Asia Cup: ಇಂದು ಭಾರತ – ಪಾಕ್ ಕ್ರಿಕೆಟ್ ಪಂದ್ಯ.. ತೀವ್ರ ವಿರೋಧ, ಬಹಿಷ್ಕಾರಕ್ಕೆ ಕರೆ

Asia Cup: India-Pak cricket match today.. Call for boycott

ನವದೆಹಲಿ: ತೀವ್ರ ವಿರೋಧದ ನಡುವೆಯೂ ಏಷ್ಯಾಕಪ್ (Asia Cup) ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

ಈಗಾಗಲೇ ಏಷ್ಯಾ ಕಪ್ ಐದು ಪಂದ್ಯಗಳ ಮುಕ್ತಾಯ ಕಂಡಿದ್ದು, ಬಹುನಿರೀಕ್ಷಿತ ಭಾರತ ಹಾಗೂ ಪಾಕ್ ತಂಡಗಳು ಇಂದು ಸಂಜೆ 8 ಗಂಟೆಗೆ ಯುಎಇ ಕ್ರೀಡಾಂಗಣದಲ್ಲಿ ಮುಖಮುಖಿಯಾಗಲಿದ್ದು, ಈ ಪಂದ್ಯ ಚರ್ಚೆಗೆ ಕಾರಣವಾಗಿದೆ.

ಈಗಾಗಲೇ ಭಾರತವು ಯುಎಇ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದರೆ, ಇತ್ತ ಪಾಕ್ ಕೂಡ ಒಮಾನ್ ವಿರುದ್ಧ ಜಯಗಳಿಸಿದೆ. ಇದರ ನಡುವೆಯೇ ಉಭಯ ತಂಡಗಳು ಇಂದು ಮುಖಾಮುಖಿಯಾಗಲಿದ್ದು, ಉಭಯ ತಂಡಗಳಿಗೆ ಪ್ರತಿಷ್ಠೆಯ ಪಂದ್ಯ ಇದಾಗಿದೆ.

ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲವಾದರೆ ಕ್ರಿಕೆಟ್ ಪಂದ್ಯ ಹೇಗೆ ಸಾಧ್ಯ..?

ಪಹಲ್ಲಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ (Ind Vs Pak) ನಡುವೆ ಇದ್ದ ಅಲ್ಪ ಸ್ವಲ್ಪ ಸಂಬಂಧ ಕೂಡ ಕಡಿತವಾಗಿದ್ದು, ಇದರಿಂದ ರಾಜಕೀಯ, ಆರ್ಥಿಕ, ಹಾಗೂ ಕ್ರೀಡೆ ಮೇಲೆ ಕೂಡ ಪ್ರಭಾವ ಬೀರಿದೆ.

ಆದರೆ ಇದೀಗ ಇವೆಲ್ಲದರ ನಡುವೆ ಸಾಕಷ್ಟು ವಿರೋಧದ ನಡುವೆಯೂ ಪಂದ್ಯ ನಡೆಯುತ್ತಿರುವುದು ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲವಾದರೆ ಕ್ರಿಕೆಟ್ ಪಂದ್ಯ ಹೇಗೆ ಸಾಧ್ಯ ಎಂಬ ಪ್ರಶ್ನೆ ವ್ಯಾಪಕವಾಗಿ ಕೇಳಿಬರುತ್ತಿದೆ.

ಅಪರೇಷನ್ ಸಿಂಧೂರ ಜಾರಿಯಲ್ಲಿ ಇದೆ ಎಂದು ಕೇಂದ್ರ ಸರ್ಕಾರ ಹೇಳಿದ್ದರು, ಭಾರತ ಮತ್ತು ಪಾಕಿಸ್ತಾನದ ನಡುವೆ ಕ್ರಿಕೆಟ್ ಹೇಗೆ ನಡೆಸಲಾಗುತ್ತಿದೆ.

ದೇಶದ ಅಮಾಯಕ ಜನ ಸಾವನಪ್ಪಿದ್ದಾರೆ ಆದರೆ ಕೇಂದ್ರ ಸರ್ಕಾರ ಕ್ರಿಕೆಟ್ ಹೇಗೆ ನಡೆಸಲು ಅವಕಾಶ ನೀಡಿದೆ ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಿವೆ.

ಪಹಲ್ಗಾವ್ ದಾಳಿ ವೇಳೆ ಬಿಜೆಪಿ ಪೋಸ್ಟ್ ಮಾಡಿದ್ದ ಫೋಟೋವನ್ನು ಬಳಸಿತ್ತು. ಈಗ ಅದೇ ಪೋಟೋವನ್ನು ತಿದ್ದುಪಡಿ ಮಾಡಿ ಭಾರತ-ಪಾಕ್ ನಡುಗೆ ಇಂದು ನಡೆಯಲಿರುವ ಪಂದ್ಯಾವಳಿಯನ್ನು ಬಹಿಷ್ಕಾರಿಸಲು ಕರೆ ನೀಡಲಾಗುತ್ತಿದೆ.

