Love letter from Trump.. Prime Minister Modi's response..!

ಟ್ರಂಪ್‌ನಿಂದ ಪ್ರೇಮ ಪತ್ರ.. ಪ್ರಧಾನಿ ಮೋದಿ ಪ್ರತಿಕ್ರಿಯೆ..!

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಭಾರತದ ಮೇಲೆ ಶೇ.50 ರಷ್ಟು ದಂಡಾಸ್ತ್ರ ಪ್ರಯೋಗಿಸಿದ ಬಳಿಕ ಮತ್ತೆ ಭಾರತದ ಕಡೆಗೆ ಸ್ನೇಹ ಹಸ್ತ ಚಾಚಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ಮಾತುಕತೆ ನಡೆಸಲು ಉತ್ಸುಕವಾಗಿರುವುದಾಗಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ರೂಥ್ ನಲ್ಲಿ ಡೋನಾಲ್ಡ್ ಟ್ರಂಪ್ ಸಂದೇಶ ಬರೆದಿದ್ದು, ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳು ನಮ್ಮ ಎರಡೂ ರಾಷ್ಟ್ರಗಳ ನಡುವಿನ ವ್ಯಾಪಾರ ಅಡೆತಡೆಗಳನ್ನು ಪರಿಹರಿಸಲು ಮಾತುಕತೆಗಳನ್ನು ಮುಂದುವರಿಸುತ್ತಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ.

ಮುಂಬರುವ ವಾರಗಳಲ್ಲಿ ನನ್ನ ಆತ್ಮೀಯ ಸ್ನೇಹಿತ ಪ್ರಧಾನಿ ಮೋದಿಯವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಎರಡೂ ಮಹಾನ್ ದೇಶಗಳಿಗೆ ಯಶಸ್ವಿ ತೀರ್ಮಾನಕ್ಕೆ ಬರಲು ಯಾವುದೇ ತೊಂದರೆ ಇರುವುದಿಲ್ಲ ಎಂದು ನನಗೆ ಖಚಿತವಾಗಿದೆ! ಎಂದು ಅವರು ಬರೆದಿದ್ದಾರೆ.

ಮಿತ್ರ ಟ್ರಂಪ್ ಸಂದೇಶದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ಮತ್ತು ಅಮೆರಿಕ ನಿಕಟ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಮ್ಮ ವ್ಯಾಪಾರ ಮಾತುಕತೆಗಳು ಭಾರತ-ಅಮೆರಿಕ ಪಾಲುದಾರಿಕೆಯ ಅಪರಿಮಿತ ಸಾಮರ್ಥ್ಯವನ್ನು ಅನ್ಲಾಕ್ ಮಾಡಲು ದಾರಿ ಮಾಡಿಕೊಡುತ್ತವೆ ಎಂದು ನನಗೆ ವಿಶ್ವಾಸವಿದೆ.

ನಮ್ಮ ತಂಡಗಳು ಈ ಚರ್ಚೆಗಳನ್ನು ಆದಷ್ಟು ಬೇಗ ಮುಗಿಸಲು ಕೆಲಸ ಮಾಡುತ್ತಿವೆ. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಎರಡೂ ಜನರಿಗೆ ಉಜ್ವಲ, ಹೆಚ್ಚು ಸಮೃದ್ಧ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ.

ಅಮೇರಿಕಾ ಅಧ್ಯಕ್ಷ ಚುನಾವಣೆ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ರಂಪ್ ಪರವಾಗಿ ನಿಂತಿದ್ದರು. ಆದರೆ ಟ್ರಂಪ್ ಅಧ್ಯಕ್ಷರಾದ ಬಳಿಕ ಭಾರತದ ಮೇಲಿನ ನಿಲುವು ಬದಲಾಗಿ ನಿಯಮ ಮೀರಿ ದೇಶದೊಳಗೆ ಪ್ರವೇಶ ಮಾಡಿದ್ದಾರೆಂದು ಆರೋಪಿಸಿ ಭಾರತೀಯರಿಗೆ ಕೋಳ ತೊಡಿಸಿ ಅಮಾನವೀಯವಾಗಿ ಭಾರತಕ್ಕೆ ಗಡಿ ಪಾರು ಮಾಡಿದರು.

