Legal awareness – assistance at MSV Public School, Doddaballapur

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಕಾನೂನು ಅರಿವು – ನೆರವು.. ನ್ಯಾಯಾಧೀಶರ ಮಾತಿಗೆ ಮಕ್ಕಳು ಫಿದಾ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದೊಡ್ಡಬಳ್ಳಾಪುರ ತಾಲ್ಲೂಕು ಕಾನೂನು ಸೇವಾ ಸಮಿತಿ, ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘ, ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ತಾಲೂಕಿನ ಪ್ರತಿಷ್ಠಿತ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ಮಂಗಳವಾರ ಕಾನೂನು ಅರಿವು-ನೆರವು ಕಾರ್ಯಕ್ರಮ ಹಾಗೂ ಪೌಷ್ಠಿಕಾಂಶ ದಿನಾಚರಣೆಯನ್ನು ಆಚರಿಸಲಾಯಿತು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಕಾನೂನು ಅರಿವು – ನೆರವು.. ನ್ಯಾಯಾಧೀಶರ ಮಾತಿಗೆ ಮಕ್ಕಳು ಫಿದಾ

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಡಿ. ಕ್ರಾಂತಿ ಕಿರಣ್ ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ 18 ವರ್ಷದ ಕೆಳಗಿನ ವಯಸ್ಸಿನವರು ವಾಹನ ಚಾಲನೆ ಮಾಡುತ್ತಿರುವುದು ಸರ್ವೇಸಾಮಾನ್ಯ ಎಂಬಂತಾಗಿದೆ. ಆದರೆ, ನ್ಯಾಯಾಲಯದಲ್ಲಿ ಇದರಿಂದ ಉಂಟಾಗುತ್ತಿರುವ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದು ಮಕ್ಕಳ ಹಿತದೃಷ್ಟಿಯಿಂದ ಸ್ವೀಕಾರಾರ್ಹವಲ್ಲ.

ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಬಾಲ್ಯ ಎಷ್ಟು ಅತ್ಯಗತ್ಯ ಎಂಬುದು ದೊಡ್ಡವರಾದ ಬಳಿಕ ನಿಮಗೆ ಅರಿವಿಗೆ ಬರುತ್ತದೆ. ವಿದ್ಯಾರ್ಥಿಗಳು ಸಿನಿಮಾಗಳಲ್ಲಿ ಇರುವಂತೆ Part 1 ಹಾಗೂ Part 2 ಎಂಬುದು ನಿಜ ಜೀವನದಲ್ಲಿ ಇರುವುದಿಲ್ಲ ಎಂಬುದನ್ನು ಅರಿತು ಜವಬ್ದಾರಿಯುತವಾಗಿ ವರ್ತಿಸಬೇಕಿದೆ ಎಂದು ಸಲಹೆ ನೀಡಿದರು.

ಇದೇ ವೇಳೆ ಹೆಣ್ಣು ಮಕ್ಕಳಿಗೆ ಕಾನೂನುಗಳ ಕುರಿತು ವಿವರಿಸಿದ ನ್ಯಾಯಾಧೀಶರಾದ ಡಿ‌. ಕ್ರಾಂತಿ ಕಿರಣ್ ಅವರು, ವಿವಾಹ ಪೂರ್ವ, ವಿವಾಹ ನಂತರ ನಡೆಯುವ ಶೋಷಣೆಗಳ ಬಗ್ಗೆ ಹಾಗೂ ಅವುಗಳನ್ನು ತಡೆಯುವ ಕುರಿತು ಹೇಳಿದರು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಕಾನೂನು ಅರಿವು – ನೆರವು.. ನ್ಯಾಯಾಧೀಶರ ಮಾತಿಗೆ ಮಕ್ಕಳು ಫಿದಾ

ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ರವಿ ಮಾವಿನಕುಂಟೆ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಮಕ್ಕಳಲ್ಲಿ ಕ್ಷೀಣಿಸುತ್ತಿರುವ ಮಾನವೀಯ ಮೌಲ್ಯಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ತಲುಪಲು ಮಾಡಬೇಕಾದ ಸುದೀರ್ಘ ತಪಸ್ಸಿನ ಬಗ್ಗೆ ತಿಳಿಸಿ, ಎಂ.ಎಸ್.ವಿ. ಶಾಲೆಯ ಶಿಸ್ತು ಸಂಯಮವನ್ನು ಪ್ರಶಂಸಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಆರೋಗ್ಯ ಅಧಿಕಾರಿ ಶಾರದ ನಾಗನಾಥ್ ಮಾತನಾಡಿ, ನಾವು ಪ್ರತಿದಿನ ಸೇವಿಸುತ್ತಿರುವ ಆಹಾರ ಪದ್ಧತಿ ಎಷ್ಟು ಸೂಕ್ತವಾಗಿದೆ, ಅದು ನಿಜವಾಗಿಯೂ ಹೇಗಿರಬೇಕೆಂದು ವಿವರಿಸಿದರು. ಅಲ್ಲದೆ ಪ್ರತಿದಿನ ತಪ್ಪದೇ ಕಾಯಿಪಲ್ಲೆಗಳನ್ನು, ಪೌಷ್ಠಿಕಾಂಶ ಇರುವ ಆಹಾರಗಳನ್ನು ಸೇವಿಸಬೇಕು. ಸಾಧ್ಯವಾದಷ್ಟು ಜಂಕ್ – ಫಾಸ್ಟ್ ಫುಡ್ ಪದ್ಧತಿಯ ಆಹಾರ ಸೇವನೆಯನ್ನು ತ್ಯಜಿಸಬೇಕು ಎಂದು ಸಲಹೆ ನೀಡಿದರು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಕಾನೂನು ಅರಿವು – ನೆರವು.. ನ್ಯಾಯಾಧೀಶರ ಮಾತಿಗೆ ಮಕ್ಕಳು ಫಿದಾ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ವಿನೋದ್ ರಾಜ್ ಮಾತನಾಡಿ, ಬಾಲ್ಯ ವಿವಾಹ ಕಾನೂನು ಬಾಹಿರವಾಗಿದ್ದು, ನಿಮ್ಮ ಸುತ್ತ ಮುತ್ತ ಎಲ್ಲಿಯಾದರೂ ಬಾಲ್ಯವಿವಾಹ ನಡೆಯುತ್ತಿದ್ದರೆ ಕೂಡಲೇ ಮಕ್ಕಳ ಸಹಾಯವಾಣಿ 1098 ಕ್ಕೆ ತಿಳಿಸಿ ಬಾಲ್ಯವಿವಾಹವನ್ನು ತಡೆಗಟ್ಟಲು ಸಹಕರಿಸುವ ಮೂಲಕ ನಾವೆಲ್ಲರೂ ಪಣ ತೊಡೋಣ ಎಂದರು.

ಎಂಎಸ್‌ವಿ ಪಬ್ಲಿಕ್ ಶಾಲೆಯ ಅಧ್ಯಕ್ಷರಾದ ಸುಬ್ರಮಣ್ಯ.ಎ ಅವರು “ವಿದ್ಯಾರ್ಥಿಗಳು ಪಾಲಿಸಬೇಕಾದ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಹಾಗೂ ಪೋಷಕರ ಜವಾಬ್ದಾರಿಗಳ ಬಗ್ಗೆ, ವಿದ್ಯಾರ್ಥಿದೆಸೆಯಲ್ಲಿ ಏಕಾಗ್ರತೆ ವೃದ್ಧಿಯಾಗಲು ಪೂರಕವಾದ ಆಹಾರ ಪದ್ಧತಿಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ರೆಮ್ಯ ಬಿ.ವಿ., ಅನೇಕ ನ್ಯಾಯವಾದಿಗಳು ಸೇರಿದಂತೆ ಶಿಕ್ಷಕವೃಂದ, ವಿದ್ಯಾರ್ಥಿವೃಂದ ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!