Vishwa Hindu Parishad Bajrang Dal protest in Doddaballapur

ಮದ್ದೂರು ಗಲಭೆ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ

ದೊಡ್ಡಬಳ್ಳಾಪುರ: ಭಾನುವಾರ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ನಡೆದ ಕಲ್ಲು ತೂರಾಟ ಹಾಗೂ ರಾಜ್ಯಾದ್ಯಂತ ಗಣೇಶ ವಿಸರ್ಜನೆಗೆ ತಡೆ ಒಡ್ಡುತ್ತಿರುವುದು ಹಾಗೂ ಪ್ರಾಂತದ ಅನೇಕ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳ ಪ್ರವೇಶಕ್ಕೆ ನಿಷೇಧ ಒಡ್ಡುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳದ (Vishwa Hindu Parishad Bajrang Dal) ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಬಜರಂಗದಳ ಕೋಲಾರ ವಿಭಾಗ ಸಂಯೋಜಕ ನರೇಶ್ ರೆಡ್ಡಿ, ಬಜರಂಗದಳ ಜಿ ಸಂಯೋಜಕ ಕೃಷ್ಣಮೂರ್ತಿ, ನಮ್ಮ ದೇಶದ ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು ದೇಶಭಕ್ತರನ್ನು ಸಂಘಟಿಸಲು ಬಾಲಗಂಗಾಧರ್ ತಿಲಕ್ ಅವರು ಗಣೇಶ ಹಬ್ಬವನ್ನು ಸಾರ್ವಜನಿಕ ಗಣೇಶ ಹಬ್ಬವನ್ನಾಗಿ ಪರಿವರ್ತಿಸಿದರು. ಅಂದಿನಿಂದ ಇಂದಿನವರೆಗೂ ಸಹ ಗಣೇಶೋತ್ಸವು ಸಾರ್ವಜನಿಕ ಸ್ಥಳದಲ್ಲಿ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದೆ.

ನಮ್ಮ ರಾಜ್ಯದಲ್ಲಿ ಮದ್ದೂರು, ಸಾಗರ ಸೇರಿದಂತೆ ಅನೇಕ ಸ್ಥಳಗಳಲ್ಲಿ ಗಣೇಶ ಶೋಭಯಾತ್ರೆ ಹಾಗೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಅಲ್ಪಸಂಖ್ಯಾತರೆಂಬ ಹಣೆಪಟ್ಟಿ ಹೊತ್ತಿರುವ ಕಿಡಿಗೇಡಿಗಳಿಂದ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿದೆ. ಇವರ ಮೇಲೆ ರಾಜ್ಯ ಪೊಲೀಸರು ಯಾವುದೇ ಬಲವಾದ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಹಿಂದುಗಳ ಮೇಲೆಯೇ ದಬ್ಬಾಳಿಕೆ ನಡೆಯುತ್ತಿದೆ.

ಗಣೇಶನ ಉತ್ಸವಕ್ಕೆ ರಾಜ್ಯ ಸರ್ಕಾರವು ನಿಯಮಗಳ ಕಾರಣ ನೀಡಿ ಅನೇಕ ರೀತಿಯ ವಿಘ್ನಗಳನ್ನು, ಗಣೇಶನ ಭಕ್ತರ ಮೇಲೆ ಹೇರುತ್ತಿದೆ. ಈ ಉತ್ಸವದಲ್ಲಿ ಭಾಗವಹಿಸಲು ವಿಶ್ವ ಹಿಂದೂ ಪರಿಷತ್ತಿನ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರಿಗೆ ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿದೆ.

ಹಲವು ಕಡೆ ಧ್ವನಿ ವರ್ಧಕಗಳನ್ನು ಬಳಸಲು ನಿಷೇಧ ಹೇರಿದೆ. ಈ ದಿಸೆಯಲ್ಲಿ ನಮ್ಮ ರಾಜ್ಯದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಅನೇಕ ಮುಖಂಡರ ಮೇಲೆ ವಿಧಿಸಿರುವ ಜಿಲ್ಲಾ ಪ್ರವೇಶ ನಿಬಂಧ ಆದೇಶವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಹಾಗೂ ಗಣೇಶ ಉತ್ಸವ ಹಾಗೂ ಶೋಭಾ ಯಾತ್ರೆ ಮೆರವಣಿಗೆಗಳು ಸಂಭ್ರಮದಿಂದ ನಡೆಯಲು ಅನುಕೂಲ ಮಾಡಿಕೊಡಬೇಕು.

ಗಣೇಶೋತ್ಸವ ಶೋಭಾಯಾತ್ರೆಯ ಮೇಲೆ ಕಲು ತೂರಾಟ ಮಾಡುವವರ ಮೇಲೆ ಸಂಘಟಿತ ಅಪರಾಧ ಕಾಯ್ದೆ ಅನ್ವಯ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕಲ್ಲು ತೂರುವ ಸ್ಥಳಗಳ ಮೇಲೆ ಡ್ರೋನ್ ಕ್ಯಾಮೆರಾ ಅಳವಡಿಸಬೇಕೆಂದು, ರಾಜ್ಯ ಸರ್ಕಾರವನ್ನು ಆಗ್ರಹಿಸಿ, ಪ್ರತಿಭಟನಾ ಸಭೆ ನಡೆಸಿ ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆಗ್ರಹ ಪತ್ರ ನೀಡಲಾಗುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷದ್ ಸೇರಿದಂತೆ ಹಿಂದೂ ಪರ ಸಂಘಟನೆಯ ಪದಾಕಾರಿಗಳು ಭಾಗವಹಿಸಿದ್ದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!