Enough with the hit and run, put the documents against me before the people: DK Shivakumar challenges H.D. Kumaraswamy

ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ ಮಾಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಗುಡುಗಿದರು.

ನಗರದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ರಚನೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿದರಲ್ಲದೆ ಕೆಲವು ಶಕ್ತಿಗಳ ಒತ್ತಡಕ್ಕೆ ಮಣಿದು ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಕಿಡಿಕಾರಿದರು.

ಧರ್ಮಸ್ಥಳದ ವಿಚಾರದಲ್ಲಿ ಈ ಸರ್ಕಾರ ನಡೆದುಕೊಂಡಿದ್ದು ಸರಿಯಲ್ಲ, ಅದಕ್ಕೆ ಮುಂದಿನ ದಿನಗಳಲ್ಲಿ ಶ್ರೀ ಮಂಜುನಾಥ ಸ್ವಾಮಿ ಶಿಕ್ಷೆ ನೀಡುವುದು ಖಚಿತ. ಆರಂಭಿಕ ಹಂತದಿಂದ ಕೂಡ ಸರ್ಕಾರ ಸರಿಯಾಗಿ ನಡೆದುಕೊಂಡಿಲ್ಲ. ಇಲ್ಲಿ ರಾಜಕೀಯ ಅಥವಾ ಧರ್ಮವನ್ನು ತರುವುದಿಲ್ಲ. ಆದರೆ ಕ್ಷೇತ್ರದ ಬಗ್ಗೆ ಸರ್ಕಾರ ನಡೆದುಕೊಂಡ ರೀತಿ ಮಾತ್ರ ಅಪಮಾನ ಉಂಟು ಮಾಡುವ ರೀತಿಯಲ್ಲಿ ನಡೆದುಕೊಂಡಿದೆ. ಇದು ಅಕ್ಷಮ್ಯ ಎಂದು ಅವರು ಹೇಳಿದರು.

ಆರಂಭದಿಂದಲೂ ತನಿಖೆಯ ನಾಟಕ ನಡೆದಿದೆ. ಸಿ.ಎಸ್. ದ್ವಾರಕಾನಾಥ್ ಎನ್ನುವ ವ್ಯಕ್ತಿ ಮೊದಲು ದೂರು ನೀಡಿರುತ್ತಾರೆ. ಅವರು ದೂರು ನೀಡಿದ ತಕ್ಷಣ ಮುಖ್ಯಮಂತ್ರಿಗಳು ಅತ್ಯಂತ ವೇಗವಾಗಿ ಕ್ರಮ ಕೈಗೊಂಡು ಎಸ್ ಐಟಿ ರಚನೆಗೆ ಆದೇಶ ಮಾಡುತ್ತಾರೆ. ಇದರ ಹಿಂದೆ ಕೆಲ ಎಡಪಂಥೀಯ ಶಕ್ತಿಗಳ ಹುನ್ನಾರದ ಜತೆಗೆ ಕಾಣದ ಶಕ್ತಿಗಳ ಬಹುದೊಡ್ಡ ಕುತಂತ್ರ ಅಡಗಿದೆ ಎಂದು ಅವರು ಆಪಾದಿಸಿದರು.

ಬಾನು ಮುಷ್ತಾಕ್ ವಿವಾದ ವಿಚಾರ

ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಈ ವಿಚಾರದಲ್ಲಿ ಕೆಲವರು ಉದ್ಧಟತನ‌ ತೋರಿಸುತ್ತಿದ್ದಾರೆ. ಅದು ಬೇಡ ಎಂದು ಹೆಚ್.ಡಿ.ಕುಮಾರಸ್ವಾಮಿ ನೇರವಾಗಿ ಹೇಳಿದರು.

ತಾಯಿಯ ಮೆರವಣಿಗೆ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ಇದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಕೆಲವರು ಈ ಬಗ್ಗೆ ಬಹಳ ಉದ್ಧಟತನ‌ದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದು ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ಬೇಡ, ಬೇಕಾಗಿಯೂ ಇಲ್ಲ. ಬಾನು ಮುಷ್ತಾಕ್ ಅವರಿಂದ ಪೂಜೆ‌ ಮಾಡಿಸುವುದು ಬೇರೆ. ಆದರೆ ಚಾಮುಂಡೇಶ್ವರಿ ದೇಗುಲ ಹಿಂದೂಗಳ ಆಸ್ತಿಯಲ್ಲ ಅಂತಾರೆ. ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ಈ ರೀತಿ ಅಪಚಾರ ಸರಿಯಲ್ಲ. ಇದು ಕಾಂಗ್ರೆಸ್ ಸರ್ಕಾರಕ್ಕೆ ಆಪತ್ತು ತರಲಿದೆ ಎಂಬುದನ್ನು ಮರೆಯಬಾರದು ಎಂದು ಅವರು ಕಟು ಶಬ್ದಗಳಲ್ಲಿ ಹೇಳಿದರು.

ರಾಜ್ಯದ ಡಿಸಿಎಂ ಆರ್ ಎಸ್ ಎಸ್ ಗೀತೆ ಹಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು; ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅವರು ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ್ದಾರೆ. ತಮಾಷೆಗೂ ಆ ರೀತಿ ಹೇಳುವುದನ್ನು ಕಾಂಗ್ರೆಸ್ ನಾಯಕರು ಒಪ್ಪಲ್ಲ. ಈಗ ಅವರಿಗೆ ಕ್ಷಮೆ ಕೇಳುವ ಪರಿಸ್ಥಿತಿ ಎದುರಾಗಿದೆ ಎಂದರು ಕೇಂದ್ರ ಸಚಿವರು.

ರಾಜ್ಯದಲ್ಲಿ ವಿಪರೀತ ಮಳೆ ಆಗುತ್ತಿದೆ. ನೆರೆಯಿಂದ, ಬೆಳೆ ಹಾನಿಯಿಂದ ಜನರು ತತ್ತರಿಸುತ್ತಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸುವುದು ಬಿಟ್ಟು ಇಂಥ ವಿಷಯಗಳಲ್ಲಿ ಕಾಲಹರಣ ಮಾಡುತ್ತಿದೆ. ಅತ್ಯಂತ ನೋವಿನಿಂದ ನಾನು ಈ ಮಾತು ಹೇಳುತ್ತಿದ್ದೇನೆ ಎಂದು ಅವರು ಹೇಳಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!