"Dharmasthala Satya Yatre" on August 31: B. Munegowda calls on JDS activists

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜಾತ್ಯತೀತ ಜನತಾದಳ (JDS) ವತಿಯಿಂದ ಆಯೋಜಿಸಿರುವ “ಧರ್ಮಸ್ಥಳ ಸತ್ಯ ಯಾತ್ರೆಗೆ” (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಈ ಯಾತ್ರೆಯನ್ನು ಆಯೋಜಿಸಲಾಗಿದೆ.

ಇದೇ ಭಾನುವಾರ 31 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದೇವೆ. ಧರ್ಮಸ್ಥಳಕ್ಕೆ ಅಪಮಾನ ಆಗುವ ತರ ಕೆಲವೊಂದು ಹೆಜ್ಜೆ ಈ ಸರ್ಕಾರ ಇಟ್ಟಿದೆ. ನಾನು ಒಬ್ಬ ಭಕ್ತನಾಗಿ ಹಾಗೂ ನಮ್ಮ ಪಕ್ಷ ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಧರ್ಮಸ್ಥಳ ಸತ್ಯ ಯಾತ್ರೆ ಮಾಡಿ, ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಅವರಿಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದರು.

800 ವರ್ಷಗಳ ಇತಿಹಾಸವಿರುವ ಪುಣ್ಯಕ್ಷೇತ್ರ ಧರ್ಮಸ್ಥಳ. ಕೋಟ್ಯಾಂತರ ಭಕ್ತರು ಶ್ರೀ ಕ್ಷೇತ್ರಕ್ಕೆ ಹೋಗ್ತಾರೆ. ಧರ್ಮಸ್ಥಳದಲ್ಲಿ ಧರ್ಮ, ನ್ಯಾಯವಿದೆ ಇಂತಹ ಶ್ರೀ ಕ್ಷೇತ್ರ ಬಗ್ಗೆ ಪಿತೂರಿ ನಡೆದಿದೆ. ಇದರ ಹಿಂದೆ ಒಂದು ಸಂಘಟನೆ ಇದೆ ಎಂದು ಮುನೇಗೌಡ ಅವರು ಆರೋಪಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಸ್ವಂತ ವಾಹನಗಳಲ್ಲಿ “ಧರ್ಮಸ್ಥಳ ಸತ್ಯ ಯಾತ್ರೆ”ಯಲ್ಲಿ ಭಾಗವಹಿಸಲಿದ್ದೇವೆ ಎಂದರು.

ದೊಡ್ಡಬಳ್ಳಾಪುರ ಜೆಡಿಎಸ್ ತಾಲೂಕು ವಕ್ತಾರ ಕುಂಟನಹಳ್ಳಿ ಮಂಜುನಾಥ್ ಮಾತನಾಡಿ, ಧರ್ಮಸ್ಥಳ ಯಾತ್ರೆಯಲ್ಲಿ ಯಾವುದೇ ರಾಜಕೀಯ ಇಲ್ಲ. ಪಕ್ಷಾತೀತವಾಗಿ ಈ ಯಾತ್ರೆ ಕೈಗೊಂಡಿದ್ದೇವೆ. ಇದ್ರಲ್ಲಿ ಯಾವುದೇ ರಾಜಕೀಯವಿಲ್ಲ. ಧರ್ಮಸ್ಥಳಕ್ಕೆ ದೊಡ್ಡ ಸಂಖ್ಯೆಯಲ್ಲಿ ಭೇಟಿ ನೀಡುತ್ತೇವೆ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಕ್ಕೆ ಒಂದುವರೆ ತಿಂಗಳಿಂದ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಅವರ ಕುಟುಂಬದವರು ತಾಳ್ಮೆ ಮತ್ತೆ ಸಹನೆಯಿಂದ ನಡೆದುಕೊಂಡಿದ್ದಾರೆ. ನಾವು ಅವರ ಜೊತೆ ನಿಲ್ಲುತ್ತೇವೆ ಹೆಗ್ಗಡೆ ಕುಟುಂಬಕ್ಕೆ ಜೆಡಿಎಸ್ ಬೆಂಬಲವಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಿಂದ ಮಾಜಿ ಶಾಸಕ ಸಿ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಕಾರಳ್ಳಿ ಮುನೇಗೌಡ, ಹೊಸಕೋಟೆ ತಾಲೂಕಿನಿಂದ ಅಧ್ಯಕ್ಷ ಶ್ರೀಧರ್, ದೊಡ್ಡಬಳ್ಳಾಪುರ ತಾಲೂಕಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ ಹಾಗೂ ನೆಲಮಂಗಲ ತಾಲೂಕಿನಿಂದ ಮಾಜಿ ಶಾಸಕ ಶ್ರೀನಿವಾಸ್ ಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ, ತಾಲೂಕು ಅಧ್ಯಕ್ಷ ತಿಮ್ಮರಾಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹುಸ್ಕೂರು ಆನಂದ್, ಡಾ.ವಿಜಯಕುಮಾರ್ ಅವರ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದೇವೆ.

ಆಗಸ್ಟ್. 31ರಂದು ಬೆಳಗ್ಗೆ 7.30ಕ್ಕೆ ಹಾಸನದಲ್ಲಿ ಸೇರುವಂತೆ ಕಾರ್ಯಕರ್ತರಿಗೆ ಮಾಹಿತಿ ನೀಡಲಾಗಿದೆ. ಬಳಿಕ ನೇತ್ರಾವತಿ ಬಳಿ ಸೇರಿ, ಅಲ್ಲಿಂದ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದೇವೆ ಎಂದರು.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!