After Dharmasthala Chalo, BY Vijendra meets Soujanya house.. Soujanya's mother cries

ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯ ಮನೆಗೆ ಬಿ.ವೈ.ವಿಜೇಂದ್ರ ಭೇಟಿ.. ಸೌಜನ್ಯ ತಾಯಿ ಕಣ್ಣೀರು

ಉಜಿರೆ: ಧರ್ಮಸ್ಥಳ (Dharmasthala) ವಿರುದ್ಧ ಅಪಪ್ರಚಾರ ಖಂಡಿಸಿ ನಿನ್ನೆ ಜೆಡಿಎಸ್ ಸತ್ಯಯಾತ್ರೆ ಬೆನ್ನಲ್ಲೇ ಇಂದು ಬಿಜೆಪಿ ನಾಯಕರು ಸೋಮವಾರ ಧರ್ಮಸ್ಥಳ ಚಲೋ ನಡೆಸಿದ್ದಾರೆ.

ಧರ್ಮಸ್ಥಳ ಚಲೋ ಮುಗಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ( B.Y.Vijayendra) ಅವರು ಬಿಜೆಪಿ ಮುಖಂಡರೊಂದಿಗೆ ಕುಮಾರಿ ಸೌಜನ್ಯ ಮನೆಗೆ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಕುಸುಮಾವತಿ ಅವರು ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ಕಣ್ಣೀರು ಹಾಕಿದರು.

ಕಣ್ಣೀರು ಹಾಕಿದ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಸಂತೈಸಿದ ವಿಜಯೇಂದ್ರ, ಸೌಜನ್ಯ ಹೋರಾಟದಲ್ಲಿ ಜೊತೆಗಿರುತ್ತೇವೆ, ನಿಮ್ಮ ಮಗಳಿಗೆ ನ್ಯಾಯ ದೊರಕುವ ಭರವಸೆ ಇದೆ ಎಂದರು.

ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸೌಜನ್ಯ ತಾಯಿ ಅವರನ್ನು ಭೇಟಿಯಾಗಿದ್ದೇವೆ, ಪ್ರಕರಣ ಕುರಿತು ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಸಿಬಿಐ ಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರೆ ಅದರ ಸಂಪೂರ್ಣ ವೆಚ್ಚ ಬಿಜೆಪಿಯಿಂದ ಭರಿಸುತ್ತದೆ ಎಂದು ಭರವಸೆ ನೀಡಿದರು.

ಧರ್ಮಸ್ಥಳ ಪ್ರಕರಣ ಬಿಜೆಪಿಯ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: “ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅವರು ತಿರುಗೇಟು ನೀಡಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು” ಎಂದು ಆರೋಪಿಸಿದರು.

ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾಗಿದ್ದ ಕಾಲದಲ್ಲಿ ಹೇಳಿರುವುದು, ಹಾಗಾಗಿ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ‌.

ಈ ಕುರಿತಂತೆ ನಳಿನ್ ಕುಮಾರ್ ಕಟೀಲ್ ಅವರು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿರುವ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸೌಜನ್ಯ ಹಂತಕರ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಇದ್ದರೂ ಅಂದಿನಿಂದ ಇಂದಿನವರೆಗೂ ಗೌಪ್ಯವಾಗಿ ಇಟ್ಟಿರುವುದೇಕೆ? ಈಗಲೂ SIT ಮುಂದೆ ಮಾಹಿತಿ ನೀಡಲು ಮುಕ್ತ ಅವಕಾಶವಿದೆ, ಸೌಜನ್ಯ ಹಂತಕರ ಬಗ್ಗೆ ಮಾಹಿತಿ ನೀಡುವ ಬಿಜೆಪಿ ನಾಯಕರಿಗೆ ರಕ್ಷಣೆ ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿ.

ಬಿಜೆಪಿಯವರು ಸೌಜನ್ಯ ಹತ್ಯೆಗೆ ನ್ಯಾಯ ಒದಗಿಸುವ ತಮ್ಮ ವಾಗ್ದಾನವನ್ನು ನೆನಪು ಮಾಡಿಕೊಳ್ಳಲಿ, ಹಂತಕರ ಬಗ್ಗೆ ತಮಗಿರುವ ಮಾಹಿತಿ ಬಹಿರಂಗಪಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ ಎಂದು ಸವಾಲು ಎಸೆದಿದ್ದಾರೆ.

ರಾಜಕೀಯ

ಜಕ್ಕೂರು ಏರೋಡ್ರೋಂ ವಿಸ್ತರಣೆಗೆ ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಕ್ಕೂರು ಏರೋಡ್ರೋಂ ವಿಸ್ತರಣೆಗೆ ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="113469"]
ಧರ್ಮಸ್ಥಳ ಪ್ರಕರಣ: ಧರ್ಮ ರಕ್ಷಾ ಜಾಥಾಗೆ ಕೆ.ಎಸ್.ಈಶ್ವರಪ್ಪ ಚಾಲನೆ

ಧರ್ಮಸ್ಥಳ ಪ್ರಕರಣ: ಧರ್ಮ ರಕ್ಷಾ ಜಾಥಾಗೆ ಕೆ.ಎಸ್.ಈಶ್ವರಪ್ಪ ಚಾಲನೆ

ರಾಷ್ಟ್ರಭಕ್ತರ ಬಳಗದಿಂದ 224 ಕಾರುಗಳು ಹಾಗೂ 5 ಟಿ.ಟಿ ವಾಹನದ ಮೂಲಕ ಧರ್ಮಸ್ಥಳಕ್ಕೆ (Dharmasthala) ಧರ್ಮ ರಕ್ಷಾ ಜಾಥಾಗೆ ಮಾಜಿ ಉಪ ಮುಖ್ಯಮಂತ್ರಿ ಕೆ‌.ಎಸ್.ಈಶ್ವರಪ್ಪ (K.S. Eshwarappa) ಚಾಲನೆ

[ccc_my_favorite_select_button post_id="113436"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಸ್ಕೂಟರ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಸ್ಕೂಟರ್ ಸವಾರ ದುರ್ಮರಣ

ಸ್ಕೂಟರ್‌ ಸವಾರನ ಮೇಲೆ ಲಾರಿಯ ಚಕ್ರ ಹರಿದು (Accident), ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿ ಬಳಿ ನಡೆದಿದೆ.

[ccc_my_favorite_select_button post_id="113368"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!