Excessive use of urea is fatal to sustainable agriculture; Assistant Director of Agriculture P. Raghavendra

ಅತಿಯಾದ ಯುರಿಯಾ ಬಳಕೆಯಿಂದ ಸುಸ್ಥಿರ ಕೃಷಿಗೆ ಮಾರಕ; ಸಹಾಯಕ ಕೃಷಿ ನಿರ್ದೇಶಕ ಪಿ. ರಾಘವೇಂದ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ಉತ್ತಮವಾಗಿ ಮಳೆಯಾಗುತ್ತಿದ್ದು, ಶೇ.95 ರಷ್ಟು ಬಿತ್ತನೆ ಕಾರ್ಯವೂ ಸಹ ಮುಕ್ತಾಯಗೊಂಡಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಪಿ. ರಾಘವೇಂದ್ರ (P. Raghavendra) ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಬೆಳೆಯುವ ಬೆಳೆಯೆಂದರೆ ಪ್ರಮುಖವಾಗಿ ರಾಗಿಯಾಗಿದ್ದು, ಕುಂಟೆಯೊಡಯುವ ಹಂತದಿಂದ ತೆಂಡೆ ಹೊಡೆಯುವ ಹಂತದವರೆಗಿನ ಬೆಳೆಯನ್ನು ಕಾಣಬಹುದಾಗಿದೆ.

ರೈತರು ಕಳೆ ತೆಗೆದ ನಂತರ ತೆಂಡೆ ಹೊಡೆಯುವ ಹಂತದಲ್ಲಿ ಶೇ. 50 % ಹರಳು ರೂಪದ ಯೂರಿಯಾವನ್ನು ಮೇಲುಗೊಬ್ಬರವಾಗಿ ಬಳಸುತ್ತಿರುವುದು ವೈಜ್ಞಾನಿಕ ಶಿಫಾರಸ್ಸಾಗಿರುತ್ತದೆ.

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ರವರ ಶಿಫಾರಸ್ಸಿನ ಪ್ರಕಾರ (20:15:16) ಒಂದು ಎಕೆರೆ ಖುಷ್ಕಿ ರಾಗಿ ಬೆಳೆಗೆ 20 ಕೆ.ಜಿ. ಯಷ್ಟು ಸಾರಜನಕ ಬೇಕಾಗಿದ್ದು, ಶೇ 50 ರಷ್ಟು ಮೂಲಗೊಬ್ಬರವಾಗಿ 10 ಕೆ.ಜಿ ಬಿತ್ತನೆ ಸಮಯದಲ್ಲಿ ಉಳಿದ 10 ಕೆ.ಜಿ ಸಾರಜನಕ ಬಿತ್ತನೆ ಮಾಡಿದ 6-7 ವಾರಗಳ ನಂತರ ಮೇಲುಗೊಬ್ಬರವಾಗಿ ಕೊಡುವುದು. ಒಂದು ಯೂರಿಯಾ (45 ಕೆ.ಜಿ) ಚೀಲದಲ್ಲಿ ಶೇ.46 ರಷ್ಟು ಅಂದರೆ 20.7 ಕೆ.ಜಿಯಷ್ಟು ಸಾರಜನಕವಿದ್ದು, ಮೂಲಗೊಬ್ಬರಕ್ಕೆ 10 ಕೆ.ಜಿ ಸಾರಜನಕವನ್ನು ಒದಗಿಸುತ್ತದೆ. ಉಳಿದ 10 ಕೆ.ಜಿ ಯ ಸಾರಜನಕವನ್ನು ನೀಗಿಸಲೂ ಸಹ ಈ ಒಂದು ಚೀಲ ಯೂರಿಯಾ ಸಾಕಾಗುತ್ತದೆ.

