ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆಗೆ ಆಕ್ಷೇಪ

Dasara inauguration: Objection to Banu Mushtaq's choice

ಬೆಂಗಳೂರು: ಇತಿಹಾಸ ಪ್ರಸಿದ್ಧ ಮೈಸೂರು ದಸರಾ (Dasara inauguration) ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಆದರೆ ಈ ಬಾರಿಯ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ (Banu mustag) ಅವರನ್ನು ಆಯ್ಕೆ ಮಾಡಿರುವುದಕ್ಕೆ ಸರಕಾರದ ವಿರುದ್ಧ ಬಿಜೆಪಿ (BJP) ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಸಂಸದ ಬಸನಗೌಡ ಪಾಟೀಲ ಯತ್ನಾಲ್ ಆಕ್ಷೇಪ ವ್ಯಕ್ತಪಡಿಸಿದ ಪ್ರಮುಖರಾಗಿದ್ದು, ಬಾನು ಮುಷ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ನಾನು ವೈಯಕ್ತಿಕವಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗುವುದರ ಮೂಲಕ ದಸರಾ ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿಬರೆದುಕೊಂಡಿದಾರೆ. ಇಸ್ಲಾಂ ಧರ್ಮದ ಕುರಿತು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಮೂರ್ತಿ ಪೂಜೆಯನ್ನು ಧಿಕ್ಕರಿಸುವ ಇಸ್ಲಾಂ, ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ? ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾ ರೆಯೇ? ಈ ಬಗ್ಗೆ ಮೊದಲು ಬಾನು ಮುಸ್ತಾಕ್ ಅವರು ಸ್ಪಷ್ಟನೆ ನೀಡುವುದು ಅಗತ್ಯವಿದೆ. ಅವರು ಈ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡದೆ ದಸರಾ ಉದ್ಘಾಟಿಸುವುದು ಸರಿಯಲ್ಲ.

ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ಸಮಂಜಸವಾಗಿದೆ ಎಂದು ಸಲಹೆ ನೀಡಿದ್ದಾರೆ.

ಇನ್ನೂ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಸುದ್ದಿಗಾರರೊಂದಿಗೆ ಮಾತನಾಡಿ, ಧಾರ್ಮಿಕ ಆಚರಣೆಗೂ ಬಾನು ಮುಷ್ತಾಕ್ ಅವರಿಗೆ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ.

ದಸರಾ ಉದ್ಘಾಟಕರ ಹೆಸರಿನ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿರುವ ಅವರು, ದಸರಾ ನಾಡ ಹಬ್ಬ ಜಾತ್ಯಾತೀತದ ಪ್ರತೀಕ ಅಲ್ಲ ಧಾರ್ಮಿಕ ಆಚರಣೆ, ಬಾನು ಮುಷ್ತಾಕ್ ರವರ ಧರ್ಮ ಆಚರಣೆ ನಿಮ್ಮ ವೈಯುಕ್ತಿಕ. ದಸರಾ ಧಾರ್ಮಿಕತೆಯ ಪ್ರತೀಕ, ನಮ್ಮ ಹಬ್ಬ, ದುರ್ಗಾ ಪೂಜೆ, ನವರಾತ್ರಿ, ಏನು ಬೇಕಾದರೂ ಕರೆಯಿರಿ, ದಸರಾ ವಿಜಯನಗರ ಸಾಮ್ರಾಜ್ಯ ಪತನವಾದ ನಂತರ ಯದುವಂಶ ಮುಂದುವರಿಸಿಕೊಂಡು ಬಂದಿದೆ. ಇದು ಜಾತ್ಯಾತೀಶ ಅಲ್ಲ ನಮ್ಮ ಧಾರ್ಮಿಕ ಆಚರಣೆ ಎಂದು ಪ್ರತಿಪಾದಿಸಿದರು.

ಬಾನು ಮುಸ್ತಾಕ್ ಅವರಿಗೆ ತಾಯಿ ಚಾಮುಂಡಿಯ ಬಗ್ಗೆ ನಂಬಿಕೆ ಇದೆಯಾ? ಭಕ್ತೆಯಾಗಿ ಎಲ್ಲಾದರೂ ತೋರಿಸಿದ್ದಾರಾ?. ನಾಡಿನ ಅಧಿದೇವತೆ ಚಾಮುಂಡಿ, ದಸರಾ ವನ್ನು ಭಕ್ತಿ ಭಾವದಿಂದ ಮಾಡುವುದು. ಇದು ಸರಕಾರಿ ಕಾರ್ಯಕ್ರಮವಲ್ಲ, ಇದಕ್ಕೆ ಬಾನು ಮುಷ್ತಾಕ್ ಸೂಕ್ತವಾದ ವ್ಯಕ್ತಿ ಆಗುತ್ತಾರಾ? ಎಂದು ಪ್ರಶ್ನಿಸಿದರು.

