ಅತಿಯಾದ ಯುರಿಯಾ ಬಳಕೆಯಿಂದ ಸುಸ್ಥಿರ ಕೃಷಿಗೆ ಮಾರಕ; ಸಹಾಯಕ ಕೃಷಿ ನಿರ್ದೇಶಕ ಪಿ. ರಾಘವೇಂದ್ರ

Excessive use of urea is fatal to sustainable agriculture; Assistant Director of Agriculture P. Raghavendra

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ಉತ್ತಮವಾಗಿ ಮಳೆಯಾಗುತ್ತಿದ್ದು, ಶೇ.95 ರಷ್ಟು ಬಿತ್ತನೆ ಕಾರ್ಯವೂ ಸಹ ಮುಕ್ತಾಯಗೊಂಡಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಪಿ. ರಾಘವೇಂದ್ರ (P. Raghavendra) ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಬೆಳೆಯುವ ಬೆಳೆಯೆಂದರೆ ಪ್ರಮುಖವಾಗಿ ರಾಗಿಯಾಗಿದ್ದು, ಕುಂಟೆಯೊಡಯುವ ಹಂತದಿಂದ ತೆಂಡೆ ಹೊಡೆಯುವ ಹಂತದವರೆಗಿನ ಬೆಳೆಯನ್ನು ಕಾಣಬಹುದಾಗಿದೆ.

ರೈತರು ಕಳೆ ತೆಗೆದ ನಂತರ ತೆಂಡೆ ಹೊಡೆಯುವ ಹಂತದಲ್ಲಿ ಶೇ. 50 % ಹರಳು ರೂಪದ ಯೂರಿಯಾವನ್ನು ಮೇಲುಗೊಬ್ಬರವಾಗಿ ಬಳಸುತ್ತಿರುವುದು ವೈಜ್ಞಾನಿಕ ಶಿಫಾರಸ್ಸಾಗಿರುತ್ತದೆ.

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ರವರ ಶಿಫಾರಸ್ಸಿನ ಪ್ರಕಾರ (20:15:16) ಒಂದು ಎಕೆರೆ ಖುಷ್ಕಿ ರಾಗಿ ಬೆಳೆಗೆ 20 ಕೆ.ಜಿ. ಯಷ್ಟು ಸಾರಜನಕ ಬೇಕಾಗಿದ್ದು, ಶೇ 50 ರಷ್ಟು ಮೂಲಗೊಬ್ಬರವಾಗಿ 10 ಕೆ.ಜಿ ಬಿತ್ತನೆ ಸಮಯದಲ್ಲಿ ಉಳಿದ 10 ಕೆ.ಜಿ ಸಾರಜನಕ ಬಿತ್ತನೆ ಮಾಡಿದ 6-7 ವಾರಗಳ ನಂತರ ಮೇಲುಗೊಬ್ಬರವಾಗಿ ಕೊಡುವುದು. ಒಂದು ಯೂರಿಯಾ (45 ಕೆ.ಜಿ) ಚೀಲದಲ್ಲಿ ಶೇ.46 ರಷ್ಟು ಅಂದರೆ 20.7 ಕೆ.ಜಿಯಷ್ಟು ಸಾರಜನಕವಿದ್ದು, ಮೂಲಗೊಬ್ಬರಕ್ಕೆ 10 ಕೆ.ಜಿ ಸಾರಜನಕವನ್ನು ಒದಗಿಸುತ್ತದೆ. ಉಳಿದ 10 ಕೆ.ಜಿ ಯ ಸಾರಜನಕವನ್ನು ನೀಗಿಸಲೂ ಸಹ ಈ ಒಂದು ಚೀಲ ಯೂರಿಯಾ ಸಾಕಾಗುತ್ತದೆ.

