Teachers' Day celebrations at MSV Public School

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶಾಲೆ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ಶಿಕ್ಷಕರ ದಿನಾಚರಣೆಯನ್ನು (Teachers’ Day) ಸಂಭ್ರಮದಿಂದ ಆಚರಿಸಲಾಯಿತು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಕ್ಕಳು ನಡೆಸಿಕೊಟ್ಟರು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ಶಿಕ್ಷಕರಿಗಾಗಿ ಮನರಂಜನಾ ಕ್ರೀಡೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ಸಂಸ್ಥೆಯ ಅಧ್ಯಕ್ಷರಾದ ಎ. ಸುಬ್ರಮಣ್ಯ ಮಾತನಾಡಿ, ಗುರು ಕೇವಲ ಪದವಲ್ಲ, ಗುರುವಿಗಿಂತಲೂ ಮಿಗಿಲಾದುದು ಯಾವುದೂ ಇಲ್ಲ. ಏಕೆಂದರೆ ನಮ್ಮ ಬಾಳಿನ ಅಂಧಕಾರವನ್ನು ತೊಲಗಿಸುವ ನಮ್ಮ ಬಾಳಿಗೆ ಬೆಳಕು ನೀಡುವ ಆಶಾಕಿರಣವೇ ಗುರು. ವಿದ್ಯಾರ್ಥಿ ಜೀವನದಲ್ಲಿ ಏನೇ ಮಹತ್ತರ ಸಾಧನೆ ಮಾಡಲು ಗುರುವಿನ ಮಾರ್ಗದರ್ಶನ ಬಹಳ ಮುಖ್ಯ ಮುಂದೆ ಗುರಿಯಿರಬೇಕು. ಹಿಂದೆ ಗುರುವಿರಬೇಕು ಆಗ ವಿದ್ಯಾರ್ಥಿ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಲು ಸಾಧ್ಯವಾಗುತ್ತದೆ.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ಹೀಗೆ ಶಿಕ್ಷಕರ ಹುದ್ದೆಯನ್ನು ಬಹಳ ಆನಂದಿಸಿ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಿ ನಂತರ ನಮ್ಮ ದೇಶದ ರಾಷ್ಟ್ರಪತಿ ಸ್ಥಾನದವರೆಗೆ ಏರಿದ ಮಹಾನ್ ಚೇತನ ನಮ್ಮ ನೆಚ್ಚಿನ ಗುರುಗಳಾದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನ ಇವರ ಜನ್ಮದಿನವನ್ನು ದೇಶದಾದ್ಯಂತ ಶಿಕ್ಷಕರ ದಿನವನ್ನಾಗಿ ಆಚರಿಸುತ್ತೇವೆ.