BJP leaders' job is to divide and set people on fire: DCM D.K. Shivakumar

ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

ಬೆಂಗಳೂರು: “ಕೋಮು ಭಾವನೆ ಕೆರಳಿಸಿ, cಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು.

ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟ ಹಾಗೂ ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಮದ್ದೂರಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದ ಬಗ್ಗೆ ಈಗಾಗಲೇ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯೆ ನಡಿದ್ದಾರೆ. ಹೊರ ರಾಜ್ಯಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ನನಗೆ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನನಗೆ ಸಂಪೂರ್ಣ ಮಾಹಿತಿ ಸಿಗದೇ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

“ಬಿಜೆಪಿಯವರಿಗೆ ರಾಜಕಾರಣ ಮಾಡುವುದು ಬಿಟ್ಟು ಬೇರೆ ಕೆಲಸ ಏನಿದೆ? ಅವರು ದೆಹಲಿಗೆ ಹೋಗಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ನರೇಗಾ ಅನುದಾನ, ಮೇಕೆದಾಟು, ಮಹದಾಯಿ ನೀರಾವರಿ ಯೋಜನೆಗಳಿಗೆ ಅನುಮತಿ ತೆಗೆದುಕೊಂಡು ಬರಲಿ” ಎಂದು ಸವಾಲೆಸೆದರು.

ಬೆಂಗಳೂರು ನಗರ ಶಾಸಕರ ಜೊತೆಗೆ ಸಿಎಂ ಸಭೆ ಬಗ್ಗೆ ಕೇಳಿದಾಗ, “ಈ ಸಭೆ ಮಂಗಳವಾರ ನಿಗದಿಯಾಗಿತ್ತು. ನಾನು ಕೊಯಮತ್ತೂರಿಗೆ ಹೋಗಬೇಕಿದ್ದ ಹಿನ್ನೆಲೆಯಲ್ಲಿ ಮುಂದೂಡುವಂತೆ ತಿಳಿಸಿದ್ದೆ. ಬುಧವಾರ ಸಂಜೆ ಈ ಸಭೆ ನಡೆದಿದೆ” ಎಂದು ತಿಳಿಸಿದರು.

ಜಿಬಿಎ ಅಡಿಯಲ್ಲಿ ರಚನೆಯಾಗಿರುವ ನೂತನ ಪಾಲಿಕೆಗಳಿಗೆ ಉಸ್ತುವಾರಿ ಸಚಿವರ ನೇಮಕದ ಬಗ್ಗೆ ಕೇಳಿದಾಗ, “ಮಂತ್ರಿಗಳು ಎಂದ ಮೇಲೆ ಕೇವಲ ತಮ್ಮ ಕ್ಷೇತ್ರಗಳ ಕೆಲಸ ಮಾತ್ರ ನೋಡುವುದಷ್ಟೇ ಅಲ್ಲ. ಇಡೀ ಜಿಲ್ಲೆ ಕಡೆ ಗಮನಹರಿಸಬೇಕು. ಕೆಲವು ಕಡೆ ನಾವು ಸೋತಿರುವ ಕ್ಷೇತ್ರಗಳಿವೆ. ಆ ಕ್ಷೇತ್ರಗಳಲ್ಲಿ ಸಮನ್ವಯತೆ ಸಾಧಿಸಬೇಕು. ಹೀಗಾಗಿ ಸಚಿವರಿಗೆ ಜವಾಬ್ದಾರಿ ವಹಿಸಲಾಗಿದೆ. ಇದರ ಜೊತೆಗೆ ಪಕ್ಷದ ವತಿಯಿಂದಲೂ ಸಂಘಟನೆ ವಿಚಾರವಾಗಿ ಜವಾಬ್ದಾರಿ ನೀಡಲಾಗುವುದು” ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಬಂಧನದ ವಿಚಾರವಾಗಿ ಕೇಳಿದಾಗ, “ಸತೀಶ್ ಸೈಲ್ ಅವರ ಬಂಧನದ ಅವಶ್ಯಕತೆ ಇರಲಿಲ್ಲ. ಈ ಪ್ರಕರಣದ ವಿಚಾರಣೆ 2010ರಿಂದಲೇ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರ ಮೇಲೆ ಮಾತ್ರ ಗುರಿಯಾಗಿಸಿ ಇಂತಹ ದಾಳಿಗಳು ನಡೆಯುತ್ತಿವೆ. ಆಮೂಲಕ ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡುವ ಕೆಲಸ ನಡೆಯುತ್ತಿದೆ” ಎಂದು ತಿಳಿಸಿದರು.

“ಜವಾಹರ್ ಬಾಲ ಮಂಚ್ ವತಿಯಿಂದ ಸುಮಾರು 24 ಮಕ್ಕಳನ್ನು ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರೀಯ ಶಿಬಿರಕ್ಕೆ ಕಳುಹಿಸಲಾಗುತ್ತಿದೆ. ಅವರಿಗೆ ಶುಭ ಹಾರೈಸುತ್ತಿದ್ದೇನೆ. ನಾನೇ ಈ ಮಕ್ಕಳ ಪ್ರಯಾಣ ವೆಚ್ಚವನ್ನು ಭರಿಸಿ ಕಳುಹಿಸುತ್ತಿದ್ದೇನೆ” ಎಂದು ತಿಳಿಸಿದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!