ಗುಡ್ಮಾರ್ನಿಂಗ್ ನ್ಯೂಸ್: ಗೌರಿ ಆಚರಣೆ, ಗಣೇಶನಿಗೆ ಸಡಗರದ ಸಿದ್ಧತೆ.. ಪೂಜಾ ಸಮಯದ ಮಾಹಿತಿ ಇಲ್ಲಿದೆ

Gauri celebrations, preparations for Ganesha are in full swing.

ದೊಡ್ಡಬಳ್ಳಾಪುರ; ಮೊದಲ ದಿನ ಅಮ್ಮ ಗೌರಮ್ಮನನ್ನು ಪೂಜಿಸಿದರೆ, ಮರುದಿನ ಅಂದರೆ ಬುಧವಾರ ಗೌರಿಪುತ್ರ, ವಿಘ್ನ ನಿವಾರಕ ಗಣೇಶನ (Ganesha) ಪೂಜೆ.

ಸ್ವರ್ಣಗೌರಿ ವ್ರತಾಚರಣೆ ಮಂಗಳವಾರ ಬಂದಿರುವುದು ಹೆಚ್ಚು ಶ್ರೇಷ್ಠ. ಹೀಗಾಗಿ, ಸಂಪ್ರದಾಯವುಳ್ಳವರು ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ಮನೆ ಮಂದಿಯೆಲ್ಲಾ ಕೂಡಿ ಹಬ್ಬವನ್ನು ಭಕ್ತಿಯಿಂದ ಆಚರಿಸಿದರು.

ಗುಡ್ಮಾರ್ನಿಂಗ್ ನ್ಯೂಸ್: ಗೌರಿ ಆಚರಣೆ, ಗಣೇಶನಿಗೆ ಸಡಗರದ ಸಿದ್ಧತೆ.. ಪೂಜಾ ಸಮಯದ ಮಾಹಿತಿ ಇಲ್ಲಿದೆ

ಮುಂಜಾನೆಯೇ ಎದ್ದು ಮಡಿಯುಟ್ಟ ಹೆಂಗಳೆಯರು ಮನೆ ಬಾಗಿಲಿಗೆ ಬಣ್ಣ ಬಣ್ಣಗಳಿಂದ ತುಂಬಿದ ಚಂದದ ರಂಗವಲ್ಲಿ ಹಾಕಿ, ತಳಿರು ತೋರಣಗಳನ್ನು ಕಟ್ಟಿ ಸಿಂಗರಿಸಿದರು. ಮನೆಯ ಮಂಟಪದಲ್ಲಿ ಗೌರಿಯನ್ನು ಕೂರಿಸಿ ಹೂಗಳಿಂದ ಅಲಂಕರಿಸಿ ಬಾಗಿನ ಹಾಗೂ ಹಣ್ಣುಗಳನ್ನಿಟ್ಟು ಪೂಜೆ ನೆರವೇರಿಸಿದರು.

ಹೋಳಿಗೆ, ಪಾಯಸ ಸೇರಿದಂತೆ ನಾನಾ ಖಾದ್ಯಗಳನ್ನು ಸಿದ್ಧಪಡಿಸಿ ದೇವಿಗೆ ನೈವೇದ್ಯ ಮಾಡಿದರು. ತವರಿನಿಂದ ಬಂದ ಬಾಗಿನವನ್ನು ದೇವರ ಮುಂದಿಟ್ಟು ಪೂಜಿಸಿ ಮುತೈದೆಯರಿಗೆ ಅರಿಶಿನ, ಕುಂಕುಮ ನೀಡಿದರು. ಮನೆಯವರೊಟ್ಟಿಗೆ ಊಟ ಮಾಡಿ ಸಂಭ್ರಮಿಸಿದರು.

