School holidays extended for survey; Nikhil Kumaraswamy condemns government's stance

ಧರ್ಮಸ್ಥಳ ಪ್ರಕರಣ: SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ – ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಧರ್ಮಸ್ಥಳ ಪ್ರಕರಣದಲ್ಲಿ SIT ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ. ಷಡ್ಯಂತ್ರಕ್ಕೆ ವಿದೇಶಿ ಫಂಡಿಂಗ್ ಶಂಕೆಯಿದೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಗಂಭೀರ ಆರೋಪ ಮಾಡಿದರು

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳ ಶ್ರೀ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕ. ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.

ಧರ್ಮಸ್ಥಳ ಸತ್ಯ ಯಾತ್ರೆಗೆ ಹಾಸನ ಕೇಂದ್ರ ಸ್ಥಾನ

ಧರ್ಮಸ್ಥಳ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಲಿದ್ದಾರೆ. ಅಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿದೆ.ನಂತರ ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ ಎಂದು ವಿವರಿಸಿದರು.

ಈ ಯಾತ್ರೆಯಲ್ಲಿ ಜೆಡಿಎಸ್‌‍ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಧರ್ಮಸ್ಥಳದ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದು, ನೈತಿಕ ಬೆಂಬಲ ವ್ಯಕ್ತಪಡಿಸಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೂಚನೆಯೆಂತೆ ಆ. 31 ರಂದು ಜೆಡಿಎಸ್‌ ವತಿಯಿಂದ ʼಧರ್ಮಸ್ಥಳ ಸತ್ಯಯಾತ್ರೆʼಯನ್ನು ಹಮ್ಮಿಕೊಂಡಿದ್ದೇವೆ.

ಯಾವುದೇ ರಾಜಕೀಯ ಬೆರೆಸದೆ ಧರ್ಮಸ್ಥಳ ಸತ್ಯ ಯಾತ್ರೆ ನಡೆಸುತ್ತಿದ್ದೇವೆ. ಧರ್ಮ ರಕ್ಷಣೆಯ ಉದ್ದೇಶದಿಂದ ಈ ಯಾತ್ರೆ ಆಯೋಜನೆ ಮಾಡಿದ್ದೇವೆ. ಧರ್ಮಸ್ಥಳ ಪುಣ್ಯ ಕ್ಷೇತ್ರದಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳು ನಡೆದಿವೆ. ಧರ್ಮಸ್ಥಳ ವಿರುದ್ಧ ನಡೆದ ಅಪಪ್ರಚಾರ ವಿರೋಧಿಸಿ ನಾಳೆ ಯಾತ್ರೆ ಕೈಗೊಂಡಿದ್ದೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ನಾಳೆ (ಭಾನುವಾರ) ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ನಡೆಯುತ್ತಿದೆ. ಧರ್ಮಸ್ಥಳ ಭಕ್ತರು ಈ ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು ಎಂದು ನಿಖಿಲ್ ಅವರು ತಿಳಿಸಿದರು.

800 ವರ್ಷ ಇತಿಹಾಸವಿರುವ ಶ್ರೀಕ್ಷೇತ್ರದ ವಿರುದ್ಧ ಪಿತೂರಿ ನಡೆಸಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಯಾವ ಆಧಾರದಲ್ಲಿ SIT ರಚನೆಗೆ ನಿರ್ಧಾರ ಮಾಡಿತು.? ಈ ಪ್ರಶ್ನೆ ಲಕ್ಷಾಂತರ ಭಕ್ತರಲ್ಲಿ ಮೂಡಿದೆ ಎಂದು ವಾಗ್ದಾಳಿ ನಡೆಸಿದರು.

ಒಬ್ಬರೋ, ಇಬ್ಬರೋ ದೂರು ಕೊಟ್ಟ ತಕ್ಷಣ SIT ರಚನೆ ಮಾಡಿದ್ದಾರೆ. ಚಿನ್ನಯ್ಯ ಎಂಬ ವ್ಯಕ್ತಿ ಬುರುಡೆ ತಂದು ಧರ್ಮಸ್ಥಳದಲ್ಲಿ ಮಾಸ್ ಮರ್ಡರ್ ನಡೆದಿದೆ ಎಂದು ಬಿಂಬಿಸಿದ್ರು. ಮೊದಲು FSL ವರದಿ ಪಡೆದ ಬಳಿಕ ವಿಷಯ ಗಂಭೀರತೆ ಸರ್ಕಾರ ಅರಿಯಬೇಕಿತ್ತು. ಸಿದ್ದರಾಮಯ್ಯ ಹೆಸರಲ್ಲಿ SIT ಆಗಿದೆ. ಧರ್ಮಾಧಿಕಾರಿಗಳು ಮತ್ತು ಅವರ ಕುಟುಂಬಕ್ಕೆ ನೈತಿಕ ಬೆಂಬಲ ಸೂಚಿಸಬೇಕಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ.ಎಸ್ ಪುಟ್ಟರಾಜು ಅವರು, ಡಿ.ಸಿ ತಮ್ಮಣ್ಣ ಅವರು, ಮಾಜಿ ಶಾಸಕರಾದ ಅನ್ನದಾನಿ ಅವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ ಅವರು, ಮನ್ ಮುಲ್ ಮಾಜಿ ಅಧ್ಯಕ್ಷರಾದ ರಾಮಚಂದ್ರು ಅವರು, ಮಂಡ್ಯ ಜಿಲ್ಲಾಧ್ಯಕ್ಷರಾದ ಡಿ.ರಮೇಶ್ ಅವರು ರಾಜ್ಯ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾದ ಜೈರಾಮ್, ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ಕಂಸಾಗರ ರವಿ. ಮದ್ದೂರು ಬಿಜೆಪಿ ಮುಖಂಡರ ಸ್ವಾಮಿ ಅವರು ಉಪಸ್ಥಿತರಿದ್ದರು.

ಕುಮಾರಣ್ಣ ಆರೋಗ್ಯದ ಬಗ್ಗೆ ಆತಂಕ ಬೇಡ, ಸಂಪೂರ್ಣ ಆರೋಗ್ಯವಾಗಿದ್ದಾರೆ – ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಕುಮಾರಣ್ಣ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ನಿಜ. ಯಾರಿಗೂ ಆತಂಕ ಬೇಡ. ಈಗ ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಎಂದು ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ. ಅವರ ತಂದೆ-ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ, ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!