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ರಾಧಾಕೃಷ್ಣನ್ ರವರು ಕೊಲ್ಕತ್ತಾ ವಿಶ್ವವಿದ್ಯಾಲಯದ ತತ್ವ ಶಾಸ್ತ್ರದ ಪ್ರಾಧ್ಯಾಪಕರಾಗಿ ನೇಮಕಗೊಂಡಾಗ ಮೈಸೂರಿನಿಂದ ಹೊರಟ ದಿನ ಅವರಿಗೆ ಕೊಟ್ಟಂತಹ ವೈಭವದ ಬೀಳ್ಕೊಡುಗೆ ಯಾವ ಚಕ್ರವರ್ತಿಗೂ ದೊರತಿರಲಾರದು. ಅಂದಿನ ವಾತಾವರಣದಲ್ಲಿದ್ದುದು ವೈಭವಕ್ಕಿಂತ ಹೆಚ್ಚಾಗಿ ಹೃದಯದಿಂದ ನೇರವಾಗಿ ಹೊರಹೊಮ್ಮಿದ ಗುರುಪ್ರೇಮ ವಿದ್ಯಾರ್ಥಿಗಳೆಲ್ಲರಲ್ಲೂ ಭಕ್ತಿ ಪ್ರೇಮದ ಚಿಲುಮೆ ಉಕ್ಕಿ ಬಂತು. ರಾಧಾಕೃಷ್ಣನ್ ಅವರನ್ನೂ ಮಹಾರಾಜ ಕಾಲೇಜಿನಿಂದ ರೈಲು ನಿಲ್ದಾಣಕ್ಕೆ ಕರೆದೊಯ್ಯುವಾಗ ಸಾರೋಟಿಗೆ ಕುದುರೆಯನ್ನು ಕಟ್ಟಲಿಲ್ಲ, ಸ್ವತಃ ವಿದ್ಯಾರ್ಥಿಗಳೇ ಎಳೆದೊಯ್ದರು.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಸರಸ್ವತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

ರಾಧಾಕೃಷ್ಣನ್ ರವರ ಕಾಂಪಾರ್ಟ್ ಮೆಂಟನ್ನು ಒರಗು ದಿಂಬು ಹಾಗೂ ರತ್ನಗಂಬಳಿಯನ್ನು ಹಾಕಿ ಮಲಗುವ ಸೀಟನ್ನು ನೆಲವನ್ನು ಹೂವಿನಿಂದ ಸುಪ್ಪತ್ತಿಗೆಯಂತೆ ಮಾಡಿ ದೈವ ಮಂದಿರದಂತೆ ಅಲಂಕಾರ ಮಾಡಿದ್ದರು ಎಂದು ತಿಳಿಸಿದರು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ಉಪಾಧ್ಯಕ್ಷ ಸ್ವರೂಪ್ ಮಾತನಾಡಿ, ಇತ್ತೀಚೆಗೆ ಬಾಹ್ಯಾಕಾಶಕ್ಕೆ ಹೋಗಿ ಬಂದ ಭಾರತದ ಹೆಮ್ಮೆಯ ಪುತ್ರ ಶುಭಾಂಶು ಶುಕ್ಲರವರ ಸಾಧನೆಯನ್ನು ಹಾಗೂ ಅವರು ಅಲ್ಲಿ ಕೈಗೊಂಡ ಅಧ್ಯಾಯಗಳ ಬಗ್ಗೆ, ಇದಕ್ಕೆ ಅವರ ಮಾರ್ಗದರ್ಶಕ ಗುರುಗಳ ಬಗ್ಗೆ ಅವರ ಮಹತ್ತರ ಕೊಡುಗೆಯ ಬಗ್ಗೆ ಹಾಗೇಯೇ ಮಕ್ಕಳಲ್ಲಿ ಭವಿಷ್ಯದ ಭರವಸೆಗಳನ್ನು ಮೂಡಿಸಿದರು. ಮತ್ತು ಮಕ್ಕಳು ಶುಭಾಂಶು ಶುಕ್ಲರವರಂತೆ ಅಗಾಧವಾದುದನ್ನು ಸಾಧಿಸಬೇಕು ಎಂದು ತಿಳಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ರೆಮ್ಯ ಬಿ.ವಿ. ಮಾತನಾಡಿ, ರಾಮಕೃಷ್ಣ ಪರಮಹಂಸ ಹಾಗೂ ವಿವೇಕಾನಂದರ ಗುರುಶಿಷ್ಯರ ಸಂಬಂಧದ ಬಗ್ಗೆ ತಿಳಿಸಿದರು. ಹಾಗೆಯೇ ವಿವೇಕಾನಂದರು ಜಗತ್ತಿಗೆ ನೀಡಿದ ಸಂದೇಶಗಳ ಬಗ್ಗೆ ಅವರು ಪಾಲಿಸಿದ ಶಿಸ್ತು ಸಂಯಮದ ಬಗ್ಗೆ ಹಾಗೂ ಅವರಲ್ಲಿದ್ದ ಏಕಾಗ್ರತೆಯ ಛಲ, ಧೈರ್ಯ ಸಾಹಸ ಗುಣಗಳನ್ನು ಕೊಂಡಾಡಿದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!