ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ

Peace can be established in society through social commitment of the police: CM Siddaramaiah

ಬೆಂಗಳೂರು: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ರಾಜಭವನದಲ್ಲಿ ನಡೆದ, ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.

ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು

ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಸಾಮಾನ್ಯ ಜನರಿಗೆ ನ್ಯಾಯ ಸಿಗುವಂತಾಗಬೇಕು

ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಢ್ಯರ ಕೈಯ್ಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ ಎಂದರು.

ಇಂದಿನ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು ಎಂದರು.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]