No matter how many guarantees are given, we have no problem; Opposition Leader R. Ashoka

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ರಾಜ್ಯದ ಜನರಿಂದ ಹೆಚ್ಚುವರಿಯಾಗಿ 56 ಸಾವಿರ ಕೋಟಿ ರೂ. ತೆರಿಗೆ ವಸೂಲಿ ಮಾಡುತ್ತಿದ್ದರೂ, ಅಭಿವೃದ್ಧಿ ಮಾತ್ರ ನಡೆಯುತ್ತಿಲ್ಲ. ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ. ಆದರೆ ಅಭಿವೃದ್ಧಿ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಡಿದ ಅವರು, ರಾಜ್ಯದಲ್ಲಿ ವಿವಿಧ ತೆರಿಗೆ, ಶುಲ್ಕ ಹೆಚ್ಚಿಸಿ ಒಟ್ಟು 56 ಸಾವಿರ ಕೋಟಿ ರೂ. ತೆರಿಗೆಯನ್ನು ಜನರಿಂದ ವಸೂಲಿ ಮಾಡುತ್ತಿದ್ದರೂ, ಇದನ್ನು ಅಭಿವೃದ್ಧಿಗೆ ಬಳಸುತ್ತಿಲ್ಲ.

ಗ್ಯಾರಂಟಿಗಳಿಗೆ ಈ ಹಣವನ್ನು ಬಳಸಿದರೂ ಇನ್ನೂ ಹಣ ಉಳಿಯುತ್ತದೆ. ಗ್ಯಾರಂಟಿಗೆ ಹಣ ಕೊಡಬೇಡಿ ಎಂದು ಹೇಳುತ್ತಿಲ್ಲ. ಆದರೆ ಕಾಂಗ್ರೆಸ್‌ ಶಾಸಕರೇ ಇದನ್ನು ವಿರೋಧಿಸುತ್ತಿದ್ದಾರೆ. ಗ್ಯಾರಂಟಿ ಕೊಟ್ಟರೆ ಎಲ್ಲ ದಿವಾಳಿ ಎಂದು ಶಾಸಕರು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ಶಾಸಕರಿಗೆ ಅನುದಾನ ನೀಡಿದ್ದರೆ ಬಾಯಿ ಮುಚ್ಚಿಕೊಂಡು ಹೇಳುತ್ತಿದ್ದರು. ಅನುದಾನ ಕೊಡದೆ ಅಭಿವೃದ್ಧಿ ಮಾಡದೇ ಇರುವುದರಿಂದ ಈ ರೀತಿಯಾಗಿದೆ. ಕೆಎಸ್‌ಆರ್‌ಟಿಸಿಗೆ 1554 ಕೋಟಿ ರೂ. ಬಿಎಂಟಿಸಿಗೆ 532 ಕೋಟಿ ರೂ. ಬಾಕಿ ಉಳಿಸಿಕೊಳ್ಳಲಾಗಿದೆ ಎಂದರು.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯ 35,000 ಕೋಟಿ ರೂ. ಪಡೆದು ಗ್ಯಾರಂಟಿಗೆ ಬಳಸಲಾಗಿದೆ. ದಲಿತರ ಹಣವನ್ನು ಮುಟ್ಟಬಾರದೆಂದು ಇವರೇ ಕಾನೂನು ರೂಪಿಸಿದ್ದರು. ಸರ್ಕಾರ ಆರಂಭದಲ್ಲಿ ತೆರಿಗೆ ವಿಧಿಸಲ್ಲ, ಕಮಿಶನ್‌ ಹಣವನ್ನು ಉಳಿಸಿ ಅಭಿವೃದ್ಧಿಗೆ ನೀಡುತ್ತೇವೆಂದು ಹೇಳಿದ್ದರು. ಆದರೀಗ ಕಮಿಶನ್‌ 60% ಆಗಿದೆ ಎಂದು ಗುತ್ತಿಗೆದಾರರು ಹೇಳಿದ್ದಾರೆ. 27 ತಿಂಗಳಲ್ಲಿ 25 ತೆರಿಗೆ ವಿಧಿಸಿದ್ದೀರಿ. ಕಸದ ಸೆಸ್‌ ದುಪ್ಪಟ್ಟು ಮಾಡಲಾಗಿದೆ. ಹಾಲಿನ ದರ ಎರಡು ಬಾರಿ ಏರಿಸಲಾಗಿದೆ. ಬಸ್‌ ದರ ಶೇ.15 ಏರಿಕೆ, ವಾಹನ ದರ ಶೇ.9 ಏರಿಕೆ, ಕಾವೇರಿ ನೀರು ಶುಲ್ಕ ಏರಿಕೆ, ಒಳಚರಂಡಿ ಶುಲ್ಕ 300% ಏರಿಕೆ, ಮದ್ಯದ ದರ 40% ಏರಿಕೆ, ಮದ್ಯದಂಗಡಿ ಲೈಸೆನ್ಸ್‌ ಶುಲ್ಕ 50% ಏರಿಕೆ, ವಿದ್ಯುತ್‌ ದರ 36 ಪೈಸೆ ಏರಿಕೆ, ಮೆಟ್ರೊ ದರ ಏರಿಕೆ, ಆಸ್ತಿ ಮಾರ್ಗಸೂಚಿ ದರ ಏರಿಕೆ, ವೃತ್ತಿ ತೆರಿಗೆ ಹೆಚ್ಚಳ, ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕ ಹೆಚ್ಚಳ, ಕಾರ್ಮಿಕ ಇಲಾಖೆಯಲ್ಲಿ 250 ರೂ. ವರೆಗೆ ತೆರಿಗೆ ಹೆಚ್ಚಳ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರೇರಾ ಹೊರಗೆ ಒಂದು ಫ್ಲ್ಯಾಟ್‌ಗೆ 15,000 ರೂ. ವಿಧಿಸಲಾಗಿದೆ. ಇದು ಒಂದು ರೀತಿಯಲ್ಲಿ ಟ್ಯಾಕ್ಸ್‌ ಟೆರರಿಸಂ ಆಗಿದೆ ಎಂದು ದೂರಿದರು.