ಮುಂದುವರೆದು ಒಂದು ಎಕೆರೆಗೆ ಒಂದು ಯೂರಿಯಾ ಚೀಲದಂತೆ ರೈತರು ಶಿಫಾರಸ್ಸು ಪ್ರಮಾಣಕ್ಕಿಂತ ಮಿತಿಮೀರಿ ಹರಳು ರೂಪದ ಯೂರಿಯಾ ಬಳಸುತ್ತಿದ್ದು, ಬೆಳೆಯ ಅವಶ್ಯಕಿಂತ ಹೆಚ್ಚಿಗೆ ಬಳಸಿದ ಯೂರಿಯ ಅಂಶವು ಮಣ್ಣಿನ ಆರೋಗ್ಯವನ್ನು ಹದಗೆಡುವುದಲ್ಲದೇ ಕುತ್ತಿಗೆ ಬೆಂಕಿ ರೋಗ, ಕೀಟಭಾದೆ ಮತ್ತು ಅಸಮತೋಲನ ಬೆಳವಣಿಗೆಯಿಂದ ಕಟಾವಿನ ಸಮಯದಲ್ಲಿ ನೆಲಕ್ಕುರುಳಿ ತೆನೆ ಮತ್ತು ಹುಲ್ಲು ನಷ್ಟವಾಗುತ್ತದೆ. ಅತಿಯಾದ ಯೂರಿಯಾ ಬಳಸುವುದರ ಮೂಲಕ ಬೆಳೆಗಳಲ್ಲಿ ನೈಟ್ರೇಟ್ ಅಂಶದಲ್ಲಿನ ಬದಲಾವಣೆಗಳಿಂದ ಆಹಾರ ಪಧಾರ್ಥಗಳಲ್ಲಿ ನೈಟ್ರೇಟ್ ಪ್ರಮಾಣ ಅಧಿಕವಾಗಿ ಕಾನ್ಸರ್ ರೋಗಕ್ಕೂ ಕಾರಣಾವಾಗಬಹುದಾಗಿದೆ.

ನದಿ-ಕೆರೆ ಜಲಮೂಲಗಳಿಗೆ ನೈಟ್ರೇಟ್ ಅಂಶಗಳು ಸೇರಿ ಕುಡಿಯುವ ನೀರಿನ ಗುಣಮಟ್ಟದಲ್ಲಿ ಏರುಪೇರಾಗಿ ಮಾನವನ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ.
ಈ ಅಪಾಯವನ್ನು ತಡೆಗಟ್ಟಲು ರಾಗಿ ಬೆಳೆಗೆ ಅವಶ್ಯಕತೆಯಿರುವಷ್ಟು ಅಂದರೆ ಪೋಟಾಷ್ ಅಂಶವುಳ್ಳ ಸಂಯುಕ್ತ ಗೊಬ್ಬರಗಳಾದ 15:15:15, 19:19:19 ನಂತಹ ಗೊಬ್ಬರಗಳನ್ನು ರೈತರೂ ಬಳಸಬಹುದಾಗಿದೆ.

ಇದರಿಂದ ಉತ್ತಮವಾದ ಬೆಳೆ ಬೆಳೆಯುವುದರೊಂದಿಗೆ ಮಣ್ಣಿನ ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದಾಗಿದೆ. ಹರಳು ರೂಪದ ಪರ್ಯಾಯವಾಗಿ ನಾನ್ಯೊ ಯೂರಿಯಾ ಬಳಕೆಯಿಂದ ಉತ್ಪಾದನೆ ಹೆಚ್ಚಾಗುವುದರೊಂದಿಗೆ ಬೆಳೆ ಬೆಳೆಯುವ ಖರ್ಚೂ ಸಹ ಕಡಿಮೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ನಾನ್ಯೋ ಯೂರಿಯಾ ಅಂದರೇನು?;

ನಾನ್ಯೋ ಯೂರಿಯಾ ಒಂದು ದ್ರವ ರೂಪದ ರಸಗೊಬ್ಬರವಾಗಿದೆ.ಇದು ಸಾಂಪ್ರದಾಯಕ ಹರಳು ರೂಪದ ಯೂರಿಯಾ ಗೊಬ್ಬರಕ್ಕಿಂತ 8-10 ಪಟ್ಟು ಪರಿಣಾಮಕಾರಿಯಾಗಿದ್ದು, ಬೆಳೆಗಳಿಗೆ ತ್ವರಿತ ಪೋಷಕಾಂಶಗಳನ್ನು ನೀಡುತ್ತದೆ.

ನಾನ್ಯೋ ಯೂರಿಯಾದಿಂದಾಗುವ ಅನುಕೂಲಗಳು

ರಾಸಾಯನಿಕ ಬಳಕೆ ಕಡಿಮೆಯಾಗುತ್ತದೆ.
ನಾನ್ಯೋ ಯೂರಿಯಾ ಪರಿಣಾಮಕಾರಿಯಾಗಿದ್ದು, ಉತ್ಪಾದನೆ ಹೆಚ್ಚಳ.
ಮಣ್ಣಿನ ಆರೋಗ್ಯ ಸುಧಾರಣೆ ಆಗುತ್ತದೆ.
ರಸಗೊಬ್ಬರದ ಖರ್ಚು ಕಡಿಮೆ ಆಗುತ್ತದೆ.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!