ಐಶಾನ್ಯಾ ದ್ವಿವೇದಿ ಪ್ರತಿಕ್ರಿಯೆ

ಪಹಾಲ್ಗಾವ್ ದಾಳಿ ವೇಳೆ ಮಡಿದ ಶುಭಂ ದ್ವಿವೇದಿಯವರ ಪತ್ನಿ ಐಶಾನ್ಯಾ ದ್ವಿವೇದಿ ಪ್ರತಿಕ್ರಿಯೆ ನೀಡಿ, 26 ಕುಟುಂಬಗಳ ಹುತಾತ್ಮತೆಯ ಭಾವನೆಗಳನ್ನು ಬಿಸಿಸಿಐ ಅರ್ಥಮಾಡಿಕೊಂಡಿಲ್ಲ ಎಂದು ನಾನು ಭಾವಿಸುತ್ತೇನೆ ಏಕೆಂದರೆ ಅವರ ಕುಟುಂಬದಿಂದ ಯಾರೂ ಸಾವನ್ನಪ್ಪಿಲ್ಲ. ನಾನು ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಅವರಿಗೆ ಹರ್‌ಘರ್‌ಗಳಿಂದ ಸಿಂಧೂರ..!

ಇನ್ನೂ ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಉಗ್ರರ ದಾಳಿ ವೇಳೆ ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದ ಪ್ರಧಾನಮಂತ್ರಿ ಮೋದಿ ಅವರು ಕ್ರಿಕೆಟ್ ಪಂದ್ಯ ನಡೆಸಲು ಹೇಗೆ ಅವಕಾಶ ನೀಡಿದ್ದಾರೆ.

ಭಾರತೀಯರ ದೇಶಾಭಿಮಾನವನ್ನು ಬಲಿ ಕೊಟ್ಟು ದುಡ್ಡು ಮಾಡುವ ಉದ್ದೇಶದಿಂದ ಕ್ರಿಕೆಟ್ ಆಡಿಸಲು ಅನುಮತಿ ನೀಡಿರುವುದು ಸರಿಯಲ್ಲ. ದೇಶ ಭಕ್ತಿಯನ್ನು ವ್ಯಾಪಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ, ಈ ಪಂದ್ಯದಿಂದ ಸಿಗುವ ದುಡ್ಡಿಗಾಗಿ ದೇಶ ಸಾಯಲಿ, ದೇಶದ ಜನ ಸಾಯಲಿ ನಮಗೆ ಚಿಂತೆ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಇಂತವರು ನಮಗೆ ದೇಶ ಭಕ್ತಿಯ ಪಾಠ ಹೇಳಿಕೊಡಲು ಬರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಇಂದು ಮಹಾರಾಷ್ಟ್ರ ರಾಜ್ಯದಲ್ಲಿ ಶಿವಸೇನೆಯ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದು, ಆಪರೇಷನ್ ಸಿಂಧೂರ ವೇಳೆ ಹರ್‌ಘರ್ ಸಿಂಧೂರ ಕಾರ್ಯಕ್ರಮ ಬಿಜೆಪಿ ಆಯೋಜಿಸಿತ್ತು. ಆದರೆ ಇಂದು ಕೇಂದ್ರ ಸರ್ಕಾರದ ದ್ವಿಮುಖ ನೀತಿ ಖಂಡಿಸಿ, ಮೋದಿ ಅವರಿಗೆ ಹರ್‌ಘರ್‌ಗಳಿಂದ ಸಿಂಧೂರ ಕಳಿಸುತ್ತೇವೆ ಎಂದಿದ್ದಾರೆ.

ಈಗಾಗಲೇ ಸಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ದುಬೈನಲ್ಲಿ ಇಂದು ನಡೆಯಲಿರುವ ಪಂಧ್ಯದ ಬಗ್ಗೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಪಂದ್ಯಾವಳಿ ಆರಂಭಕ್ಕೆ ಮುನ್ನ ಆಟಗಾರರು ಪಹಲ್ಗಾವ್ ದಾಳಿಯಲ್ಲಿ ಮೃತಪಟ್ಟ ಭಾರತೀಯರಿಗೆ ಶ್ರದ್ಧಾಂಜಲಿ ಸಲ್ಲಿಸುವರೇ.‌.? ಇವರ ಜೊತೆ ಪಾಕಿಸ್ತಾನದ ಕ್ರೀಡಾಪಟುಗಳು ಶ್ರದ್ಧಾಂಜಲಿ ಸಲ್ಲಿಸಿ, ತಮ್ಮದೇ ದೇಶದ ಉಗ್ರರ ದಾಳಿಯನ್ನು ಖಂಡಿಸುವರೇ ಎಂದು ಪ್ರಶ್ನೆ ಮಾಡಲಾಗುತ್ತಿದೆ.

ಒಟ್ಟಾರೆ ಇಂದು ನಡೆಯಲಿರುವ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಾವಳಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]