ಮನೆಯೊಳಗೆ ಕಾರು ನಿಲ್ಲಿಸಿದರೆ ಪಾರ್ಕಿಂಗ್‌ ಶುಲ್ಕ ವಿಧಿಸಲಾಗುತ್ತದೆ. ಪಂಚಾಯಿತಿ ಇ-ಖಾತೆಗೆ 1,000 ರೂ. ಶುಲ್ಕ, ಬಿಬಿಎಂಪಿಯಲ್ಲಿ ಇ-ಖಾತಾ ಮಾಡಲು ಪ್ರತ್ಯೇಕ ಶುಲ್ಕ, ಮರಣ ಪ್ರಮಾಣಪತ್ರ ಪಡೆಯಲು 50 ರೂ. ಶುಲ್ಕ, ರೈತರ ಸಾಲಕ್ಕೆ ಸ್ಟಾಂಪ್‌ ಕಾಗದಕ್ಕೆ 100 ರೂ. ಹೀಗೆ ಅನೇಕ ತೆರಿಗೆ, ಶುಲ್ಕ ಹೆಚ್ಚಿಸಲಾಗಿದೆ.

ಕಸದ ತೆರಿಗೆಯಿಂದ 750 ಕೋಟಿ ರೂ. ಹಾಲಿನಿಂದ 1300 ಕೋಟಿ ರೂ., ಪೆಟ್ರೋಲ್‌-ಡೀಸೆಲ್‌ನಿಂದ 6500 ಕೋಟಿ ರೂ., ಬಸ್‌ ಟಿಕೆಟ್‌ನಿಂದ 1,000 ಕೋಟಿ ರೂ., ವಾಹನಗಳ ನೋಂದಣಿ ಶುಲ್ಕದಿಂದ 3300 ಕೋಟಿ ರೂ. ನೀರಿನ ಶುಲ್ಕದಿಂದ 600 ಕೋಟಿ ರೂ., ಹೀಗೆ ಹೆಚ್ಚುವರಿ ತೆರಿಗೆ, ಶುಲ್ಕದಿಂದ ಹೆಚ್ಚುವರಿ ಹಣ ಬರುತ್ತಿದೆ ಎಂದರು.

