Upalokayukta B. Veerappa issues instructions to officials

ದೊಡ್ಡಬಳ್ಳಾಪುರ ತಾಲ್ಲೂಕಿನ ದೂರುಗಳ ವಿಚಾರಣೆ: ಅಧಿಕಾರಿಗಳಿಗೆ ಉಪಲೋಕಾಯುಕ್ತ ಬಿ. ವೀರಪ್ಪ ಖಡಕ್ ಸೂಚನೆ

ಬೆಂ.ಗ್ರಾ.ಜಿಲ್ಲೆ: ಸರ್ಕಾರಿ ಕೆಲಸ ಎಲ್ಲರಿಗೂ ಸಿಗುವುದಿಲ್ಲ, ಸಿಕ್ಕಂತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಉಪಲೋಕಾಯುಕ್ತರಾದ ನ್ಯಾ. ಬಿ ವೀರಪ್ಪ (Upalokayukta B. Veerappa) ಅವರು ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೊಡ್ಡಬಳ್ಳಾಪುರ ತಾಲ್ಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಕಾನೂನು ಅಡಿಯಲ್ಲಿ ಕೆಲಸ ಮಾಡಿ. ಸರ್ಕಾರಿ ಕೆಲಸದಲ್ಲಿ ಇದ್ದವರು ತಪ್ಪು ಕೆಲಸ ಮಾಡಿ ಪಶ್ಚಾತ್ತಾಪ ಪಡುವುದಕ್ಕಿಂತ ಪ್ರಾಮಾಣಿಕವಾಗಿ ಕೆಲಸ ಮಾಡಿ ನೆಮ್ಮದಿ ಜೀವನ ನಡೆಸುವುದು ಮುಖ್ಯ ಎಂದರು.

ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದ್ದರೆ ಅಥವಾ ಕೇಸ್ ದಾಖಲಿಸಿದ್ದರೆ ಲೋಕಾಯುಕ್ತದಲ್ಲಿ ಕೇಸ್ ದಾಖಲಿಸಲು ಸಾಧ್ಯವಿಲ್ಲ. ಸುಳ್ಳು ಕೇಸ್ ಗಳಿಂದ ನಿಜ ಕೇಸ್ಗಳು ವಿಳಂಬವಾಗುತ್ತಿವೆ. ಇದರಿಂದ ನಿಷ್ಠಾವಂತ ಅಧಿಕಾರಿಗಳು ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿವೆ. ಸುಳ್ಳು ಕೇಸ್ ಹಾಕಿದವರಿಗೆ ನಿರ್ದಾಕ್ಷಿಣ್ಯವಾಗಿ ಶಿಕ್ಷೆ ನೀಡಲಾಗುತ್ತದೆ. ಸುಳ್ಳು ಕೇಸ್ ಹಾಕಿದವರಿಗೆ ಆರು ತಿಂಗಳು ಮೂರು ವರ್ಷ ಅಥವಾ ಐದು ವರ್ಷದವರೆಗೆ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದರು. ಕಾನೂನು ಯಾರನ್ನು ಬಿಡುವುದಿಲ್ಲ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು.

ಸರ್ಕಾರಿ ಆಸ್ತಿಯನ್ನು ಸಬ್ ರಿಜಿಸ್ಟರ್ ಅಧಿಕಾರಿಗಳು ಬೇರೊಬ್ಬರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಅಥವಾ ರಿಜಿಸ್ಟರ್ ಮಾಡಿಕೊಟ್ಟಿರುವುದು ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದ್ದು ಸಂಬಂಧಪಟ್ಟ ತಹಶೀಲ್ದಾರ್ ಅವರು ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ತಿಯನ್ನು ಜಿಪಿಎ ಮಾಡಿರುವ ಆಸ್ತಿಯನ್ನು ಸರ್ವೇ ಮಾಡಿ ವರದಿ ನೀಡುವಂತೆ ಮತ್ತು ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಚಿಕ್ಕ ತುಮಕೂರು ಕೆರೆಗೆ ಕಾರ್ಖಾನೆಗಳಿಂದ ತ್ಯಾಜ್ಯ ಸುರಿಯುತ್ತಿರುವುದರ ಬಗ್ಗೆ ಕ್ರಮವಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪಿಡಿಒ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಿಳಿಸಿದರು.

