BJP conspiracy against Dharmasthala: D.K. Shivakumar

ಧರ್ಮಸ್ಥಳ ವಿರುದ್ಧ ಬಿಜೆಪಿ ಷಡ್ಯಂತ್ರ: ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈ ಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಸಿಎಂ ಈಗಾಗಲೇ ಉತ್ತರ ನೀಡಿದ್ದಾರೆ. ಅವರ ಪಕ್ಷ ಅವರನ್ನು (ಪ್ರತಾಪ್ ಸಿಂಹ) ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕಿದೆ. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದಾರೆ. ಈ ಬಗ್ಗೆ ಕೋರ್ಟ್ ವಿಚಾರಣೆ ಮಾಡಿ, ತೀರ್ಮಾನ ಮಾಡಲಿದೆ” ಎಂದರು.

ನಾಡ ಹಬ್ಬ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ. ಅದನ್ನು ಬಿಟ್ಟು ಈ ರೀತಿ ಖಾಲಿ ಮಾತು ಆಡೋದು ಬೇಡ. ಕೇವಲ ಪ್ರಚಾರಕ್ಕೆ ಅವರೆಲ್ಲ ಹೀಗೆ ರಾಜಕೀಯ ಮಾಡುತ್ತಾರೆ” ಎಂದು ಹರಿಹಾಯ್ದರು.

ಬಿಜೆಪಿ ನಾಯಕರಿಂದಲೇ ಧರ್ಮಸ್ಥಳಕ್ಕೆ ಅಪಮಾನ

“ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿರುವವರು ನಾವು. ಆದರೆ ಅವರು ನಮಗಿಂತ ಮುಂಚಿತವಾಗಿ ಹೈಸ್ಪೀಡ್ ನಲ್ಲಿ ಹೊರಟಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಣ ತಿಕ್ಕಾಟಕ್ಕೆ ಧರ್ಮಸ್ಥಳವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬಲಿಪಶು ಮಾಡುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ” ಎಂದು ಕಿಡಿಕಾರಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಒಂದೆರಡು ದಿನಗಳಲ್ಲಿ ಬಿಜೆಪಿಯವರು ಮಾಡಿರುವ ಕಾನೂನನ್ನು ನಿಮ್ಮ ಮುಂದೆ ತಂದಿಡುತ್ತೇನೆ. ಅವರು ಮಾಡಿರುವ ಕಾನೂನಿನಲ್ಲಿ ಈ ಚುನಾವಣೆ ವೇಳೆ ಮತಯಂತ್ರ ಅಥವಾ ಮತಪತ್ರ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ? ಅವರು ಮಾಡಿರುವ ಕಾನೂನು ಪ್ರಕಾರ ನಡೆದರೆ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

ರಾಜಕೀಯ

ಮಲೇಷ್ಯಾದಲ್ಲಿ ರಾಹುಲ್ ಗಾಂಧಿ..ಫೋಟೋ ವೈರಲ್; ಬಿಜೆಪಿಗರ ಟೀಕೆ.. ಕಾಂಗ್ರೆಸಿಗರ ಸಮರ್ಥನೆ

ಮಲೇಷ್ಯಾದಲ್ಲಿ ರಾಹುಲ್ ಗಾಂಧಿ..ಫೋಟೋ ವೈರಲ್; ಬಿಜೆಪಿಗರ ಟೀಕೆ.. ಕಾಂಗ್ರೆಸಿಗರ ಸಮರ್ಥನೆ

ನವದೆಹಲಿ: ವೋಟ್ ಚೋರಿ ಕುರಿತು ಗಂಭೀರ ಆರೋಪ ಮಾಡಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು, ಮತದಾರರ ಅಧಿಕಾರ ಯಾತ್ರೆಯ ನಂತರ ಮಲೇಷ್ಯಾದ ಲಂಗ್ಕಾವಿಗೆ ವಿಶ್ರಾಂತಿಗೆಂದು ತೆರಳಿದ್ದಾರೆ. ಲಂಗ್ಕಾವಿ ಮಾರುಕಟ್ಟೆಯಲ್ಲಿ

[ccc_my_favorite_select_button post_id="113655"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಮದುವೆ ಕ್ಯಾನ್ಸಲ್.. ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ..!

ಮದುವೆ ಕ್ಯಾನ್ಸಲ್.. ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ..!

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ

[ccc_my_favorite_select_button post_id="113637"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!