ಝರಿ ಸೀರೆಯುಟ್ಟ ಹೆಂಗೆಳೆಯರು ಮನೆ ಮನೆಗಳಿಗೆ ಅರಿಶಿನ ಕುಂಕುಮಕ್ಕೂ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪುಟ್ಟ ಹೆಣ್ಣು ಮಕ್ಕಳು ಹೊಸ ಉಡುಗೆ ತೊಟ್ಟು ಸಂತಸ ಪಡುತ್ತಿದ್ದರು.

ದೇವಾಲಯಗಳಲ್ಲೂ ವಿಶೇಷ ಪೂಜೆ: ಗೌರಿಹಬ್ಬದ ಅಂಗವಾಗಿ ನಾನಾ ದೇವಿ ದೇವಾಲಯಗಳು ಹಾಗೂ ಇತರೆ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮತ್ತು ಪೂಜೆ ನೆರವೇರಿಸಲಾಗಿತ್ತು. ಹೀಗಾಗಿ, ಭಕ್ತರು ಬೆಳಗ್ಗೆಯಿಂದಲೇ ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದರು.

ತವರು ಮನೆಯ ಬಾಗಿನ: ವಿವಾಹಿತ ಮಹಿಳೆಯರಿಗೆ ತಮ್ಮ ತವರು ಮನೆಯಿಂದ ಬಾಗಿನ ತಂದು ನೀಡುತ್ತಿದ್ದ ದೃಶ್ಯವೂ ನಮ್ಮ ಸಂಸ್ಕೃತಿಯ ಪ್ರತೀಕವಾಗಿತ್ತು.

ಗಣೇಶ ಹಬ್ಬ

ಹಲವರು ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಮನೆ ಮನೆಗಳಲ್ಲಿ ಕೆಲವರು ಗಣಪನನ್ನು ಪ್ರತಿಷ್ಠಾಪಿಸಿದರೆ, ರಸ್ತೆಗೊಂದರಂತೆ ಗಣೇಶೋತ್ಸವ ಸಮಿತಿಗಳಿಂದ ವಿಶೇಷವಾಗಿ ಗಣೇಶನನ್ನು ಪ್ರತಿಷ್ಠಾಪಿಸಿ ಇಡೀ ಬಡಾವಣೆಯ ಜನರನ್ನು ಸೇರಿಸಿಕೊಂಡು ಹಬ್ಬ ಆಚರಿಸಲು ಅಣಿಯಾಗಿದ್ದಾರೆ.

ಹಲವೆಡೆ ವಿಶೇಷ ವೇದಿಕೆಯನ್ನು ನಿರ್ಮಿಸಲಾಗುತ್ತಿತ್ತು. ಮಣ್ಣಿನ ಗಣಪತಿ, ಪೇಪರ್ ಗಣಪತಿ ಸೇರಿದಂತೆ ಹಲವರು ಪರಿಸರ ಸ್ನೇಹಿ ಗಣಪನನ್ನು ಕೂರಿಸಲು ಮೂರ್ತಿಗಳನ್ನು ಖರೀದಿಸಿ ಕೊಂಡೊಯ್ಯುತ್ತಿದ್ದರು.

ಪ್ರತಿಷ್ಠಾಪನೆಗೆ ಶುಭಕಾಲ: ಭಾದ್ರಪದ ಶುಕ್ಲಪಕ್ಷ ಚತುರ್ಥಿ ಆ. 27ರ ಬುಧವಾರ ಶ್ರೀ ವರಸಿದ್ಧಿ ವಿನಾಯಕ ವ್ರತಾಚರಣೆ.

ಬೆಳಗ್ಗೆ 4:30 ರಿಂದ 5:30
ಬೆಳಗ್ಗೆ 09:00 ರಿಂದ 09:45
ಬೆಳಿಗ್ಗೆ 10:00 ರಿಂದ 11:45 ಸಂಜೆ 04:30ರಿಂದ 06:00 ಗಂಟೆಯೊಳಗೆ ಪ್ರತಿಷ್ಠಾಪನೆಗೆ ಶುಭಕಾಲವಾಗಿದೆ.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]