ಮುಂದುವರೆದು ಒಂದು ಎಕೆರೆಗೆ ಒಂದು ಯೂರಿಯಾ ಚೀಲದಂತೆ ರೈತರು ಶಿಫಾರಸ್ಸು ಪ್ರಮಾಣಕ್ಕಿಂತ ಮಿತಿಮೀರಿ ಹರಳು ರೂಪದ ಯೂರಿಯಾ ಬಳಸುತ್ತಿದ್ದು, ಬೆಳೆಯ ಅವಶ್ಯಕಿಂತ ಹೆಚ್ಚಿಗೆ ಬಳಸಿದ ಯೂರಿಯ ಅಂಶವು ಮಣ್ಣಿನ ಆರೋಗ್ಯವನ್ನು ಹದಗೆಡುವುದಲ್ಲದೇ ಕುತ್ತಿಗೆ ಬೆಂಕಿ ರೋಗ, ಕೀಟಭಾದೆ ಮತ್ತು ಅಸಮತೋಲನ ಬೆಳವಣಿಗೆಯಿಂದ ಕಟಾವಿನ ಸಮಯದಲ್ಲಿ ನೆಲಕ್ಕುರುಳಿ ತೆನೆ ಮತ್ತು ಹುಲ್ಲು ನಷ್ಟವಾಗುತ್ತದೆ. ಅತಿಯಾದ ಯೂರಿಯಾ ಬಳಸುವುದರ ಮೂಲಕ ಬೆಳೆಗಳಲ್ಲಿ ನೈಟ್ರೇಟ್ ಅಂಶದಲ್ಲಿನ ಬದಲಾವಣೆಗಳಿಂದ ಆಹಾರ ಪಧಾರ್ಥಗಳಲ್ಲಿ ನೈಟ್ರೇಟ್ ಪ್ರಮಾಣ ಅಧಿಕವಾಗಿ ಕಾನ್ಸರ್ ರೋಗಕ್ಕೂ ಕಾರಣಾವಾಗಬಹುದಾಗಿದೆ.

ನದಿ-ಕೆರೆ ಜಲಮೂಲಗಳಿಗೆ ನೈಟ್ರೇಟ್ ಅಂಶಗಳು ಸೇರಿ ಕುಡಿಯುವ ನೀರಿನ ಗುಣಮಟ್ಟದಲ್ಲಿ ಏರುಪೇರಾಗಿ ಮಾನವನ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ.
ಈ ಅಪಾಯವನ್ನು ತಡೆಗಟ್ಟಲು ರಾಗಿ ಬೆಳೆಗೆ ಅವಶ್ಯಕತೆಯಿರುವಷ್ಟು ಅಂದರೆ ಪೋಟಾಷ್ ಅಂಶವುಳ್ಳ ಸಂಯುಕ್ತ ಗೊಬ್ಬರಗಳಾದ 15:15:15, 19:19:19 ನಂತಹ ಗೊಬ್ಬರಗಳನ್ನು ರೈತರೂ ಬಳಸಬಹುದಾಗಿದೆ.

ಇದರಿಂದ ಉತ್ತಮವಾದ ಬೆಳೆ ಬೆಳೆಯುವುದರೊಂದಿಗೆ ಮಣ್ಣಿನ ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದಾಗಿದೆ. ಹರಳು ರೂಪದ ಪರ್ಯಾಯವಾಗಿ ನಾನ್ಯೊ ಯೂರಿಯಾ ಬಳಕೆಯಿಂದ ಉತ್ಪಾದನೆ ಹೆಚ್ಚಾಗುವುದರೊಂದಿಗೆ ಬೆಳೆ ಬೆಳೆಯುವ ಖರ್ಚೂ ಸಹ ಕಡಿಮೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ನಾನ್ಯೋ ಯೂರಿಯಾ ಅಂದರೇನು?;

ನಾನ್ಯೋ ಯೂರಿಯಾ ಒಂದು ದ್ರವ ರೂಪದ ರಸಗೊಬ್ಬರವಾಗಿದೆ.ಇದು ಸಾಂಪ್ರದಾಯಕ ಹರಳು ರೂಪದ ಯೂರಿಯಾ ಗೊಬ್ಬರಕ್ಕಿಂತ 8-10 ಪಟ್ಟು ಪರಿಣಾಮಕಾರಿಯಾಗಿದ್ದು, ಬೆಳೆಗಳಿಗೆ ತ್ವರಿತ ಪೋಷಕಾಂಶಗಳನ್ನು ನೀಡುತ್ತದೆ.

ನಾನ್ಯೋ ಯೂರಿಯಾದಿಂದಾಗುವ ಅನುಕೂಲಗಳು

ರಾಸಾಯನಿಕ ಬಳಕೆ ಕಡಿಮೆಯಾಗುತ್ತದೆ.
ನಾನ್ಯೋ ಯೂರಿಯಾ ಪರಿಣಾಮಕಾರಿಯಾಗಿದ್ದು, ಉತ್ಪಾದನೆ ಹೆಚ್ಚಳ.
ಮಣ್ಣಿನ ಆರೋಗ್ಯ ಸುಧಾರಣೆ ಆಗುತ್ತದೆ.
ರಸಗೊಬ್ಬರದ ಖರ್ಚು ಕಡಿಮೆ ಆಗುತ್ತದೆ.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]