Upalokayukta B. Veerappa issues instructions to officials

ದೊಡ್ಡಬಳ್ಳಾಪುರ ತಾಲ್ಲೂಕಿನ ದೂರುಗಳ ವಿಚಾರಣೆ: ಅಧಿಕಾರಿಗಳಿಗೆ ಉಪಲೋಕಾಯುಕ್ತ ಬಿ. ವೀರಪ್ಪ ಖಡಕ್ ಸೂಚನೆ

ಬೆಂ.ಗ್ರಾ.ಜಿಲ್ಲೆ: ಸರ್ಕಾರಿ ಕೆಲಸ ಎಲ್ಲರಿಗೂ ಸಿಗುವುದಿಲ್ಲ, ಸಿಕ್ಕಂತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಉಪಲೋಕಾಯುಕ್ತರಾದ ನ್ಯಾ. ಬಿ ವೀರಪ್ಪ (Upalokayukta B. Veerappa) ಅವರು ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೊಡ್ಡಬಳ್ಳಾಪುರ ತಾಲ್ಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಕಾನೂನು ಅಡಿಯಲ್ಲಿ ಕೆಲಸ ಮಾಡಿ. ಸರ್ಕಾರಿ ಕೆಲಸದಲ್ಲಿ ಇದ್ದವರು ತಪ್ಪು ಕೆಲಸ ಮಾಡಿ ಪಶ್ಚಾತ್ತಾಪ ಪಡುವುದಕ್ಕಿಂತ ಪ್ರಾಮಾಣಿಕವಾಗಿ ಕೆಲಸ ಮಾಡಿ ನೆಮ್ಮದಿ ಜೀವನ ನಡೆಸುವುದು ಮುಖ್ಯ ಎಂದರು.

ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದ್ದರೆ ಅಥವಾ ಕೇಸ್ ದಾಖಲಿಸಿದ್ದರೆ ಲೋಕಾಯುಕ್ತದಲ್ಲಿ ಕೇಸ್ ದಾಖಲಿಸಲು ಸಾಧ್ಯವಿಲ್ಲ. ಸುಳ್ಳು ಕೇಸ್ ಗಳಿಂದ ನಿಜ ಕೇಸ್ಗಳು ವಿಳಂಬವಾಗುತ್ತಿವೆ. ಇದರಿಂದ ನಿಷ್ಠಾವಂತ ಅಧಿಕಾರಿಗಳು ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿವೆ. ಸುಳ್ಳು ಕೇಸ್ ಹಾಕಿದವರಿಗೆ ನಿರ್ದಾಕ್ಷಿಣ್ಯವಾಗಿ ಶಿಕ್ಷೆ ನೀಡಲಾಗುತ್ತದೆ. ಸುಳ್ಳು ಕೇಸ್ ಹಾಕಿದವರಿಗೆ ಆರು ತಿಂಗಳು ಮೂರು ವರ್ಷ ಅಥವಾ ಐದು ವರ್ಷದವರೆಗೆ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದರು. ಕಾನೂನು ಯಾರನ್ನು ಬಿಡುವುದಿಲ್ಲ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು.

ಸರ್ಕಾರಿ ಆಸ್ತಿಯನ್ನು ಸಬ್ ರಿಜಿಸ್ಟರ್ ಅಧಿಕಾರಿಗಳು ಬೇರೊಬ್ಬರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಅಥವಾ ರಿಜಿಸ್ಟರ್ ಮಾಡಿಕೊಟ್ಟಿರುವುದು ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದ್ದು ಸಂಬಂಧಪಟ್ಟ ತಹಶೀಲ್ದಾರ್ ಅವರು ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ತಿಯನ್ನು ಜಿಪಿಎ ಮಾಡಿರುವ ಆಸ್ತಿಯನ್ನು ಸರ್ವೇ ಮಾಡಿ ವರದಿ ನೀಡುವಂತೆ ಮತ್ತು ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಚಿಕ್ಕ ತುಮಕೂರು ಕೆರೆಗೆ ಕಾರ್ಖಾನೆಗಳಿಂದ ತ್ಯಾಜ್ಯ ಸುರಿಯುತ್ತಿರುವುದರ ಬಗ್ಗೆ ಕ್ರಮವಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪಿಡಿಒ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಿಳಿಸಿದರು.

ಮುರುಳಿ ಮೋಹನ್ ಅವರು ಬಾಶೆಟ್ಟಿಹಳ್ಳಿ ಸರ್ವೇ ನಂ 34/3 ಒಂದು ಎಕರೆ 3 ಕುಂಟೆ ಜಾಗದಲ್ಲಿ 5 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡುತ್ತಿದ್ದು ಪಕ್ಕದಲಿ ಪೆಟ್ರೋಲ್ ಬಂಕ್ ಇದ್ದು ಮತ್ತು ಕಟ್ಟಡವು ರಸ್ತೆಯ ಪಕ್ಕಕ್ಕೆ ನಿರ್ಮಾಣಗೊಳ್ಳುತ್ತಿದೆ ಅದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿಯಿಂದ ಪ್ರಕರಣ ದಾಖಲಿಸಿದ್ದಾರೆ ಹಾಗಾಗಿ ಸಂಬಂಧಪಟ್ಟ ಮಾಲೀಕರು ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದಿದ್ದಾರೇ ಎಂಬುದನ್ನು ಪರಿಶೀಲಿಸಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಇದ್ದರೆ ಕಟ್ಟಡ ತೆರವುಗೊಳಿಸುವಂತೆ ಕ್ರಮ ವಹಿಸಿ ಎಂದರು.

ತಮಗೆ ಸಂಬಂಧವಿಲ್ಲದಿರುವ ಬೇರೆಯವರ ಪರ ಅರ್ಜಿ ಸಲ್ಲಿಸಿ ಪ್ರಕರಣ ದಾಖಲಿಸಿ ಬಂದಂತಹ ವ್ಯಕ್ತಿಗಳಿಗೆ ನೀವೇಕೆ ಬಂದಿದ್ದೀರಿ ಎಂದು ಪ್ರಶ್ನಿಸಿ, ನಿಮಗೆ ಏನಾದರೂ ಈ ಪ್ರಕ್ರಿಯೆ ನಡೆಸಲು ಅನುಮತಿ ಪತ್ರ ಕೊಟ್ಟಿದ್ದಾರೆ ತೋರಿಸಿ ಎಂದರು ಅನುಮತಿ ಪತ್ರ ನೀಡದವರನ್ನು ತರಾಟೆಗೆ ತೆಗೆದುಕೊಂಡು ಇದು ವೈಯಕ್ತಿಕ ವಿಚಾರ ಸಂಬಂಧಪಟ್ಟ ವ್ಯಕ್ತಿಯೇ ಕೇಸ್ ದಾಖಲಿಸಬೇಕು ಎಂದರು.

ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಭೂ ಒತ್ತುವರಿ, ಜಮೀನು ಸರ್ವೇ ಕಾರ್ಯ, ಸರ್ಕಾರಿ ರಸ್ತೆ, ಸ್ಮಶಾನ ಒತ್ತುವರಿ ಸೇರಿದಂತೆ ವಿವಿಧ ಪ್ರಕರಣಗಳ ವಿಚಾರಣೆ, ವಿಲೇವಾರಿ ನಡೆಸಲಾಯಿತು.

ದೊಡ್ಡಬಳ್ಳಾಪುರದ ಕೆಲವು ಕೆರೆಗಳಿಗೆ ಕಸ ತಂದು ಸುರಿಯುತ್ತಿರುವುದು ಮಾಲಿನ್ಯ ಉಂಟಾಗಿ ಸುತ್ತ ಮುತ್ತಲಿನ ಹಳ್ಳಿಗಳಿಗೆ, ಕೆರೆಗೆ, ಪರಿಸರಕ್ಕೆ ಹಾನಿ ಉಂಟಾಗಿದೆ. ಯಾಕೆ ಇದುವರೆಗೆ ಕ್ರಮ ಆಗಿಲ್ಲ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿಕೆ ಬಾಬಾ, ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಶಿಕೃಷ್ಣ, ಉಪ ನಿಬಂಧಕರಾದ ಅರವಿಂದ್ ಎನ್.ವಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ದೂರುದಾರರು ಹಾಜರಿದ್ದರು.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಯುವಕ ಆತ್ಮಹತ್ಯೆ..! ಕಾರಣ ನಿಗೂಢ

ದೊಡ್ಡಬಳ್ಳಾಪುರ: ಯುವಕ ಆತ್ಮಹತ್ಯೆ..! ಕಾರಣ ನಿಗೂಢ

22ವರ್ಷದ ಯುವಕ ನೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ** ಬುಧವಾರ ರಾತ್ರಿ ನಡೆದಿದೆ.

[ccc_my_favorite_select_button post_id="113770"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!