Election Commission summons Pawan Khera

ಪವನ್ ಖೇರಾ‌ಗೆ ಸಮನ್ಸ್ ಕೊಟ್ಟು ತಗ್ಲಾಕ್ಕೊಂಡ ಚುನಾವಣೆ ಆಯೋಗ..!

ದೆಹಲಿ: ವೋಟ್ ಚೋರಿ (Vote Chori) ಕುರಿತಂತೆ ಕಾಂಗ್ರೆಸ್ ಆರೋಪ ತೀವ್ರಗೊಂಡಿರುವ ನಡುವೆಯೇ ಎರಡು ಮತದಾರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಅವರಿಗೆ ಚುನಾವಣಾ ಆಯೋಗವು (Election Commission) ನೋಟಿಸ್ ನೀಡುವ ಮೂಲಕ ತನ್ನ ಬಲೆಯೊಳಗೆ ತಾನೆ ಸಿಲುಕಿದೆ.

ನೋಟಿಸ್ ಅನ್ವಯ ಪವನ್ ಖೇರಾ ಅವರನ್ನು ಸೆಪ್ಟೆಂಬರ್ 8ರಂದು ಬೆಳಗ್ಗೆ 11 1 ಗಂಟೆಗೆ ಆಯೋ ಗದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ಬಿಜೆಪಿ ನಾಯಕ ಅಮಿತ್ ಮಾಳವಿಯಾ ದೆಹಲಿಯ ಎರಡು ಪ್ರತ್ಯೇಕ ಕ್ಷೇತ್ರಗಳಲ್ಲಿ ಖೇರಾ ಎರಡು ಸಕ್ರಿಯ ಮತದಾರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ ಕೆಲವೇ ಗಂಟೆಗಳಲ್ಲಿ ಚುನಾವಣೆ ಆಯೋಗ ಈ ಸಮನ್ಸ್ ಜಾರಿಯಾಗಿದೆ.

ದೆಹಲಿ ಜಿಲ್ಲಾ ಚುನಾವಣಾ ಕಚೇರಿಯ ಸೂಚನೆಯಲ್ಲಿ, ‘ನೀವು ಒಂದಕ್ಕಿಂತ ಹೆಚ್ಚಿನ ಕ್ಷೇತ್ರಗಳ ಚುನಾ ವಣಾ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೊಂದಾಯಿಸಿ ಕೊಂಡಿರುವುದು ಗಮನಕ್ಕೆ ಬಂದಿದೆ. ಒಂದಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ಇರುವುದು ಶಿಕ್ಷಾರ್ಹ ಅಪರಾಧ. ಈ ಕಾಯ್ದೆಯಡಿ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದೆಂದು ಕಾರಣ ನೀಡಬೇಕು. ನಿಮ್ಮ ಉತ್ತರವು ಸೆಪ್ಟೆಂಬರ್ 8ರ ಬೆಳಗ್ಗೆ 11 ಗಂಟೆಯೊಳಗೆ ಈ ಕಚೇರಿಗೆ ತಲುಪಬೇಕು’ ಎಂದು ಸೂಚನೆಯಲ್ಲಿ ಹೇಳಲಾಗಿದೆ.

ಈ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯಿಸಿರುವ ಪವನ್ ಖೇರಾ, ‘ಇದು ಕಾಂಗ್ರೆಸ್ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಬಗ್ಗೆ ಎತ್ತಿರುವ ಪ್ರಶ್ನೆಗಳ ಪರಿಣಾಮ’ ಎಂದಿದ್ದಾರೆ.

ರಾಹುಲ್ ಗಾಂಧಿ ಅವರು ಬಹಿರಂಗಪಡಿಸಿದ ಕರ್ನಾಟಕದ ಮಹಾದೇವಪುರ ಕ್ಷೇತ್ರದ 1,00,000 ನಕಲಿ ಮತದಾರರಿಗೆ ಚುನಾವಣೆ ಆಯೋಗ ಒಂದೇ ಒಂದು ನೋಟಿಸ್ ನೀಡಲಿಲ್ಲ ಏಕೆ?

ಸರ್ಕಾರದ ಪರ ಚುನಾವಣೆ ಆಯೋಗ ಕಾರ್ಯನಿರ್ವಹಿಸುತ್ತಿರುವುದಕ್ಕೆ ಇದು ಸಾಕ್ಷಿ. ದೆಹಲಿ ಕ್ಷೇತ್ರದಲ್ಲಿ ನನ್ನ ಹೆಸರಿನಲ್ಲಿ ಯಾರು ಮತ ಚಲಾಯಿಸುತ್ತಿದ್ದಾರೆ ಎಂಬುದರ ದೃಶ್ಯಾವಳಿಯನ್ನು ತೆಗೆಯಬೇಕು.

ನನ್ನ ಹೆಸರನ್ನು ಪಟ್ಟಿಯಿಂದ ತೆಗೆಯಲು ಎಲ್ಲ ಕಾನೂನು ಕ್ರಮಗಳನ್ನು ಅನುಸರಿಸಿದ್ದರೂ ಆಯೋಗ ಏಕೆ ಇನ್ನೂ ತೆಗೆದಿಲ್ಲ? ಈ ಬೆದರಿಕೆ ನಾವು ಅಂಜುವುದಿಲ್ಲ, ಬಿಹಾರ SIR ಮತ್ತು ಇತರ ಚುನಾವಣಾ ಪ್ರಕ್ರಿಯೆಗಳಲ್ಲಿ ಚುನಾವಣೆ ಆಯೋಗದ ತಪ್ಪುಗಳನ್ನು ಬಹಿರಂಗಪಡಿಸುವುದನ್ನು ನಾವು ನಿಲ್ಲಿಸುವುದಿಲ್ಲ ಎಂದು ಖೇರಾ ಹೇಳಿದ್ದಾರೆ.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!