ, ಅದೇ ಕಾನೂನು ಎಂಬಂತೆ (ತಿದ್ದುಪಡಿ ಮಾಡಲು ಅವಕಾಶ ನೀಡದೆ ಷಡ್ಯಂತ್ರ ಎಂಬ ಆರೋಪ ಇದೆ) ವರ್ತಿಸುವವರಿಗೆ ಅಸಹಿನೀಯವಾಗಿದೆ.

ಏಕೆಂದರೆ ಡಿಜಿಟಲ್ ಯುಗದಲ್ಲಿ ದಿನ ಪತ್ರಿಕೆಗಳಿಗೆ ಪ್ರತಿಸ್ಪರ್ಧಿಯಾಗಿ ನ್ಯೂಸ್ ವೆಬ್ಸೈಟ್‌ಗಳು, ಖಾಸಗಿ ಚಾನಲ್ ಗಳಿಗೆ ಸ್ಪರ್ಧಿಯಾಗಿ ಯೂಟ್ಯೂಬ್ ಚಾನಲ್ಗಳು ಎದ್ದು ನಿಂತಿವೆ. ಇದು ನಮ್ಮದೇ ಸಾಮ್ರಾಜ್ಯ, ನಾವೇಳಿದ್ದೇ ಸುದ್ದಿ ಎಂಬಂತೆ ವರ್ತಿಸುತ್ತಿದ್ದವರಿಗೆ ತೀವ್ರ ಹಿನ್ನಡೆಗೂ ಕಾರಣವಾಗಿದೆ.

ಧರ್ಮಸ್ಥಳ ಪ್ರಕರಣದ ಕುರಿತು ಖಾಸಗಿ ನ್ಯೂಸ್ ಚಾನಲ್ ಗಳು ವರದಿ ಪ್ರಕಟಿಸದೆ ಇದ್ದಾಗ ಕೆಲ ಯೂಟ್ಯೂಬ್ ಚಾನಲ್‌ಗಳು ವರದಿ ಪ್ರಸಾರ ಮಾಡಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದೆ.

ಇದರ ನಡುವೆ ಕೆಲ ಕಾನೂನು ಪ್ರಕ್ರಿಯೆಯ ಅನಿರ್ವಾರ್ಯತೆಯಿಂದ ಖಾಸಗಿ ಚಾನಲ್‌ಗಳು ಕೂಡ ವರದಿ ಮಾಡಬೇಕಾದ ಅನಿವಾರ್ಯತೆ ಎದುರಾಯಿತು. ಆದರೆ ಧರ್ಮಸ್ಥಳ ಪ್ರಕರಣದ ಕುರಿತು ಪರ ಹಾಗೂ ವಿರುದ್ಧ ಯೂಟ್ಯೂಬರ್‌ಗಳು ಚರ್ಚೆ, ವರದಿ ಮಾಡುತ್ತಿದ್ದಾರೆ.

ಇತ್ತೀಚೆಗಷ್ಟೇ ಕೆಲ ಯೂಟ್ಯೂಬರ್ಗಳು ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನ ಮಾಡುತ್ತಿದ್ದಾರೆ ಎಂಬ ಆಕ್ರೋಶ ಕೂಡ ವ್ಯಾಪಕವಾಗಿದೆ. ಇದು ಗಲಾಟೆಗೂ ಕಾರಣವಾಗಿ, ಕೆಲವರು ಆಸ್ಪತ್ರೆಗೆ ಸೇರಿದ್ದರೆ ಮತ್ತೆ ಕೆಲವರ ವಿರುದ್ಧ ದೂರು ದಾಖಲಾಗಿದೆ.

