SPREE-2025 Special Scheme for the Welfare of Workers

ಕಾರ್ಮಿಕರ ಕಲ್ಯಾಣಕ್ಕಾಗಿ ಸ್ಪ್ರೀ- 2025 ವಿಶೇಷ ಯೋಜನೆ

ಬೆಂಗಳೂರು: ಸ್ಪ್ರೀ- 2025 (SPREE-2025) (ಉದ್ಯೋಗದಾತರು ಮತ್ತು ಉದ್ಯೋಗಿಗಳನ್ನು ನೋಂದಾವಣೆ ಉತ್ತೇಜಿಸುವ ಯೋಜನೆ 2025) ಎಂಬ ಯೋಜನೆಯನ್ನು ಕಾರ್ಮಿಕರ ವಿಮಾ ನಿಗಮವು ಜಾರಿಗೆ ತಂದಿದ್ದು, ಈ ಯೋಜನೆಯು 2025ನೇ ಜುಲೈ 01 ರಿಂದ ಡಿಸೆಂಬರ್ 31 ವರೆಗೆ ಜಾರಿಯಲ್ಲಿರುತ್ತದೆ.

ಕಾರ್ಮಿಕ ಇಲಾಖೆಯು ಈ ಯೋಜನೆಯಡಿ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ನೋಂದಾವಣಿ ಮಾಡಲು ಒಂದು ಬಾರಿಯ ಅವಕಾಶವನ್ನು ನೀಡಿದೆ. ಈ ಅವಧಿಯಲ್ಲಿ ಉದ್ಯೋಗದಾತರು ನೋಂದಾವಣೆಯಾದಲ್ಲಿ ಹಿಂದಿನ ಅವಧಿಗೆ ಯಾವುದೇ ದಂಡ ಅಥವಾ ಬಾಕಿ ಪಾವತಿಯ ಅವಶ್ಯಕತೆ ಇರುವುದಿಲ್ಲ ಮತ್ತು ಯಾವುದೇ ತಪಾಸಣೆ ಇರುವುದಿಲ್ಲ.

ಉದ್ಯೋಗದಾತರು ತಮ್ಮಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಉದ್ಯೋಗಿಗಳನ್ನು ಒಳಗೊಂಡಂತೆ ಎಲ್ಲಾ ಉದ್ಯೋಗಿಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿದಲ್ಲಿ ನೋಂದಾವಣೆ ದಿನದಿಂದಲೇ ಕಾರ್ಮಿಕರ ವಿಮಾ ಕಾಯ್ದೆಯಡಿ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಹರಾಗುತ್ತಾರೆ.

ಈ ಯೋಜನೆಯ ಅನುಷ್ಠಾ್ನದಂತೆ ಮತ್ತು ಮುಖ್ಯ ಕಛೇರಿಯ ಸೂಚನೆಯಂತೆ ಉಪಪ್ರಾದೇಶಿಕ ಕಛೇರಿ, ಬೊಮ್ಮಸಂದ್ರ ಕಛೇರಿಯು ಫಲಾನುಭವಿಗಳ ಸಹಕಾರದಲ್ಲಿ ಮತ್ತು ರಾಜ್ಯ ಸರ್ಕಾರದ ವಿವಿಧ ಕಛೇರಿಗಳ ಸಹಯೋಗದೊಡನೆ ಹಲವಾರು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವಧಿಯಲ್ಲಿ ಉದ್ಯೋಗದಾತರು ಮತ್ತು ಉದ್ಯೋಗಿಗಳು ನೋಂದಾವಣೆಯಾದಲ್ಲಿ ಅವರಿಗೆ ದೊರಕುವ ಅನುಕೂಲತೆಗಳ ಬಗ್ಗೆ ಅರಿವನ್ನು ಮೂಡಿಸಲಾಗುತ್ತಿದೆ.

ಈ ಅವಧಿಯಲ್ಲಿ ಸಾವಿರಾರು ಉದ್ಯೋಗಿಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಲಾಗಿದೆ ಮತ್ತು ಅವರ ಅಗತ್ಯತೆಗಳಿಗೆ ಅನುಸಾರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದುವರವಗೂ ಈ ಕಛೇರಿಯು ವಿವಿಧ 23 ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಕೈಗಾರಿಕಾ ಸಂಘಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗಿದೆ ಮತ್ತು ಉದ್ಯೋಗಿಗಳನ್ನು ಸಾಮಾಜಿಕ ಸುರಕ್ಷತೆಯ ವ್ಯಾಪ್ತಿಗೆ ತರಲಾಗಿದೆ.

ಈ ಯೋಜನೆಯು ಒಂದು ಮೈಲಿಗಲ್ಲಾಗಿದ್ದು ಅರ್ಧ ಅವಧಿಯನ್ನು ಕ್ರಮಿಸಿ ಸಫಲತೆಯತ್ತ ಸಾಗುತ್ತಿದ್ದು, ಎಲ್ಲಾ ಉದ್ಯೋಗದಾತರು ಈ ಅವಧಿಯಲ್ಲಿ ತಮ್ಮ ಸಂಸ್ಥೆಗಳು, ಘಟಕಗಳನ್ನು ಹಾಗೂ ಉದ್ಯೋಗಿಗಳನ್ನು ನೋಂದಾವಣೆ ಮಾಡುವುದರ ಮೂಲಕ ಕಾರ್ಮಿಕರ ರಾಜ್ಯ ನಿಗಮದಿಂದ ದೊರೆಯುವ ಹಲವಾರು ರೀತಿಯ ವಿಮಾ ಸೌಲಭ್ಯಗಳನ್ನು ಪಡೆಯುವಂತೆ ಇಎಸ್ಐಸಿಯು ತಿಳಿಸಿದೆ.

ಇಎಸ್ಐಸಿಯ ಈ ಉಪಕ್ರಮವು ಸರಳ ಹಾಗೂ ತಡೆಹರಿತ ವ್ಯವಹಾರವನ್ನು ಪ್ರೋತ್ಸಾಹಿಸುತ್ತಾ ಉದ್ಯೋಗದಾತರು ಯಾವುದೇ ದಂಡಶುಲ್ಕವಿಲ್ಲದೆ ತಮ್ಮ ಸಂಸ್ಥೆಯನ್ನು ನೋಂದಾವಣೆ ಮಾಡಿಕೊಂಡು ಮತ್ತು ಉದ್ಯೋಗಿಗಳನ್ನು ನೋಂದಾವಣೆ ಮಾಡಿ ಆರೋಗ್ಯ ಸೌಲಭ್ಯ ಹಾಗೂ ಸಾಮಾಜಿಕ ಸುರಕ್ಷೆಯ ವ್ಯಾಪ್ತಿಯನ್ನು ವಿಸ್ತರಿಸುವುದರ ಜೊತೆಗೆ ಈ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವುದಾಗಿದೆ.

ಸ್ಪ್ರೀ ಯೋಜನೆ ಕುರಿತು ಮಾಹಿತಿಗಾಗಿ ಇ-ಮೇಲ್ sro-bommasandra@esic.nic.in ಅಥವಾ ದೂರವಾಣಿ ಸಂಖ್ಯೆ 080-26786391 ಸಂಪರ್ಕಿಸಬಹುದು ಎಂದು ಭಾರತ ಸರ್ಕಾರದ ಇ.ಎಸ್.ಐ.ಸಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!