Excessive use of urea is fatal to sustainable agriculture; Assistant Director of Agriculture P. Raghavendra

ಅತಿಯಾದ ಯುರಿಯಾ ಬಳಕೆಯಿಂದ ಸುಸ್ಥಿರ ಕೃಷಿಗೆ ಮಾರಕ; ಸಹಾಯಕ ಕೃಷಿ ನಿರ್ದೇಶಕ ಪಿ. ರಾಘವೇಂದ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ಉತ್ತಮವಾಗಿ ಮಳೆಯಾಗುತ್ತಿದ್ದು, ಶೇ.95 ರಷ್ಟು ಬಿತ್ತನೆ ಕಾರ್ಯವೂ ಸಹ ಮುಕ್ತಾಯಗೊಂಡಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಪಿ. ರಾಘವೇಂದ್ರ (P. Raghavendra) ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಬೆಳೆಯುವ ಬೆಳೆಯೆಂದರೆ ಪ್ರಮುಖವಾಗಿ ರಾಗಿಯಾಗಿದ್ದು, ಕುಂಟೆಯೊಡಯುವ ಹಂತದಿಂದ ತೆಂಡೆ ಹೊಡೆಯುವ ಹಂತದವರೆಗಿನ ಬೆಳೆಯನ್ನು ಕಾಣಬಹುದಾಗಿದೆ.

ರೈತರು ಕಳೆ ತೆಗೆದ ನಂತರ ತೆಂಡೆ ಹೊಡೆಯುವ ಹಂತದಲ್ಲಿ ಶೇ. 50 % ಹರಳು ರೂಪದ ಯೂರಿಯಾವನ್ನು ಮೇಲುಗೊಬ್ಬರವಾಗಿ ಬಳಸುತ್ತಿರುವುದು ವೈಜ್ಞಾನಿಕ ಶಿಫಾರಸ್ಸಾಗಿರುತ್ತದೆ.

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ರವರ ಶಿಫಾರಸ್ಸಿನ ಪ್ರಕಾರ (20:15:16) ಒಂದು ಎಕೆರೆ ಖುಷ್ಕಿ ರಾಗಿ ಬೆಳೆಗೆ 20 ಕೆ.ಜಿ. ಯಷ್ಟು ಸಾರಜನಕ ಬೇಕಾಗಿದ್ದು, ಶೇ 50 ರಷ್ಟು ಮೂಲಗೊಬ್ಬರವಾಗಿ 10 ಕೆ.ಜಿ ಬಿತ್ತನೆ ಸಮಯದಲ್ಲಿ ಉಳಿದ 10 ಕೆ.ಜಿ ಸಾರಜನಕ ಬಿತ್ತನೆ ಮಾಡಿದ 6-7 ವಾರಗಳ ನಂತರ ಮೇಲುಗೊಬ್ಬರವಾಗಿ ಕೊಡುವುದು. ಒಂದು ಯೂರಿಯಾ (45 ಕೆ.ಜಿ) ಚೀಲದಲ್ಲಿ ಶೇ.46 ರಷ್ಟು ಅಂದರೆ 20.7 ಕೆ.ಜಿಯಷ್ಟು ಸಾರಜನಕವಿದ್ದು, ಮೂಲಗೊಬ್ಬರಕ್ಕೆ 10 ಕೆ.ಜಿ ಸಾರಜನಕವನ್ನು ಒದಗಿಸುತ್ತದೆ. ಉಳಿದ 10 ಕೆ.ಜಿ ಯ ಸಾರಜನಕವನ್ನು ನೀಗಿಸಲೂ ಸಹ ಈ ಒಂದು ಚೀಲ ಯೂರಿಯಾ ಸಾಕಾಗುತ್ತದೆ.