ಬೆಂಗಳೂರಿನಲ್ಲಿ ಅಭಿವೃದ್ಧಿ ಇಲ್ಲ

ಬೆಂಗಳೂರಿನಲ್ಲಿ 1500 ಕ್ಕೂ ಅಧಿಕ ರಸ್ತೆ ಗುಂಡಿಗಳಿವೆ. ಒಂದು ರಸ್ತೆಯಲ್ಲೂ ನೆಮ್ಮದಿಯಾಗಿ ವಾಹನ ಚಲಾಯಿಸಲು ಸಾಧ್ಯವಿಲ್ಲ. ಡಿ.ಕೆ.ಶಿವಕುಮಾರ್‌ಗೆ ಬೆಂಗಳೂರಿಗೆ ಹೊಣೆ ನೀಡಿದಾಗ, ಕನಸು ಕಾಣುವ ಮಾತಾಡಿದ್ದರು. ಶೇ.60-65 ಆದಾಯ ನೀಡುವ ನಗರವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಕಿಂದರಿ ಜೋಗಿಯಂತೆ ಕಥೆ ಕಟ್ಟಿ ಜನರನ್ನು ವಂಚಿಸಿದ್ದಾರೆ. ಬ್ರ್ಯಾಂಡ್‌ ಬೆಂಗಳೂರು ಹೋಗಿ ತೇಲುವ ಬೆಂಗಳೂರು ಹಾಗೂ ಬ್ಯಾಡ್‌ ಬೆಂಗಳೂರು ಆಗಿದೆ ಎಂದು ದೂರಿದರು.

ಬೆಂಗಳೂರಿನಲ್ಲಿ ಯಾವುದೇ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ರಸ್ತೆ ಗುಂಡಿಗಳಿಂದಾಗಿ ಬಿಎಂಟಿಸಿ ಬಸ್ಸುಗಳ ವೇಗ 15 ಕಿ.ಮೀ. ನಿಂದ 9 ಕಿ.ಮೀ. ಗೆ ಬಂದಿದೆ. ಸ್ಕೈವಾಕ್‌ಗಳು ಕಸದ ತೊಟ್ಟಿಯಾಗಿ ಪರಿವರ್ತನೆಯಾಗಿದೆ. ಕೆಟ್ಟ ನಗರಗಳಲ್ಲಿ ಪಟ್ಟಿಯಲ್ಲಿ ಬೆಂಗಳೂರು 3 ನೇ ಸ್ಥಾನಕ್ಕೆ ಬಂದಿದೆ. ಆರ್ಟಿರಿಯಲ್‌ ಹಾಗೂ ಸಬ್‌ ಆರ್ಟಿರಿಯಲ್‌ ರಸ್ತೆಗಳು 824 ಕಿ.ಮೀ. ಉದ್ದವಿದ್ದು, ಈವರೆಗೆ 5,000 ಕೋಟಿ ರೂ. ಖರ್ಚು ಮಾಡಲಾಗಿದೆ. ಇಷ್ಟೊಂದು ಹಣ ಎಲ್ಲಿಗೆ ಹೋಗಿದೆ? ಎಂದು ಪ್ರಶ್ನೆ ಮಾಡಿದರು.

ಎತ್ತಿನಹೊಳೆ ಯೋಜನೆಗೆ ಒಂದು ಲಕ್ಷ ಕೋಟಿ ರೂ. ಖರ್ಚು ಮಾಡಿದರೂ ಮುಗಿದಿಲ್ಲ. ಇದೇ ರೀತಿ ಸುರಂಗ ರಸ್ತೆ ಯೋಜನೆಯನ್ನು 17,000 ಕೋಟಿ ರೂ. ವೆಚ್ಚ ಎಂದು ಹೇಳಿ ಪ್ರಸ್ತಾಪ ಮಾಡಲಾಗಿದೆ. ಇದಕ್ಕೆ ಟೋಲ್‌ ವಿಧಿಸಿದರೆ ಯಾರೂ ಬರುವುದಿಲ್ಲ. ಆಗ ಸುರಂಗದಲ್ಲೇ ಕಸವನ್ನು ತುಂಬಬಹುದು. ನಾನು ಅಭಿವೃದ್ಧಿಯ ವಿರೋಧಿಯಲ್ಲ. ಆದರೆ ಸುರಂಗಕ್ಕಾಗಿ ಹಣ ಹಾಳು ಮಾಡಿದರೆ ನಗರದ ಅಭಿವೃದ್ಧಿ ಅಸಾಧ್ಯ ಎಂದರು.