ಇದರ ಬೆನ್ನಲ್ಲೇ ಪಾಕ್ ಉಗ್ರಗಾಮಿಗಳು ಪಹಲ್ಗಾವ್ ನಲ್ಲಿ ನಡೆಸಿದ ಪ್ರವಾಸಿಗರ ಮೇಲೆ ದಾಳಿಗೆ ಉತ್ತರವಾಗಿ ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಅಪರೇಷನ್ ಸಿಂಧೂರ ವಿಚಾರ ಕದನ ವಿರಾಮಕ್ಕೆ ಕಾರಣ ನಾನೇ ಎಂದು ಸತತ 34 ಬಾರಿ ಹೇಳಿಕೆ ನೀಡಿದರು.

ಇದಾದ ಬಳಿಕ ಭಾರತ ರಷ್ಯಾದಿಂದ ಕಡಿಮೆ ಬೆಲೆಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿಸಿ ಲಾಭ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ, ಭಾರತದಿಂದ ಅಮೇರಿಕಾಗೆ ರಪ್ತಾಗುವ ಉತ್ಪನ್ನಗಳಿಗೆ ಆರಂಭಿಕವಾಗಿ ಶೇ.25 ರಷ್ಟು ತೆರಿಗೆ ವಿಧಿಸಿದರು. ಇದಕ್ಕೆ ಭಾರತ ಸೊಪ್ಪುಹಾಕದೇ ಇದ್ದಾಗ ಈ ತೆರಿಗೆ ಬರೆಯನ್ನು ಶೇ.50 ಕ್ಕೆ ಏರಿಸಿದರು. ಇದು ಆರಂಭಿಕವಾಗಿ ಭಾರತದ ಗಾರ್ಮೆಂಟ್ಸ್ ಕ್ಷೇತ್ರದ ಮೇಲೆ ಪರಿಣಾಮ ಬೀರಿದ್ದು, ಕಾರ್ಖಾನೆಗಳು ಬಾಗಿಲು ಮುಚ್ಚುವ ಆತಂಕ ಎದುರಾಗಿದೆ‌.

ಟ್ರಂಪರ ಈ ಎಲ್ಲಾ ವರ್ತನೆ ನಡುವೆಯೇ ಕಳೆದ ವಾರ ಚೀನಾದಲ್ಲಿ ನಡೆದ SCO ಶೃಂಗಸಭೆಯಲ್ಲಿ 7 ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡು ಚೀನಾ,ರಷ್ಯಾ ದೊಂದಿಗೆ ಮಾತುಕತೆ ನಡೆಸಿ ಅಮೇರಿಕಾ ನಿಲುವಿಗೆ ತಿರುಗೇಟು ನೀಡಿದ್ದರು.

ಈಗ ಮತ್ತೆ ಟ್ರಂಪ್ಗೆ ಜ್ಞಾನೋದಯ ಆದಂತೆ ಕಂಡುಬಂದಿದ್ದು, ಮತ್ತೆ ಭಾರತದ ಕಡೆಗೆ ಸ್ನೇಹ ಹಸ್ತ ಚಾಚಿದ್ದಾರೆ, ಇದಕ್ಕೆ ಪ್ರಧಾನಿ ಮೋದಿ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದು, ಮುಂದಿನ ಬೆಳವಣಿಗೆ ದೇಶದ ಜನತೆ ಕಾದು ನೋಡುತ್ತಿದ್ದಾರೆ. ಆದರೆ ಟ್ರಂಪ್ ಸಂದೇಶವನ್ನು ನೆಟ್ಟಿಗರು ಪ್ರೇಮ ಪತ್ರವೆಂದು ಕಿಚಾಯಿಸುತ್ತಿದ್ದಾರೆ.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!