46th National Abacus Competition: Great performance by students from Doddaballapur

46ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ವಿದ್ಯಾರ್ಥಿಗಳಿಂದ ಭರ್ಜರಿ ಪ್ರದರ್ಶನ.. Video ನೋಡಿ

ಚೆನೈ: ಇಂದು ನಡೆದ 46ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಬ್ರೈನೋಬ್ರೈನ್ ದೊಡ್ಡಬಳ್ಳಾಪುರ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಅತಿ ಹೆಚ್ಚು ಪದಕವನ್ನು ಪಡೆಯುವ ಮೂಲಕ ದೇಶಾದ್ಯಂತ ದೊಡ್ಡಬಳ್ಳಾಪುರ ತಾಲೂಕಿನ ಕೀರ್ತಿ ಪಸರಿಸಿದ್ದಾರೆ.

ಎರಡು ದಿನಗಳ ಕಾಲ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯನ್ನು ಸಂಸ್ಥೆ ಮುಖ್ಯ ವ್ಯವಸ್ಥಾಪಕ ಆನಂದ್ ಸುಬ್ರಮಣ್ಯಂ ಅವರು ಉದ್ಘಾಟಿಸಿದರು.

ತಮಿಳುನಾಡಿನ ಚೆನೈ ಟ್ರೇಡ್ ಸೆಂಟರ್ ನಲ್ಲಿ ಆಯೋಜಿಸಿದ್ದ ಬ್ರೈನೋಬ್ರೈನ್ ಫೆಸ್ಟ್ 2025, 46ನೇ ರಾಷ್ಟ್ರೀಯ ಸ್ಪರ್ಧೆಯಲ್ಲಿ, ಕರ್ನಾಟಕ, ದೆಹಲಿ, ಪಶ್ವಿಮ ಬಂಗಾಳ, ಮಹಾರಾಷ್ಟ್ರ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂರು ನಿಮಿಷಗಳಲ್ಲಿ 60 ವಿವಿಧ ರೀತಿ ಮನೋ ಗಣಿತ ಲೆಕ್ಕಗಳನ್ನು ಮಾಡುವ ಮೂಲಕ ದೊಡ್ಡಬಳ್ಳಾಪುರ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಉತ್ತಮ ಸಾಧನೆ ದಾಖಲಿಸಿದ್ದಾರೆ.

ಈ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ಅಬಾಕಸ್ ಕೇಂದ್ರದ ತರಬೇತುದಾರರಾದ ವಿ.ಎ.ಪುಷ್ಪ (V.A. Pushpa) ನೇತೃತ್ವದಲ್ಲಿ 30 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅತಿ ಕಡಿಮೆ ಸಮಯದಲ್ಲಿ ಹೆಚ್ಚು ವಿವಿಧ ರೀತಿಯ ಲೆಕ್ಕಗಳನ್ನು ಮಾಡುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 16 ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರಹೊಮ್ಮಿದ್ದರೆ, 10 ವಿದ್ಯಾರ್ಥಿಗಳು ಚಿನ್ನ, 04 ವಿದ್ಯಾರ್ಥಿಗಳು ಬೆಳ್ಳಿ ಪದಕದವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಚಾಂಪಿಯನ್ಸ್: ರಜತ್.ಪಿ., ಗಗನ್ ಯಾದವ್,ಕೆ., ಯಶಸ್.ಎಸ್., ವೈಭವಿ.ಬಿ., ದಿಗಂತ್.ಎಂ., ವಿಪುಲ್.ವಿ., ನಿರೀಕ್ಷಾ.ಎಂ., ಉಮ್ಮೆ ಆಯ್ರಾ, ಆರುಶ್.ಜಿ.ಡಿ., ನಿಖಿಲ್.ವಿ.ಎಸ್., ಅಬ್ದುಲ್ ಮನನ್, ಶಿಶುಲ್.ಎಂ., ಯಶಸ್ ಗೌಡ.ಆರ್.ಎಂ., ಕ್ರಿಶ್ ಪಿ ಗೌಡ, ಆರವ್.ಜಿ.ಡಿ., ವಿರಾಂಚ್.ಜಿ.ಎಂ.

ಚಿನ್ನದ ಪದಕ: ಪೂರ್ಣಿತಾ.ಪಿ., ವಿಶ್ವಾಸ್ ಗೌಡ.ವಿ., ನೇಹಾ ಮಹಿನ್ ಸನಾ, ಭುವನ್.ಇ., ದೀಪಕ್ ಐ.ಪಿ., ಧಾನ್ವಿಕ್ ಅಭಿರಾಮ್, ಡಿಂಪಲ್.ಜಿ.ಆರ್., ಪರಿಕ್ಷಿತ್.ಪಿ.ಎಂ., ಪೂರ್ವಿಕ್ ಗೌಡ.ವಿ., ದೀಪಕ್.ಎಂ.ಹೆಚ್.

ಬೆಳ್ಳಿ ಪದಕ: ಅಬ್ದುಲ್ ಕಾಲ್ಹಿಕ್, ಚಿನ್ಮಯ್.ಜಿ.ಎನ್., ಪೂರ್ವಿತ್.ಎಸ್., ಸೇಜಲ್.ಕೆ.

ವಿಜೇತರಿಗೆ ಬ್ರೈನೋ ಬ್ರೈನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ, ತಾಂತ್ರಿಕ ನಿರ್ದೇಶಕ ಅರುಳ್ ಸುಬ್ರಹ್ಮಣ್ಯಂ ಟ್ರೋಫಿ, ಪದಕಗಳನ್ನು ವಿತರಿಸಿದರು‌.

ಇದೇ ವೇಳೆ ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರಕ್ಕೆ ಸತತ ನಾಲ್ಕನೇ ಬಾರಿಗೆ ಬೆಸ್ಟ್ ಫ್ಯಾಕಲ್ಟಿ ಅವಾರ್ಡ್, ಬೆಸ್ಟ್ ಫ್ರಾಂಚೈಸಿ ಅವಾರ್ಡ್ ನೀಡಲಾಗಿದ್ದು, ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದ ಮುಖ್ಯಸ್ಥರಾದ ವಿ.ಎ.ಪುಷ್ಪ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಬ್ರೈನೋ ಬ್ರೈನ್ ಸಂಸ್ಥೆಯ ತಾಂತ್ರಿಕ ವ್ಯವಸ್ಥಾಪಕ ಅರುಳ್ ಸುಬ್ರಮಣ್ಯಂ, ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಲ್ ಸೇರಿದಂತೆ ವಿವಿಧ ರಾಜ್ಯಗಳ ತರಬೇತಿ ಕೇಂದ್ರದ ಮುಖ್ಯಸ್ಥರು ಭಾಗವಹಿಸಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!