Gauri celebrations, preparations for Ganesha are in full swing.

ಗುಡ್ಮಾರ್ನಿಂಗ್ ನ್ಯೂಸ್: ಗೌರಿ ಆಚರಣೆ, ಗಣೇಶನಿಗೆ ಸಡಗರದ ಸಿದ್ಧತೆ.. ಪೂಜಾ ಸಮಯದ ಮಾಹಿತಿ ಇಲ್ಲಿದೆ

ದೊಡ್ಡಬಳ್ಳಾಪುರ; ಮೊದಲ ದಿನ ಅಮ್ಮ ಗೌರಮ್ಮನನ್ನು ಪೂಜಿಸಿದರೆ, ಮರುದಿನ ಅಂದರೆ ಬುಧವಾರ ಗೌರಿಪುತ್ರ, ವಿಘ್ನ ನಿವಾರಕ ಗಣೇಶನ (Ganesha) ಪೂಜೆ.

ಸ್ವರ್ಣಗೌರಿ ವ್ರತಾಚರಣೆ ಮಂಗಳವಾರ ಬಂದಿರುವುದು ಹೆಚ್ಚು ಶ್ರೇಷ್ಠ. ಹೀಗಾಗಿ, ಸಂಪ್ರದಾಯವುಳ್ಳವರು ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ಮನೆ ಮಂದಿಯೆಲ್ಲಾ ಕೂಡಿ ಹಬ್ಬವನ್ನು ಭಕ್ತಿಯಿಂದ ಆಚರಿಸಿದರು.

ಮುಂಜಾನೆಯೇ ಎದ್ದು ಮಡಿಯುಟ್ಟ ಹೆಂಗಳೆಯರು ಮನೆ ಬಾಗಿಲಿಗೆ ಬಣ್ಣ ಬಣ್ಣಗಳಿಂದ ತುಂಬಿದ ಚಂದದ ರಂಗವಲ್ಲಿ ಹಾಕಿ, ತಳಿರು ತೋರಣಗಳನ್ನು ಕಟ್ಟಿ ಸಿಂಗರಿಸಿದರು. ಮನೆಯ ಮಂಟಪದಲ್ಲಿ ಗೌರಿಯನ್ನು ಕೂರಿಸಿ ಹೂಗಳಿಂದ ಅಲಂಕರಿಸಿ ಬಾಗಿನ ಹಾಗೂ ಹಣ್ಣುಗಳನ್ನಿಟ್ಟು ಪೂಜೆ ನೆರವೇರಿಸಿದರು.

ಹೋಳಿಗೆ, ಪಾಯಸ ಸೇರಿದಂತೆ ನಾನಾ ಖಾದ್ಯಗಳನ್ನು ಸಿದ್ಧಪಡಿಸಿ ದೇವಿಗೆ ನೈವೇದ್ಯ ಮಾಡಿದರು. ತವರಿನಿಂದ ಬಂದ ಬಾಗಿನವನ್ನು ದೇವರ ಮುಂದಿಟ್ಟು ಪೂಜಿಸಿ ಮುತೈದೆಯರಿಗೆ ಅರಿಶಿನ, ಕುಂಕುಮ ನೀಡಿದರು. ಮನೆಯವರೊಟ್ಟಿಗೆ ಊಟ ಮಾಡಿ ಸಂಭ್ರಮಿಸಿದರು.

ಝರಿ ಸೀರೆಯುಟ್ಟ ಹೆಂಗೆಳೆಯರು ಮನೆ ಮನೆಗಳಿಗೆ ಅರಿಶಿನ ಕುಂಕುಮಕ್ಕೂ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪುಟ್ಟ ಹೆಣ್ಣು ಮಕ್ಕಳು ಹೊಸ ಉಡುಗೆ ತೊಟ್ಟು ಸಂತಸ ಪಡುತ್ತಿದ್ದರು.

ದೇವಾಲಯಗಳಲ್ಲೂ ವಿಶೇಷ ಪೂಜೆ: ಗೌರಿಹಬ್ಬದ ಅಂಗವಾಗಿ ನಾನಾ ದೇವಿ ದೇವಾಲಯಗಳು ಹಾಗೂ ಇತರೆ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮತ್ತು ಪೂಜೆ ನೆರವೇರಿಸಲಾಗಿತ್ತು. ಹೀಗಾಗಿ, ಭಕ್ತರು ಬೆಳಗ್ಗೆಯಿಂದಲೇ ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದರು.

ತವರು ಮನೆಯ ಬಾಗಿನ: ವಿವಾಹಿತ ಮಹಿಳೆಯರಿಗೆ ತಮ್ಮ ತವರು ಮನೆಯಿಂದ ಬಾಗಿನ ತಂದು ನೀಡುತ್ತಿದ್ದ ದೃಶ್ಯವೂ ನಮ್ಮ ಸಂಸ್ಕೃತಿಯ ಪ್ರತೀಕವಾಗಿತ್ತು.

ಗಣೇಶ ಹಬ್ಬ

ಹಲವರು ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಮನೆ ಮನೆಗಳಲ್ಲಿ ಕೆಲವರು ಗಣಪನನ್ನು ಪ್ರತಿಷ್ಠಾಪಿಸಿದರೆ, ರಸ್ತೆಗೊಂದರಂತೆ ಗಣೇಶೋತ್ಸವ ಸಮಿತಿಗಳಿಂದ ವಿಶೇಷವಾಗಿ ಗಣೇಶನನ್ನು ಪ್ರತಿಷ್ಠಾಪಿಸಿ ಇಡೀ ಬಡಾವಣೆಯ ಜನರನ್ನು ಸೇರಿಸಿಕೊಂಡು ಹಬ್ಬ ಆಚರಿಸಲು ಅಣಿಯಾಗಿದ್ದಾರೆ.

ಹಲವೆಡೆ ವಿಶೇಷ ವೇದಿಕೆಯನ್ನು ನಿರ್ಮಿಸಲಾಗುತ್ತಿತ್ತು. ಮಣ್ಣಿನ ಗಣಪತಿ, ಪೇಪರ್ ಗಣಪತಿ ಸೇರಿದಂತೆ ಹಲವರು ಪರಿಸರ ಸ್ನೇಹಿ ಗಣಪನನ್ನು ಕೂರಿಸಲು ಮೂರ್ತಿಗಳನ್ನು ಖರೀದಿಸಿ ಕೊಂಡೊಯ್ಯುತ್ತಿದ್ದರು.

ಪ್ರತಿಷ್ಠಾಪನೆಗೆ ಶುಭಕಾಲ: ಭಾದ್ರಪದ ಶುಕ್ಲಪಕ್ಷ ಚತುರ್ಥಿ ಆ. 27ರ ಬುಧವಾರ ಶ್ರೀ ವರಸಿದ್ಧಿ ವಿನಾಯಕ ವ್ರತಾಚರಣೆ.

ಬೆಳಗ್ಗೆ 4:30 ರಿಂದ 5:30
ಬೆಳಗ್ಗೆ 09:00 ರಿಂದ 09:45
ಬೆಳಿಗ್ಗೆ 10:00 ರಿಂದ 11:45 ಸಂಜೆ 04:30ರಿಂದ 06:00 ಗಂಟೆಯೊಳಗೆ ಪ್ರತಿಷ್ಠಾಪನೆಗೆ ಶುಭಕಾಲವಾಗಿದೆ.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!