After Dharmasthala Chalo, BY Vijendra meets Soujanya house.. Soujanya's mother cries

ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯ ಮನೆಗೆ ಬಿ.ವೈ.ವಿಜೇಂದ್ರ ಭೇಟಿ.. ಸೌಜನ್ಯ ತಾಯಿ ಕಣ್ಣೀರು

ಉಜಿರೆ: ಧರ್ಮಸ್ಥಳ (Dharmasthala) ವಿರುದ್ಧ ಅಪಪ್ರಚಾರ ಖಂಡಿಸಿ ನಿನ್ನೆ ಜೆಡಿಎಸ್ ಸತ್ಯಯಾತ್ರೆ ಬೆನ್ನಲ್ಲೇ ಇಂದು ಬಿಜೆಪಿ ನಾಯಕರು ಸೋಮವಾರ ಧರ್ಮಸ್ಥಳ ಚಲೋ ನಡೆಸಿದ್ದಾರೆ.

ಧರ್ಮಸ್ಥಳ ಚಲೋ ಮುಗಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ( B.Y.Vijayendra) ಅವರು ಬಿಜೆಪಿ ಮುಖಂಡರೊಂದಿಗೆ ಕುಮಾರಿ ಸೌಜನ್ಯ ಮನೆಗೆ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಕುಸುಮಾವತಿ ಅವರು ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ಕಣ್ಣೀರು ಹಾಕಿದರು.

ಕಣ್ಣೀರು ಹಾಕಿದ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಸಂತೈಸಿದ ವಿಜಯೇಂದ್ರ, ಸೌಜನ್ಯ ಹೋರಾಟದಲ್ಲಿ ಜೊತೆಗಿರುತ್ತೇವೆ, ನಿಮ್ಮ ಮಗಳಿಗೆ ನ್ಯಾಯ ದೊರಕುವ ಭರವಸೆ ಇದೆ ಎಂದರು.

ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸೌಜನ್ಯ ತಾಯಿ ಅವರನ್ನು ಭೇಟಿಯಾಗಿದ್ದೇವೆ, ಪ್ರಕರಣ ಕುರಿತು ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಸಿಬಿಐ ಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರೆ ಅದರ ಸಂಪೂರ್ಣ ವೆಚ್ಚ ಬಿಜೆಪಿಯಿಂದ ಭರಿಸುತ್ತದೆ ಎಂದು ಭರವಸೆ ನೀಡಿದರು.

ಧರ್ಮಸ್ಥಳ ಪ್ರಕರಣ ಬಿಜೆಪಿಯ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: “ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅವರು ತಿರುಗೇಟು ನೀಡಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು” ಎಂದು ಆರೋಪಿಸಿದರು.

ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾಗಿದ್ದ ಕಾಲದಲ್ಲಿ ಹೇಳಿರುವುದು, ಹಾಗಾಗಿ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ‌.

ಈ ಕುರಿತಂತೆ ನಳಿನ್ ಕುಮಾರ್ ಕಟೀಲ್ ಅವರು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿರುವ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸೌಜನ್ಯ ಹಂತಕರ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಇದ್ದರೂ ಅಂದಿನಿಂದ ಇಂದಿನವರೆಗೂ ಗೌಪ್ಯವಾಗಿ ಇಟ್ಟಿರುವುದೇಕೆ? ಈಗಲೂ SIT ಮುಂದೆ ಮಾಹಿತಿ ನೀಡಲು ಮುಕ್ತ ಅವಕಾಶವಿದೆ, ಸೌಜನ್ಯ ಹಂತಕರ ಬಗ್ಗೆ ಮಾಹಿತಿ ನೀಡುವ ಬಿಜೆಪಿ ನಾಯಕರಿಗೆ ರಕ್ಷಣೆ ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿ.

ಬಿಜೆಪಿಯವರು ಸೌಜನ್ಯ ಹತ್ಯೆಗೆ ನ್ಯಾಯ ಒದಗಿಸುವ ತಮ್ಮ ವಾಗ್ದಾನವನ್ನು ನೆನಪು ಮಾಡಿಕೊಳ್ಳಲಿ, ಹಂತಕರ ಬಗ್ಗೆ ತಮಗಿರುವ ಮಾಹಿತಿ ಬಹಿರಂಗಪಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ ಎಂದು ಸವಾಲು ಎಸೆದಿದ್ದಾರೆ.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!