46th National Abacus Competition: Great performance by students from Doddaballapur

46ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ವಿದ್ಯಾರ್ಥಿಗಳಿಂದ ಭರ್ಜರಿ ಪ್ರದರ್ಶನ.. Video ನೋಡಿ

ಚೆನೈ: ಇಂದು ನಡೆದ 46ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಬ್ರೈನೋಬ್ರೈನ್ ದೊಡ್ಡಬಳ್ಳಾಪುರ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಅತಿ ಹೆಚ್ಚು ಪದಕವನ್ನು ಪಡೆಯುವ ಮೂಲಕ ದೇಶಾದ್ಯಂತ ದೊಡ್ಡಬಳ್ಳಾಪುರ ತಾಲೂಕಿನ ಕೀರ್ತಿ ಪಸರಿಸಿದ್ದಾರೆ.

ಎರಡು ದಿನಗಳ ಕಾಲ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯನ್ನು ಸಂಸ್ಥೆ ಮುಖ್ಯ ವ್ಯವಸ್ಥಾಪಕ ಆನಂದ್ ಸುಬ್ರಮಣ್ಯಂ ಅವರು ಉದ್ಘಾಟಿಸಿದರು.

ತಮಿಳುನಾಡಿನ ಚೆನೈ ಟ್ರೇಡ್ ಸೆಂಟರ್ ನಲ್ಲಿ ಆಯೋಜಿಸಿದ್ದ ಬ್ರೈನೋಬ್ರೈನ್ ಫೆಸ್ಟ್ 2025, 46ನೇ ರಾಷ್ಟ್ರೀಯ ಸ್ಪರ್ಧೆಯಲ್ಲಿ, ಕರ್ನಾಟಕ, ದೆಹಲಿ, ಪಶ್ವಿಮ ಬಂಗಾಳ, ಮಹಾರಾಷ್ಟ್ರ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂರು ನಿಮಿಷಗಳಲ್ಲಿ 60 ವಿವಿಧ ರೀತಿ ಮನೋ ಗಣಿತ ಲೆಕ್ಕಗಳನ್ನು ಮಾಡುವ ಮೂಲಕ ದೊಡ್ಡಬಳ್ಳಾಪುರ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಉತ್ತಮ ಸಾಧನೆ ದಾಖಲಿಸಿದ್ದಾರೆ.

ಈ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ಅಬಾಕಸ್ ಕೇಂದ್ರದ ತರಬೇತುದಾರರಾದ ವಿ.ಎ.ಪುಷ್ಪ (V.A. Pushpa) ನೇತೃತ್ವದಲ್ಲಿ 30 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅತಿ ಕಡಿಮೆ ಸಮಯದಲ್ಲಿ ಹೆಚ್ಚು ವಿವಿಧ ರೀತಿಯ ಲೆಕ್ಕಗಳನ್ನು ಮಾಡುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 16 ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರಹೊಮ್ಮಿದ್ದರೆ, 10 ವಿದ್ಯಾರ್ಥಿಗಳು ಚಿನ್ನ, 04 ವಿದ್ಯಾರ್ಥಿಗಳು ಬೆಳ್ಳಿ ಪದಕದವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಚಾಂಪಿಯನ್ಸ್: ರಜತ್.ಪಿ., ಗಗನ್ ಯಾದವ್,ಕೆ., ಯಶಸ್.ಎಸ್., ವೈಭವಿ.ಬಿ., ದಿಗಂತ್.ಎಂ., ವಿಪುಲ್.ವಿ., ನಿರೀಕ್ಷಾ.ಎಂ., ಉಮ್ಮೆ ಆಯ್ರಾ, ಆರುಶ್.ಜಿ.ಡಿ., ನಿಖಿಲ್.ವಿ.ಎಸ್., ಅಬ್ದುಲ್ ಮನನ್, ಶಿಶುಲ್.ಎಂ., ಯಶಸ್ ಗೌಡ.ಆರ್.ಎಂ., ಕ್ರಿಶ್ ಪಿ ಗೌಡ, ಆರವ್.ಜಿ.ಡಿ., ವಿರಾಂಚ್.ಜಿ.ಎಂ.

ಚಿನ್ನದ ಪದಕ: ಪೂರ್ಣಿತಾ.ಪಿ., ವಿಶ್ವಾಸ್ ಗೌಡ.ವಿ., ನೇಹಾ ಮಹಿನ್ ಸನಾ, ಭುವನ್.ಇ., ದೀಪಕ್ ಐ.ಪಿ., ಧಾನ್ವಿಕ್ ಅಭಿರಾಮ್, ಡಿಂಪಲ್.ಜಿ.ಆರ್., ಪರಿಕ್ಷಿತ್.ಪಿ.ಎಂ., ಪೂರ್ವಿಕ್ ಗೌಡ.ವಿ., ದೀಪಕ್.ಎಂ.ಹೆಚ್.

ಬೆಳ್ಳಿ ಪದಕ: ಅಬ್ದುಲ್ ಕಾಲ್ಹಿಕ್, ಚಿನ್ಮಯ್.ಜಿ.ಎನ್., ಪೂರ್ವಿತ್.ಎಸ್., ಸೇಜಲ್.ಕೆ.

ವಿಜೇತರಿಗೆ ಬ್ರೈನೋ ಬ್ರೈನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ, ತಾಂತ್ರಿಕ ನಿರ್ದೇಶಕ ಅರುಳ್ ಸುಬ್ರಹ್ಮಣ್ಯಂ ಟ್ರೋಫಿ, ಪದಕಗಳನ್ನು ವಿತರಿಸಿದರು‌.

ಇದೇ ವೇಳೆ ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರಕ್ಕೆ ಸತತ ನಾಲ್ಕನೇ ಬಾರಿಗೆ ಬೆಸ್ಟ್ ಫ್ಯಾಕಲ್ಟಿ ಅವಾರ್ಡ್, ಬೆಸ್ಟ್ ಫ್ರಾಂಚೈಸಿ ಅವಾರ್ಡ್ ನೀಡಲಾಗಿದ್ದು, ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದ ಮುಖ್ಯಸ್ಥರಾದ ವಿ.ಎ.ಪುಷ್ಪ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಬ್ರೈನೋ ಬ್ರೈನ್ ಸಂಸ್ಥೆಯ ತಾಂತ್ರಿಕ ವ್ಯವಸ್ಥಾಪಕ ಅರುಳ್ ಸುಬ್ರಮಣ್ಯಂ, ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಲ್ ಸೇರಿದಂತೆ ವಿವಿಧ ರಾಜ್ಯಗಳ ತರಬೇತಿ ಕೇಂದ್ರದ ಮುಖ್ಯಸ್ಥರು ಭಾಗವಹಿಸಿದ್ದರು.

ರಾಜಕೀಯ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="113069"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!