ಬಾನು ಮುಷ್ತಾಕ್ ಅವರನ್ನು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿ ಅಪಾರ ಗೌರವ ಕೊಡಿ. ಆದರೆ ಧಾರ್ಮಿಕ ಆಚರಣೆಗೂ ಬಾನು ಮುಷ್ತಾಕ್ ಅವರಿಗೆ ಏನು ಸಂಬಂಧ?, ಬಾನು ಮುಷ್ತಾಕ್ ಮುಸ್ಲಿಂ ಧರ್ಮದವರು. ಅಲ್ಲಾಹು ಅವರನ್ನು ಹೊರತುಪಡಿಸಿ ಬೇರೆ ಯಾರೂ ದೇವರಿಲ್ಲ ಎಂದು ಇಸ್ಲಾಂ ಧರ್ಮದಲ್ಲಿ ಹೇಳುತ್ತದೆ. ಹಾಗಾದರೆ ಚಾಮುಂಡಿ ದೇವರನ್ನು ನಂಬುತ್ತೀರಾ?. ಸಿದ್ದರಾಮಯ್ಯ ಅನಿಷ್ಟ ಮಹಿಷ ದಸರಾ ಉದ್ಘಾಟನೆ ಮಾಡಿದ ಪರಂಪರೆ ನಿಮ್ಮದು ಎಂದು ಹರಿಹಾಯ್ದರು.

ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದಾಗ ವಿರೋಧ ಮಾಡಿದ್ವಾ..?

ಬಿಜೆಪಿ ಮುಖಂಡರ ಆಕ್ಷೇಪದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಸಂತೋಷ್ ಲಾಡ್, ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಕರೆಯಬಾರದೆಂದು ಸಂವಿಧಾನದಲ್ಲಿ ಇದೆಯೇ?. ಎಲ್ಲದಕ್ಕೂ ಆಕ್ಷೇಪ ಮಾಡ್ತಾ ಹೋದ್ರೆ ಏನು ಮಾಡಬೇಕು? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಅತೀ ಹೆಚ್ಚು ದೇಣಿಗೆ ನೀಡಿದವರು ಯಾರು? ಅಜೀಂ ಪ್ರೇಮ್ ಜಿ ಫೌಂಡೇಶನ್‌ನಿಂದ ಎರಡುವರೆ ಲಕ್ಷ ಕೋಟಿ ಹಣ ನೀಡಿದ್ದಾರೆ. ಅವರು ಯಾವ ಸಮಾಜದವರು. ಬಡವರ ಅನುಕೂಲಕ್ಕೆ ಹಣ ಕೊಟ್ಟವರು ಯಾವ ಸಮಾಜದವರು. ಸಂವಿಧಾನದಲ್ಲಿ ಯಾರನ್ನೂ ಮಾಡ ಬಾರದು ಎಂದಿಲ್ಲ, ಸರಕಾರದ ತೀರ್ಮಾನವನ್ನು ಎಲ್ಲರೂ ಸ್ವಾಗತ ಮಾಡಬೇಕು. ಈ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂಬುದು ನನ್ನ ಅಭಿಪ್ರಾಯ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿಗಳನ್ನು ಉದ್ಘಾಟನೆಗೆ ಕರೆಸುತ್ತಾರೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅಬ್ದುಲ್ ಕಾಲಂ ರಾಷ್ಟ್ರಪತಿಯಾಗಿದ್ದಾಗ ನಾವು ವಿರೋಧ ಮಾಡಿದ್ದಾ? ಕಲಾಂ ಹಿಂದೂ ವಿರೋಧಿಯಲ್ಲ ಎಂದು ಸಮರ್ಥನೆ ಮಾಡ್ತಾರೆ. ಬಾನು ಮುಷ್ತಾಕ್ ಹೇಗೆ ಹಿಂದೂ ವಿರೋಧಿಯಾಗ್ತಾರೆ? ಎಂದರು.

ರಾಜಕೀಯ

ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

2028 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಯಾರು ಮುಖ್ಯಮಂತ್ರಿಯಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120947"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]