ಮುಂದುವರೆದು ಒಂದು ಎಕೆರೆಗೆ ಒಂದು ಯೂರಿಯಾ ಚೀಲದಂತೆ ರೈತರು ಶಿಫಾರಸ್ಸು ಪ್ರಮಾಣಕ್ಕಿಂತ ಮಿತಿಮೀರಿ ಹರಳು ರೂಪದ ಯೂರಿಯಾ ಬಳಸುತ್ತಿದ್ದು, ಬೆಳೆಯ ಅವಶ್ಯಕಿಂತ ಹೆಚ್ಚಿಗೆ ಬಳಸಿದ ಯೂರಿಯ ಅಂಶವು ಮಣ್ಣಿನ ಆರೋಗ್ಯವನ್ನು ಹದಗೆಡುವುದಲ್ಲದೇ ಕುತ್ತಿಗೆ ಬೆಂಕಿ ರೋಗ, ಕೀಟಭಾದೆ ಮತ್ತು ಅಸಮತೋಲನ ಬೆಳವಣಿಗೆಯಿಂದ ಕಟಾವಿನ ಸಮಯದಲ್ಲಿ ನೆಲಕ್ಕುರುಳಿ ತೆನೆ ಮತ್ತು ಹುಲ್ಲು ನಷ್ಟವಾಗುತ್ತದೆ. ಅತಿಯಾದ ಯೂರಿಯಾ ಬಳಸುವುದರ ಮೂಲಕ ಬೆಳೆಗಳಲ್ಲಿ ನೈಟ್ರೇಟ್ ಅಂಶದಲ್ಲಿನ ಬದಲಾವಣೆಗಳಿಂದ ಆಹಾರ ಪಧಾರ್ಥಗಳಲ್ಲಿ ನೈಟ್ರೇಟ್ ಪ್ರಮಾಣ ಅಧಿಕವಾಗಿ ಕಾನ್ಸರ್ ರೋಗಕ್ಕೂ ಕಾರಣಾವಾಗಬಹುದಾಗಿದೆ.

ನದಿ-ಕೆರೆ ಜಲಮೂಲಗಳಿಗೆ ನೈಟ್ರೇಟ್ ಅಂಶಗಳು ಸೇರಿ ಕುಡಿಯುವ ನೀರಿನ ಗುಣಮಟ್ಟದಲ್ಲಿ ಏರುಪೇರಾಗಿ ಮಾನವನ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ.
ಈ ಅಪಾಯವನ್ನು ತಡೆಗಟ್ಟಲು ರಾಗಿ ಬೆಳೆಗೆ ಅವಶ್ಯಕತೆಯಿರುವಷ್ಟು ಅಂದರೆ ಪೋಟಾಷ್ ಅಂಶವುಳ್ಳ ಸಂಯುಕ್ತ ಗೊಬ್ಬರಗಳಾದ 15:15:15, 19:19:19 ನಂತಹ ಗೊಬ್ಬರಗಳನ್ನು ರೈತರೂ ಬಳಸಬಹುದಾಗಿದೆ.

ಇದರಿಂದ ಉತ್ತಮವಾದ ಬೆಳೆ ಬೆಳೆಯುವುದರೊಂದಿಗೆ ಮಣ್ಣಿನ ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದಾಗಿದೆ. ಹರಳು ರೂಪದ ಪರ್ಯಾಯವಾಗಿ ನಾನ್ಯೊ ಯೂರಿಯಾ ಬಳಕೆಯಿಂದ ಉತ್ಪಾದನೆ ಹೆಚ್ಚಾಗುವುದರೊಂದಿಗೆ ಬೆಳೆ ಬೆಳೆಯುವ ಖರ್ಚೂ ಸಹ ಕಡಿಮೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ನಾನ್ಯೋ ಯೂರಿಯಾ ಅಂದರೇನು?;

ನಾನ್ಯೋ ಯೂರಿಯಾ ಒಂದು ದ್ರವ ರೂಪದ ರಸಗೊಬ್ಬರವಾಗಿದೆ.ಇದು ಸಾಂಪ್ರದಾಯಕ ಹರಳು ರೂಪದ ಯೂರಿಯಾ ಗೊಬ್ಬರಕ್ಕಿಂತ 8-10 ಪಟ್ಟು ಪರಿಣಾಮಕಾರಿಯಾಗಿದ್ದು, ಬೆಳೆಗಳಿಗೆ ತ್ವರಿತ ಪೋಷಕಾಂಶಗಳನ್ನು ನೀಡುತ್ತದೆ.

ನಾನ್ಯೋ ಯೂರಿಯಾದಿಂದಾಗುವ ಅನುಕೂಲಗಳು

ರಾಸಾಯನಿಕ ಬಳಕೆ ಕಡಿಮೆಯಾಗುತ್ತದೆ.
ನಾನ್ಯೋ ಯೂರಿಯಾ ಪರಿಣಾಮಕಾರಿಯಾಗಿದ್ದು, ಉತ್ಪಾದನೆ ಹೆಚ್ಚಳ.
ಮಣ್ಣಿನ ಆರೋಗ್ಯ ಸುಧಾರಣೆ ಆಗುತ್ತದೆ.
ರಸಗೊಬ್ಬರದ ಖರ್ಚು ಕಡಿಮೆ ಆಗುತ್ತದೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!