ಇದರ ಬೆನ್ನಲ್ಲೇ ನಿನ್ನೆ ಸದನದಲ್ಲಿ ಗೃಹಸಚಿವರ ನಿಲುವು ಒಪ್ಪಲೇ ಬೇಕಾದ ವಿಷಯ. ಏಕೆಂದರೆ ಅಸಹನೀಯ, ಅಗೌರವ, ಅವಹೇಳನ ಮಾಡಿದ ಯಾವುದೇ ಮಾಧ್ಯಮಗಳ ವಿರುದ್ಧ ಕ್ರಮವಾಗಬೇಕು. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಖಾಸಗಿ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುವ ಇದೇ ರೀತಿಯ ವರದಿಗಳ ಬಗ್ಗೆ ಕೂಡ ಇದೇ ನಿಯಮ ಪಾಲನೆ ಆಗಬೇಕೆಂಬ ಮಾತು ವ್ಯಾಪಕವಾಗಿದೆ.

ಖಾಸಗಿ ಚಾನಲ್‌ಗಳ ವಿರುದ್ಧ ಕ್ರಮಕ್ಕೆ ಮುಂದಾದರೆ ಪತ್ರಿಕಾ ಸ್ವಾತಂತ್ರ್ಯ ಹರಣ ಎಂದು ಕಿರುಚುವವರು, ಯೂಟ್ಯೂಬರ್‌ಗಳಿಗೆ ಎಚ್ಚರಿಕೆ ನೀಡಿದರೆ ಸಂಭ್ರಮಿಸುತ್ತಿದ್ದಾರೆ. ಈಗ ಅವರಿಗೆ ಪತ್ರಿಕಾ ಸ್ವಾತಂತ್ರ್ಯ ಕಾಣೆಯಾಗಿದೆಯೇ ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಇದಕ್ಕೆ ಉದಾಹರಣೆಯಾಗಿ ಒಂದು ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ನೀಡುವುದಕ್ಕೂ ಮುನ್ನವೇ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ವಿರುದ್ಧ ಕಿಲ್ಲಿಂಗ್ ಸ್ಟಾರ್ ಎಂದು ವರದಿ ಪ್ರಸಾರ, ಪತ್ರಿಕೆಗಳ ವರದಿ ಕುರಿತು ಇದೇ ರೀತಿಯ ಕ್ರಮ ಆಗಲೇ ಬೇಕು ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ.

ಅಳಿದುಳಿದವರಲ್ಲಿ ನಾವೇ ನಂಬರ್ 1 ಎಂದು ಮುದ್ರಣ ಕುಸಿದಿರುವ ಪತ್ರಿಕೆಗಳು, ವೀಕ್ಷಕರಿಂದ ತಿರಸ್ಕಾರಕ್ಕೆ ಒಳಗಾಗಿರುವ ಕೆಲ ಖಾಸಗಿ ಚಾನಲ್ಗಳು ಮಾತ್ರ ಮಾಧ್ಯಮ ಎಂಬ ನಿಲುವಿನಿಂದ ಸರ್ಕಾರಗಳು ಹೊರಬರಬೇಕಿದೆ.

ಸುಳ್ಳು, ಊಹಾಪೋಹ ವರದಿ ಪ್ರಸಾರ ಮಾಡುವ ಯಾವುದೇ ಮಾಧ್ಯಮವಾಗಲಿ ಅವರ ವಿರುದ್ಧ ಒಂದೇ ರೀತಿಯ ಕ್ರಮಕೈಗೊಳ್ಳುವಂತೆ ಆಗ್ರಹ ಕೇಳಿಬರುತ್ತಿದೆ. ಅಲ್ಲದೆ ಎಲ್ಲರಿಗೂ ಒಂದೇ ಮಾದರಿಯಾದ ಸುಳ್ಳು ಸುದ್ದಿಗೆ ಕಡಿವಾಣ ಕುರಿತಾದ ಕಾನೂನು ಶೀಘ್ರವೇ ಜಾರಿಗೊಳಿಸುವಂತೆ ಒತ್ತಾಯದ ಕೂಗು ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದೆ‌.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!