ಅಭಿವೃದ್ಧಿಗೆ ಹೊರೆ ಎಂಬಂತೆ ಇ-ಖಾತಾ ಕ್ರಮ ತಂದಿದ್ದಾರೆ. ಒಂದು ಬಾರಿ ಖಾತೆ ಮಾಡಲು 12,000 ರೂ. ಪಡೆಯುತ್ತಾರೆ. ಯಾವುದೇ ಕಚೇರಿಗೆ ಹೋದರೂ ಸರ್ವರ್‌ ಡೌನ್‌ ಎಂದು ಹೇಳುತ್ತಾರೆ. ಒಬ್ಬ ಮಾಲೀಕನಿಗೆ 150 ಬಾರಿ ಮೊಬೈಲ್‌ಗೆ ಒಟಿಪಿ ಬಂದಿದೆ ಎಂದರೆ ಇಂತಹ ವ್ಯವಸ್ಥೆಗೆ ಏನನ್ನಬೇಕು? ಇ-ಖಾತಾ ಎಂದರೆ ಸರಳತೆ ಇರಬೇಕು. ಆದರೆ ಇದರಿಂದ 10,000 ಕೋಟಿ ರೂ. ಅವ್ಯವಹಾರಕ್ಕೆ ದಾರಿಯಾಗಿದೆ ಎಂಬ ಅನುಮಾನವಿದೆ ಎಂದರು.

ಬೆಂಗಳೂರಿನಲ್ಲಿ ಪ್ರವಾಹ ಸಂಕಷ್ಟಕ್ಕೆ ಪರಿಹಾರವೇ ಇಲ್ಲ. ಇನ್ನು ಮುಂದೆ ಬಸ್‌ ಖರೀದಿ ಜೊತೆಗೆ ದೋಣಿಗಳನ್ನೂ ಖರೀದಿ ಮಾಡಬೇಕಾಗುತ್ತದೆ. ಪ್ರತಿ ಬಾರಿ ಮಳೆ ಬಂದಾಗ ಮರ ಬಿದ್ದು ನಾಲ್ಕೈದು ಜನರು ಸಾಯುತ್ತಿದ್ದಾರೆ. ಕೊಂಬೆಗಳನ್ನು ಕಡಿಯಲು, ಮರಗಳನ್ನು ನಿರ್ವಹಿಸಲು ಬಿಬಿಎಂಪಿ ಬಳಿ ಹಣವಿಲ್ಲ ಎಂದರು.

ಶಾಸಕರಿಗೆ ಅನುದಾನವಿಲ್ಲ

ಹಿಂದೆ ಯಾವಾಗಲೋ ತೆಂಗಿನಕಾಯಿ ಒಡೆದು ಇನ್ನೂ ಕಾಮಗಾರಿ ಶುರುವಾಗಿಲ್ಲ ಎಂದು ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೇಳಿದ್ದರು. ನನ್ನ ಕ್ಷೇತ್ರಕ್ಕೆ ಇನ್ನೂ 20 ಕೋಟಿ ರೂ. ನೀಡಿಲ್ಲ. ಬಿಜೆಪಿ ಶಾಸಕರಿಗೆ ಅನುದಾನ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲರಿಗೂ ಅನುದಾನ ನೀಡಿದರೆ ಅಭಿವೃದ್ಧಿ ಮಾಡಬಹುದು ಎಂದರು.

ಗ್ಯಾರಂಟಿಗಳನ್ನು ಏನಾದರೂ ಮಾಡಿ. ಆದರೆ ಶಾಲೆ, ಕುಡಿಯುವ ನೀರು, ಆಸ್ಪತ್ರೆ ಮೊದಲಾದ ಅಭಿವೃದ್ಧಿ ಕಾರ್ಯಗಳನ್ನು ಮಾಡಿ. ಇದರಿಂದ ಜನರಿಗೆ ನ್ಯಾಯ ಸಿಕ್ಕಿಲ್ಲ ಎಂದರು.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!