CKR 45 with Ambassador car Fellowship of BJP leaders: Video shared by B.Y. Vijayendra

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

ಬೆಂಗಳೂರು: ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದೆ. ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, 1988ರಲ್ಲಿ ಖರೀದಿಸಿದ ಅಂಬಾಸಿಡರ್ ಕಾರು ಅದಾಗಿದೆ. ಆ ಕಾರಿನ ಸಂಖ್ಯೆ ಸಿಕೆಆರ್ 45 ಆಗಿದ್ದು, ಇವತ್ತೂ ಅದು ನಮ್ಮ ಮನೆಯಲ್ಲಿದೆ ಎಂದು ತಿಳಿಸಿದರು.

ನಿನ್ನೆ ಶಿಕಾರಿಪುರದಲ್ಲಿ ಆ ಕಾರನ್ನು ಬಳಸಿದೆ. ರಾಜ್ಯದಲ್ಲಿ ಬಿಜೆಪಿ ಇಷ್ಟು ಎತ್ತರಕ್ಕೆ ಬೆಳೆದಿದ್ದರೆ, ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ ಸಿಕ್ಕಿದ್ದರೆ, ತಂದೆಯವರು ಬಳಸುತ್ತಿದ್ದ ಈ ಕಾರು ಪ್ರಮುಖ ಪಾತ್ರ ವಹಿಸಿದೆ. ಯಡಿಯೂರಪ್ಪಜೀ, ಅನಂತಕುಮಾರ್ ಜೀ, ಅನೇಕ ಹಿರಿಯರು ಅದೇ ಅಂಬಾಸಿಡರ್ ಕಾರಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಹಳ್ಳಿ ಹಳ್ಳಿಗೆ ತೆರಳಿದ್ದರು.

ರಾಯಚೂರು, ಗುಲ್ಬರ್ಗ, ಬಳ್ಳಾರಿ, ಯಾದಗಿರಿ ಸೇರಿ ಯಾವ ಜಿಲ್ಲೆಯನ್ನೂ ಬಿಟ್ಟಿಲ್ಲ ಎಂದು ನೆನಪಿಸಿದರು.
ಅದೇ ಅಂಬಾಸಿಡರ್ ಕಾರಿನಲ್ಲಿ ಲಕ್ಷಾಂತರ ಕಿಮೀ ಪ್ರವಾಸ ಮಾಡಿದ್ದಾರೆ. ಸಿಕೆಆರ್ 45 ಕಾರಿನ ಜೊತೆ ಬಹಳಷ್ಟು ಹಿರಿಯ ನಾಯಕರ ಒಡನಾಟ ಇದೆ. ಒಂದು ಆತ್ಮೀಯತೆ ಇದೆ.

ನಿನ್ನೆ ನಾನು ವಿಡಿಯೋ ಹಂಚಿಕೊಂಡಾಗ ಸಾಕಷ್ಟು ಹಿರಿಯ ಕಾರ್ಯಕರ್ತರು ನಾನು ನೆನಪು ಮಾಡಿಕೊಂಡಿದ್ದಕ್ಕೆ ನನಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು ನುಡಿದರು.

ಆ ಕಾರಿನ ಜೊತೆ ಭಾವನಾತ್ಮಕ ಸಂಬಂಧವಿದೆ. ಅದೊಂದು ರೀತಿ ಕಮಲ ರಥ ಎಂದರೆ ತಪ್ಪಾಗಲಾರದು ಎಂದು ವಿಶ್ಲೇಷಿಸಿದರು. ಹಿಂದೆ ಯಡಿಯೂರಪ್ಪನವರು ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರವಾಸ ಹೊರಟಿದ್ದರು. ನಾಯಕ್ ಎಂಬವರು ಚಾಲಕರಾಗಿದ್ದರು. ತರೀಕೆರೆಯಲ್ಲಿ ಬೆಳಿಗ್ಗೆ ಇದೇ ಕಾರು ಪಲ್ಟಿಯಾಗಿ ಅಪಘಾತ ಆಗಿತ್ತು. ಆದರೆ, ಯಾರಿಗೂ ಸಣ್ಣ ಗಾಯವೂ ಆಗಿರಲಿಲ್ಲ ಎಂದು ನೆನಪು ಮಾಡಿದರು. ಯಡಿಯೂರಪ್ಪನವರು ದಿನಪತ್ರಿಕೆ ಓದುತ್ತಿದ್ದರು. ಯಾರಿಗೂ ಸಣ್ಣ ಗಾಯವೂ ಆಗಿರಲಿಲ್ಲ ಎಂದು ವಿವರಿಸಿದರು.

ಆ ಕಾರು ಅಷ್ಟೇ ಗಟ್ಟಿಮುಟ್ಟಾಗಿತ್ತು ಎಂದ ಅವರು, ಸ್ನೇಹಿತರ ಜೊತೆ ಪ್ರವಾಸ ಹೋಗಬೇಕಿತ್ತು. ಆ ಕಾಲದಲ್ಲಿ ಯಾವುದೇ ವ್ಯವಸ್ಥೆ ಇರಲಿಲ್ಲ. ಕಾರಿಗಾಗಿ ತಂದೆಯವರ ಜೊತೆ ಗಲಾಟೆ ಮಾಡಿದ್ದೆ; ಆಗ ಸಾಹೇಬರು ಅದು ಪಕ್ಷದ ಕಾರು; ಹಾಗೆಲ್ಲ ಬಳಸಲು ಬರುವುದಿಲ್ಲ ಎಂದು ತಿಳಿಸಿದ್ದರು.

ಶಿಕಾರಿಪುರದಲ್ಲಿ ಕೆಲವು ಬಡವರು ಆಸ್ಪತ್ರೆಗೆ ಶಿವಮೊಗ್ಗಕ್ಕೆ ಹೋಗಬೇಕಿತ್ತು. ಆ ಕಾರನ್ನು ಕಳಿಸಿಕೊಡುತ್ತಿದ್ದರು. ಅದನ್ನು ತಂದೆಯವರಿಗೆ ನೆನಪಿಸಿದ್ದೆ. ಮಕ್ಕಳು ಕೇಳಿದರೆ ಕೊಡುವುದಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ನನಗೆರಡು ತಟ್ಟಿದ್ದರು ಎಂದು ನಗುತ್ತ ಮನದಾಳದ ನೆನಪುಗಳನ್ನು ಮಾಧ್ಯಮಗಳ ಮುಂದಿಟ್ಟರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!