ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ಬಿ.ವೈ. ವಿಜಯೇಂದ್ರ

CM, DCM wearing masks Running situation: B.Y. Vijayendra

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ದೂರುದಾರನಿಗೆ ಮಾಸ್ಕ್ ಹಾಕಿಸಿದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಇದೀಗ ತಾವೇ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (B.Y. Vijayendra) ವಿಶ್ಲೇಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗುಂಡಿಗಳಲ್ಲಿ ಏನೂ ಸಿಕ್ಕದೇ ಈಗ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಆತಂಕದಲ್ಲಿದ್ದಾರೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ದೂರುದಾರನಿಗೆ ಮುಖವಾಡ ಹಾಕುವ ನಿರ್ಧಾರ ಮಾಡಿದ್ದರು. ದೂರುದಾರನ ಮುಖವಾಡವೂ ಕಳಚಿಬಿದ್ದಿದೆ ಎಂದು ಹೇಳಿದರು.

ಧರ್ಮಸ್ಥಳದ ವಿಚಾರವಾಗಿ ಬಿಜೆಪಿ ನಮ್ಮ ಹೋರಾಟವನ್ನು ಈಗಾಗಲೇ ಘೋಷಿಸಿದೆ; ‘ಧರ್ಮ ರಕ್ಷಣೆಗಾಗಿ ಧರ್ಮ ಯುದ್ಧ’ ನಡೆಸಲಿದ್ದೇವೆ ಎಂದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ರಾಜ್ಯ ಸರಕಾರದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎಂದರೆ, ಪಾಪ ಸಿದ್ದರಾಮಯ್ಯನವರು ಯಾರೋ ಎಡಪಂಥೀಯ ಶಕ್ತಿಗಳ ಒತ್ತಡಕ್ಕೆ ಮಣಿದು ಧರ್ಮಸ್ಥಳದಲ್ಲಿ ಎಸ್‍ಐಟಿ ತನಿಖೆಗೆ ಆದೇಶಿಸಿದರು. ನಾವೂ ಅದನ್ನು ಸ್ವಾಗತ ಮಾಡಿದ್ದೆವು. ಗುಂಡಿ ಬಗೆದಂತೆ ಏನೋ ಸಿಕ್ಕುವುದಾಗಿ ವಿಧಾನಸೌಧದಲ್ಲಿ ಕುಳಿತು ಸಿದ್ದರಾಮಯ್ಯನವರು ಕನಸು ಕಾಣುತ್ತಿದ್ದರು. 15- 16 ಗುಂಡಿ ತೋಡಿದರೂ ಧರ್ಮಸ್ಥಳದಲ್ಲಿ ಏನೂ ಸಿಕ್ಕಿಲ್ಲ ಎಂದು ವಿವರಿಸಿದರು.

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅವಿವೇಕತನದಿಂದ ನಡೆದುಕೊಳ್ಳುತ್ತಿದೆ. ಆ ದೂರುದಾರ, ಆತನ ಹಿಂದಿರುವ ದುಷ್ಟ ಶಕ್ತಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರಗಳು ನಡೆಯುತ್ತಿವೆ. ಹಿಂದೂ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಏನಾದರೂ ಪೋಸ್ಟ್ ಮಾಡಿದರೆ, 24 ಗಂಟೆಯಲ್ಲಿ ಅವರನ್ನು ಬಂಧಿಸುತ್ತಾರೆ ಎಂದು ಆಕ್ಷೇಪಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ 15-20 ದಿನಗಳಿಂದ ಸರಾಗವಾಗಿ ಅಪಪ್ರಚಾರ ನಡೆಯುತ್ತಿದೆ. ಆದರೂ, ಇವರ ವಿರುದ್ಧ ತನಿಖೆ ಮಾಡುತ್ತಿಲ್ಲ; ಇದರ ವಿರುದ್ಧ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ ಎಂದು ಸ್ಪಷ್ಟಪಡಿಸಿದರು.

11 ಸಾವಿನ ಹರಿಕಥೆ ಹೇಳಿದ ಸಿಎಂ
ಚಿನ್ನಸ್ವಾಮಿ ಕ್ರೀಡಾಂಗಣದ ಆರ್.ಸಿ.ಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯ ಕುರಿತ ಉತ್ತರ ಕೊಡುವಾಗ ಮುಖ್ಯಮಂತ್ರಿಗಳು ಸದನದಲ್ಲಿ ಬಹಳ ಭಾವುಕರಾಗಿ ಆ ವಿಚಾರ ಪ್ರಸ್ತಾಪಿಸುವ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದರೆ, ಅವರು ಹರಿಕಥೆ ಹೇಳುವ ಕೆಲಸ ಮಾಡಿದರು ಎಂದು ವಿಜಯೇಂದ್ರ ಅವರು ಟೀಕಿಸಿದರು.

ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆದ ಇಂಥ ಸಾವಿನ ಅಂಕಿ ಅಂಶವನ್ನು ಅವರು ನೀಡಿದರು. ಬಿಜೆಪಿ ಸಾವಿನಲ್ಲಿ ರಾಜಕೀಯ ಮಾಡುತ್ತಿಲ್ಲ. ಕೋವಿಡ್ ವೇಳೆ ಆಮ್ಲಜನಕ ಕೊರತೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ 36 ಜನರು ಮೃತಪಟ್ಟಿದ್ದರು. ಆಗ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಕಳೆದ ಚುನಾವಣೆ ಸಂದರ್ಭದಲ್ಲಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಮೃತ 36 ಜನರ ಕುಟುಂಬದವರಿಗೆ ಸರಕಾರಿ ನೌಕರಿ ಕೊಡುವುದಾಗಿ ತಿಳಿಸಿದ್ದರು. ಸರಕಾರ ಬಂದು ಎರಡೂವರೆ ವರ್ಷ ಆದರೂ ನಿಮ್ಮ ಯೋಗ್ಯತೆಗೆ ಸರಕಾರಿ ನೌಕರಿ ಕೊಡಲು ಸಾಧ್ಯವಾಯಿತೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ಸಾವಿನಲ್ಲಿ ರಾಜಕೀಯ ಮಾಡುವವರು ಕಾಂಗ್ರೆಸ್ ಪಕ್ಷದವರು ಎಂದು ಆರೋಪಿಸಿದರು.

ಕಾಲ್ತುಳಿತ ಸಾವಿನ ವಿಷಯದಲ್ಲಿ ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಅಮಾಯಕ ಪೊಲೀಸ್ ಅಧಿಕಾರಿ ಮೇಲೆ ಕ್ರಮ ಕೈಗೊಂಡಿರಲ್ಲವೇ ಎಂದು ಕೇಳಿದರು. ಪೊಲೀಸ್ ಇಲಾಖೆಗೇ ಅಪಮಾನ ಮಾಡುವ ಕೆಲಸ ಮಾಡಿದಿರಲ್ಲವೇ? ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ಕೊಡಬೇಕಿತ್ತು ಎಂದು ಆಗ್ರಹಿಸಿದರು.

ಆರ್.ಸಿ,ಬಿ, ಕೆಎಸಿಎ, ಡಿಎನ್‍ಎ, ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರು ಎಂಬ ತೀರ್ಪನ್ನು ಮುಖ್ಯಮಂತ್ರಿಗಳೇ ಕೊಟ್ಟಿದ್ದಾರೆ. ಈ ಸಂಪೂರ್ಣ ಧಾರವಾಹಿಯಲ್ಲಿ ಮುಖ್ಯಮಂತ್ರಿಗಳೇ ಅಪರಾಧಿ ನಂಬರ್ 1. ಉಪ ಮುಖ್ಯಮಂತ್ರಿಗಳು ಎಡರನೇ ಅಪರಾಧಿ. ಇವರ ಹುಳುಕನ್ನು ಮುಚ್ಚಿ ಹಾಕಿಕೊಳ್ಳಲು ಭಾಷಣ ಬಿಗಿಯುತ್ತಾರೆ ಎಂದು ಟೀಕಿಸಿದರು.

ವಿಧಾನಸೌಧದ ಬಳಿ ವಿಜಯೋತ್ಸವ ಮಾಡಲು ತೀರ್ಮಾನ ಮಾಡಿದಿರಲ್ಲವೇ? ಆರ್‍ಸಿಬಿಯಲ್ಲಿ ಕರ್ನಾಟಕದ ಎಷ್ಟು ಆಟಗಾರರು ಇದ್ದಾರೆ ಎಂಬುದು ಆಗ ನಿಮಗೆ ಗೊತ್ತಿರಲಿಲ್ಲವೇ? ತಮ್ಮ ಕುಟುಂಬದ ಸದಸ್ಯರನ್ನು ಕರೆದುಕೊಂಡು ಸೆಲ್ಫಿ ಹೊಡೆಸಿಕೊಂಡಿರಲ್ಲವೇ? ಆಗ ಈ ತಂಡದಲ್ಲಿ ಎಷ್ಟು ಕನ್ನಡಿಗರಿದ್ದಾರೆ ಎಂದು ಗೊತ್ತಿರಲಿಲ್ಲವೇ? ಇವತ್ತು ಮುಖ್ಯಮಂತ್ರಿಗಳಿಗೆ ನೆನಪಾಗುತ್ತಿದೆಯೇ ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟರು. ಕಾಲ್ತುಳಿತದ 11 ಸಾವು ಸರಕಾರಿ ಪ್ರಾಯೋಜಿತ ಕೊಲೆ ಎಂದು ಅವರು ತಿಳಿಸಿದರು.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]