ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"Dharmasthala Satya Yatre" on August 31: B. Munegowda calls on JDS activists

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜಾತ್ಯತೀತ ಜನತಾದಳ (JDS) ವತಿಯಿಂದ ಆಯೋಜಿಸಿರುವ “ಧರ್ಮಸ್ಥಳ ಸತ್ಯ ಯಾತ್ರೆಗೆ” (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಈ ಯಾತ್ರೆಯನ್ನು ಆಯೋಜಿಸಲಾಗಿದೆ.

ಇದೇ ಭಾನುವಾರ 31 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದೇವೆ. ಧರ್ಮಸ್ಥಳಕ್ಕೆ ಅಪಮಾನ ಆಗುವ ತರ ಕೆಲವೊಂದು ಹೆಜ್ಜೆ ಈ ಸರ್ಕಾರ ಇಟ್ಟಿದೆ. ನಾನು ಒಬ್ಬ ಭಕ್ತನಾಗಿ ಹಾಗೂ ನಮ್ಮ ಪಕ್ಷ ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಧರ್ಮಸ್ಥಳ ಸತ್ಯ ಯಾತ್ರೆ ಮಾಡಿ, ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಅವರಿಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದರು.

800 ವರ್ಷಗಳ ಇತಿಹಾಸವಿರುವ ಪುಣ್ಯಕ್ಷೇತ್ರ ಧರ್ಮಸ್ಥಳ. ಕೋಟ್ಯಾಂತರ ಭಕ್ತರು ಶ್ರೀ ಕ್ಷೇತ್ರಕ್ಕೆ ಹೋಗ್ತಾರೆ. ಧರ್ಮಸ್ಥಳದಲ್ಲಿ ಧರ್ಮ, ನ್ಯಾಯವಿದೆ ಇಂತಹ ಶ್ರೀ ಕ್ಷೇತ್ರ ಬಗ್ಗೆ ಪಿತೂರಿ ನಡೆದಿದೆ. ಇದರ ಹಿಂದೆ ಒಂದು ಸಂಘಟನೆ ಇದೆ ಎಂದು ಮುನೇಗೌಡ ಅವರು ಆರೋಪಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಸ್ವಂತ ವಾಹನಗಳಲ್ಲಿ “ಧರ್ಮಸ್ಥಳ ಸತ್ಯ ಯಾತ್ರೆ”ಯಲ್ಲಿ ಭಾಗವಹಿಸಲಿದ್ದೇವೆ ಎಂದರು.

ದೊಡ್ಡಬಳ್ಳಾಪುರ ಜೆಡಿಎಸ್ ತಾಲೂಕು ವಕ್ತಾರ ಕುಂಟನಹಳ್ಳಿ ಮಂಜುನಾಥ್ ಮಾತನಾಡಿ, ಧರ್ಮಸ್ಥಳ ಯಾತ್ರೆಯಲ್ಲಿ ಯಾವುದೇ ರಾಜಕೀಯ ಇಲ್ಲ. ಪಕ್ಷಾತೀತವಾಗಿ ಈ ಯಾತ್ರೆ ಕೈಗೊಂಡಿದ್ದೇವೆ. ಇದ್ರಲ್ಲಿ ಯಾವುದೇ ರಾಜಕೀಯವಿಲ್ಲ. ಧರ್ಮಸ್ಥಳಕ್ಕೆ ದೊಡ್ಡ ಸಂಖ್ಯೆಯಲ್ಲಿ ಭೇಟಿ ನೀಡುತ್ತೇವೆ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಕ್ಕೆ ಒಂದುವರೆ ತಿಂಗಳಿಂದ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಅವರ ಕುಟುಂಬದವರು ತಾಳ್ಮೆ ಮತ್ತೆ ಸಹನೆಯಿಂದ ನಡೆದುಕೊಂಡಿದ್ದಾರೆ. ನಾವು ಅವರ ಜೊತೆ ನಿಲ್ಲುತ್ತೇವೆ ಹೆಗ್ಗಡೆ ಕುಟುಂಬಕ್ಕೆ ಜೆಡಿಎಸ್ ಬೆಂಬಲವಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಿಂದ ಮಾಜಿ ಶಾಸಕ ಸಿ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಕಾರಳ್ಳಿ ಮುನೇಗೌಡ, ಹೊಸಕೋಟೆ ತಾಲೂಕಿನಿಂದ ಅಧ್ಯಕ್ಷ ಶ್ರೀಧರ್, ದೊಡ್ಡಬಳ್ಳಾಪುರ ತಾಲೂಕಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ ಹಾಗೂ ನೆಲಮಂಗಲ ತಾಲೂಕಿನಿಂದ ಮಾಜಿ ಶಾಸಕ ಶ್ರೀನಿವಾಸ್ ಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ, ತಾಲೂಕು ಅಧ್ಯಕ್ಷ ತಿಮ್ಮರಾಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹುಸ್ಕೂರು ಆನಂದ್, ಡಾ.ವಿಜಯಕುಮಾರ್ ಅವರ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದೇವೆ.

ಆಗಸ್ಟ್. 31ರಂದು ಬೆಳಗ್ಗೆ 7.30ಕ್ಕೆ ಹಾಸನದಲ್ಲಿ ಸೇರುವಂತೆ ಕಾರ್ಯಕರ್ತರಿಗೆ ಮಾಹಿತಿ ನೀಡಲಾಗಿದೆ. ಬಳಿಕ ನೇತ್ರಾವತಿ ಬಳಿ ಸೇರಿ, ಅಲ್ಲಿಂದ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದೇವೆ ಎಂದರು.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]