ಮುರುಳಿ ಮೋಹನ್ ಅವರು ಬಾಶೆಟ್ಟಿಹಳ್ಳಿ ಸರ್ವೇ ನಂ 34/3 ಒಂದು ಎಕರೆ 3 ಕುಂಟೆ ಜಾಗದಲ್ಲಿ 5 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡುತ್ತಿದ್ದು ಪಕ್ಕದಲಿ ಪೆಟ್ರೋಲ್ ಬಂಕ್ ಇದ್ದು ಮತ್ತು ಕಟ್ಟಡವು ರಸ್ತೆಯ ಪಕ್ಕಕ್ಕೆ ನಿರ್ಮಾಣಗೊಳ್ಳುತ್ತಿದೆ ಅದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿಯಿಂದ ಪ್ರಕರಣ ದಾಖಲಿಸಿದ್ದಾರೆ ಹಾಗಾಗಿ ಸಂಬಂಧಪಟ್ಟ ಮಾಲೀಕರು ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದಿದ್ದಾರೇ ಎಂಬುದನ್ನು ಪರಿಶೀಲಿಸಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಇದ್ದರೆ ಕಟ್ಟಡ ತೆರವುಗೊಳಿಸುವಂತೆ ಕ್ರಮ ವಹಿಸಿ ಎಂದರು.

ತಮಗೆ ಸಂಬಂಧವಿಲ್ಲದಿರುವ ಬೇರೆಯವರ ಪರ ಅರ್ಜಿ ಸಲ್ಲಿಸಿ ಪ್ರಕರಣ ದಾಖಲಿಸಿ ಬಂದಂತಹ ವ್ಯಕ್ತಿಗಳಿಗೆ ನೀವೇಕೆ ಬಂದಿದ್ದೀರಿ ಎಂದು ಪ್ರಶ್ನಿಸಿ, ನಿಮಗೆ ಏನಾದರೂ ಈ ಪ್ರಕ್ರಿಯೆ ನಡೆಸಲು ಅನುಮತಿ ಪತ್ರ ಕೊಟ್ಟಿದ್ದಾರೆ ತೋರಿಸಿ ಎಂದರು ಅನುಮತಿ ಪತ್ರ ನೀಡದವರನ್ನು ತರಾಟೆಗೆ ತೆಗೆದುಕೊಂಡು ಇದು ವೈಯಕ್ತಿಕ ವಿಚಾರ ಸಂಬಂಧಪಟ್ಟ ವ್ಯಕ್ತಿಯೇ ಕೇಸ್ ದಾಖಲಿಸಬೇಕು ಎಂದರು.

ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಭೂ ಒತ್ತುವರಿ, ಜಮೀನು ಸರ್ವೇ ಕಾರ್ಯ, ಸರ್ಕಾರಿ ರಸ್ತೆ, ಸ್ಮಶಾನ ಒತ್ತುವರಿ ಸೇರಿದಂತೆ ವಿವಿಧ ಪ್ರಕರಣಗಳ ವಿಚಾರಣೆ, ವಿಲೇವಾರಿ ನಡೆಸಲಾಯಿತು.

ದೊಡ್ಡಬಳ್ಳಾಪುರದ ಕೆಲವು ಕೆರೆಗಳಿಗೆ ಕಸ ತಂದು ಸುರಿಯುತ್ತಿರುವುದು ಮಾಲಿನ್ಯ ಉಂಟಾಗಿ ಸುತ್ತ ಮುತ್ತಲಿನ ಹಳ್ಳಿಗಳಿಗೆ, ಕೆರೆಗೆ, ಪರಿಸರಕ್ಕೆ ಹಾನಿ ಉಂಟಾಗಿದೆ. ಯಾಕೆ ಇದುವರೆಗೆ ಕ್ರಮ ಆಗಿಲ್ಲ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿಕೆ ಬಾಬಾ, ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಶಿಕೃಷ್ಣ, ಉಪ ನಿಬಂಧಕರಾದ ಅರವಿಂದ್ ಎನ್.ವಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ದೂರುದಾರರು ಹಾಜರಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ಶಂಕುಸ್ಥಾಪನೆ ಕಂಡು 2 ವರ್ಷ 10 ತಿಂಗಳು ಕಳೆದರು ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪದೇ ಪದೇ ಅಪಘಾತಕ್ಕೆ (Accident) ಒಳಗಾಗುತ್ತಿರುವ ಘಟನೆ ರಾಜಘಟ್ಟ ಕೆರೆ ಏರಿ ಮೇಲೆ ನಡೆಯುತ್ತಿದೆ.

[ccc_my_favorite_select_button post_id="120455"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!