CM, DCM wearing masks Running situation: B.Y. Vijayendra

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ದೂರುದಾರನಿಗೆ ಮಾಸ್ಕ್ ಹಾಕಿಸಿದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಇದೀಗ ತಾವೇ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (B.Y. Vijayendra) ವಿಶ್ಲೇಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗುಂಡಿಗಳಲ್ಲಿ ಏನೂ ಸಿಕ್ಕದೇ ಈಗ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಆತಂಕದಲ್ಲಿದ್ದಾರೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ದೂರುದಾರನಿಗೆ ಮುಖವಾಡ ಹಾಕುವ ನಿರ್ಧಾರ ಮಾಡಿದ್ದರು. ದೂರುದಾರನ ಮುಖವಾಡವೂ ಕಳಚಿಬಿದ್ದಿದೆ ಎಂದು ಹೇಳಿದರು.

ಧರ್ಮಸ್ಥಳದ ವಿಚಾರವಾಗಿ ಬಿಜೆಪಿ ನಮ್ಮ ಹೋರಾಟವನ್ನು ಈಗಾಗಲೇ ಘೋಷಿಸಿದೆ; ‘ಧರ್ಮ ರಕ್ಷಣೆಗಾಗಿ ಧರ್ಮ ಯುದ್ಧ’ ನಡೆಸಲಿದ್ದೇವೆ ಎಂದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ರಾಜ್ಯ ಸರಕಾರದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎಂದರೆ, ಪಾಪ ಸಿದ್ದರಾಮಯ್ಯನವರು ಯಾರೋ ಎಡಪಂಥೀಯ ಶಕ್ತಿಗಳ ಒತ್ತಡಕ್ಕೆ ಮಣಿದು ಧರ್ಮಸ್ಥಳದಲ್ಲಿ ಎಸ್‍ಐಟಿ ತನಿಖೆಗೆ ಆದೇಶಿಸಿದರು. ನಾವೂ ಅದನ್ನು ಸ್ವಾಗತ ಮಾಡಿದ್ದೆವು. ಗುಂಡಿ ಬಗೆದಂತೆ ಏನೋ ಸಿಕ್ಕುವುದಾಗಿ ವಿಧಾನಸೌಧದಲ್ಲಿ ಕುಳಿತು ಸಿದ್ದರಾಮಯ್ಯನವರು ಕನಸು ಕಾಣುತ್ತಿದ್ದರು. 15- 16 ಗುಂಡಿ ತೋಡಿದರೂ ಧರ್ಮಸ್ಥಳದಲ್ಲಿ ಏನೂ ಸಿಕ್ಕಿಲ್ಲ ಎಂದು ವಿವರಿಸಿದರು.

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅವಿವೇಕತನದಿಂದ ನಡೆದುಕೊಳ್ಳುತ್ತಿದೆ. ಆ ದೂರುದಾರ, ಆತನ ಹಿಂದಿರುವ ದುಷ್ಟ ಶಕ್ತಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರಗಳು ನಡೆಯುತ್ತಿವೆ. ಹಿಂದೂ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಏನಾದರೂ ಪೋಸ್ಟ್ ಮಾಡಿದರೆ, 24 ಗಂಟೆಯಲ್ಲಿ ಅವರನ್ನು ಬಂಧಿಸುತ್ತಾರೆ ಎಂದು ಆಕ್ಷೇಪಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ 15-20 ದಿನಗಳಿಂದ ಸರಾಗವಾಗಿ ಅಪಪ್ರಚಾರ ನಡೆಯುತ್ತಿದೆ. ಆದರೂ, ಇವರ ವಿರುದ್ಧ ತನಿಖೆ ಮಾಡುತ್ತಿಲ್ಲ; ಇದರ ವಿರುದ್ಧ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ ಎಂದು ಸ್ಪಷ್ಟಪಡಿಸಿದರು.

11 ಸಾವಿನ ಹರಿಕಥೆ ಹೇಳಿದ ಸಿಎಂ
ಚಿನ್ನಸ್ವಾಮಿ ಕ್ರೀಡಾಂಗಣದ ಆರ್.ಸಿ.ಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯ ಕುರಿತ ಉತ್ತರ ಕೊಡುವಾಗ ಮುಖ್ಯಮಂತ್ರಿಗಳು ಸದನದಲ್ಲಿ ಬಹಳ ಭಾವುಕರಾಗಿ ಆ ವಿಚಾರ ಪ್ರಸ್ತಾಪಿಸುವ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದರೆ, ಅವರು ಹರಿಕಥೆ ಹೇಳುವ ಕೆಲಸ ಮಾಡಿದರು ಎಂದು ವಿಜಯೇಂದ್ರ ಅವರು ಟೀಕಿಸಿದರು.

ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆದ ಇಂಥ ಸಾವಿನ ಅಂಕಿ ಅಂಶವನ್ನು ಅವರು ನೀಡಿದರು. ಬಿಜೆಪಿ ಸಾವಿನಲ್ಲಿ ರಾಜಕೀಯ ಮಾಡುತ್ತಿಲ್ಲ. ಕೋವಿಡ್ ವೇಳೆ ಆಮ್ಲಜನಕ ಕೊರತೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ 36 ಜನರು ಮೃತಪಟ್ಟಿದ್ದರು. ಆಗ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಕಳೆದ ಚುನಾವಣೆ ಸಂದರ್ಭದಲ್ಲಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಮೃತ 36 ಜನರ ಕುಟುಂಬದವರಿಗೆ ಸರಕಾರಿ ನೌಕರಿ ಕೊಡುವುದಾಗಿ ತಿಳಿಸಿದ್ದರು. ಸರಕಾರ ಬಂದು ಎರಡೂವರೆ ವರ್ಷ ಆದರೂ ನಿಮ್ಮ ಯೋಗ್ಯತೆಗೆ ಸರಕಾರಿ ನೌಕರಿ ಕೊಡಲು ಸಾಧ್ಯವಾಯಿತೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ಸಾವಿನಲ್ಲಿ ರಾಜಕೀಯ ಮಾಡುವವರು ಕಾಂಗ್ರೆಸ್ ಪಕ್ಷದವರು ಎಂದು ಆರೋಪಿಸಿದರು.

ಕಾಲ್ತುಳಿತ ಸಾವಿನ ವಿಷಯದಲ್ಲಿ ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಅಮಾಯಕ ಪೊಲೀಸ್ ಅಧಿಕಾರಿ ಮೇಲೆ ಕ್ರಮ ಕೈಗೊಂಡಿರಲ್ಲವೇ ಎಂದು ಕೇಳಿದರು. ಪೊಲೀಸ್ ಇಲಾಖೆಗೇ ಅಪಮಾನ ಮಾಡುವ ಕೆಲಸ ಮಾಡಿದಿರಲ್ಲವೇ? ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ಕೊಡಬೇಕಿತ್ತು ಎಂದು ಆಗ್ರಹಿಸಿದರು.

ಆರ್.ಸಿ,ಬಿ, ಕೆಎಸಿಎ, ಡಿಎನ್‍ಎ, ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರು ಎಂಬ ತೀರ್ಪನ್ನು ಮುಖ್ಯಮಂತ್ರಿಗಳೇ ಕೊಟ್ಟಿದ್ದಾರೆ. ಈ ಸಂಪೂರ್ಣ ಧಾರವಾಹಿಯಲ್ಲಿ ಮುಖ್ಯಮಂತ್ರಿಗಳೇ ಅಪರಾಧಿ ನಂಬರ್ 1. ಉಪ ಮುಖ್ಯಮಂತ್ರಿಗಳು ಎಡರನೇ ಅಪರಾಧಿ. ಇವರ ಹುಳುಕನ್ನು ಮುಚ್ಚಿ ಹಾಕಿಕೊಳ್ಳಲು ಭಾಷಣ ಬಿಗಿಯುತ್ತಾರೆ ಎಂದು ಟೀಕಿಸಿದರು.

ವಿಧಾನಸೌಧದ ಬಳಿ ವಿಜಯೋತ್ಸವ ಮಾಡಲು ತೀರ್ಮಾನ ಮಾಡಿದಿರಲ್ಲವೇ? ಆರ್‍ಸಿಬಿಯಲ್ಲಿ ಕರ್ನಾಟಕದ ಎಷ್ಟು ಆಟಗಾರರು ಇದ್ದಾರೆ ಎಂಬುದು ಆಗ ನಿಮಗೆ ಗೊತ್ತಿರಲಿಲ್ಲವೇ? ತಮ್ಮ ಕುಟುಂಬದ ಸದಸ್ಯರನ್ನು ಕರೆದುಕೊಂಡು ಸೆಲ್ಫಿ ಹೊಡೆಸಿಕೊಂಡಿರಲ್ಲವೇ? ಆಗ ಈ ತಂಡದಲ್ಲಿ ಎಷ್ಟು ಕನ್ನಡಿಗರಿದ್ದಾರೆ ಎಂದು ಗೊತ್ತಿರಲಿಲ್ಲವೇ? ಇವತ್ತು ಮುಖ್ಯಮಂತ್ರಿಗಳಿಗೆ ನೆನಪಾಗುತ್ತಿದೆಯೇ ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟರು. ಕಾಲ್ತುಳಿತದ 11 ಸಾವು ಸರಕಾರಿ ಪ್ರಾಯೋಜಿತ ಕೊಲೆ ಎಂದು ಅವರು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಎನ್.ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="116459"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!