Asia Cup- India wins against Pakistan

ಗುಡ್ಮಾರ್ನಿಂಗ್ ನ್ಯೂಸ್: Asia Cup- ಪಾಕ್ ವಿರುದ್ಧ ಭಾರತಕ್ಕೆ ಗೆಲುವು

ದುಬೈ: ಭಾರತೀಯ ಯೋಧರು ಮತ್ತು ಇತರೆ ವಲಯಗಳಿಂದ ಪಾಕಿಸ್ತಾನದ ವಿರುದ್ದ ಏಷ್ಯಾ ಕಪ್ (Asia Cup) ಟಿ20 ಪಂದ್ಯ ಬಹಿಷ್ಕರಿಸಿ ಎಂಬ ಒತ್ತಾಯಕ್ಕೆ ಯಾವುದೇ ಬೆಲೆ ನೀಡದೆ ಭಾನುವಾರ ಇಲ್ಲಿ ಭಾರತ- ಪಾಕಿಸ್ತಾನ ನಡುವೆ ಪಂದ್ಯ ನಡೆಯಿತು.

ಪಾಕಿಸ್ತಾನ ತಂಡವನ್ನು ಎಲ್ಲ ವಿಭಾಗಗಳಲ್ಲೂ ಹಣಿದ ಭಾರತ 7 ವಿಕೆಟ್ ಗಳಿಂದ ಜಯ ಸಾಧಿಸಿತು. ಈ ವರ್ಷ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲೂ ಪಾಕಿಸ್ತಾ ನದ ವಿರುದ್ಧ ಭಾರತ ಗೆದ್ದಿತ್ತು.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಪಾಕಿಸ್ತಾನ ಅಲ್ಲೇ ಎಡವಿತು. ಆರಂಭದಿಂದಲೇ ಕುಸಿಯತೊಡಗಿದ ಅದು 20 ಓವರ್‌ಗಳಲ್ಲಿ 9 ವಿಕೆಟ್‌ಗೆ 127 ರನ್ ಗಳಿಸಿತು. ಇದನ್ನು ಹಿಂಬಾಲಿಸಿ ಹೊರಟ ಭಾರತ 15.5 ಓವರ್‌ಗಳಲ್ಲಿ 3 ವಿಕೆಟ್‌ಗೆ 131 ರನ್ ಗಳಿಸಿತು. ಇನ್ನೂ 25 ಎಸೆತಗಳು ಬಾಕಿಯಿರುವಂತೆಯೇ ಗೆಲುವು ಸಾಧಿಸಿತು.

ತಂಡದ ಪರ ಆರಂಭಿಕ ಅಭಿಷೇಕ್ ಶರ್ಮಾ ಸ್ಪೋಟಕವಾಗಿ ಬ್ಯಾಟ್ ಮಾಡಿ ಬರೀ 13 ಎಸೆತಗಳಲ್ಲಿ 31 ರನ್ ಚಚ್ಚಿದರು. ನಾಯಕ ಸೂರ್ಯಕುಮಾ‌ರ್ ಯಾದವ್ 37 ಎಸೆತಗಳಲ್ಲಿ ಅಜೇಯ 47 ರನ್ ಗಳಿಸಿದರು. ಕಡೆಯಲ್ಲಿ ತಿಲಕ್ ವರ್ಮಾ 31 ರನ್ ಬಾರಿಸಿದರು.

ಹಸ್ತಲಾಘವಕ್ಕೆ ಉಭಯ ನಾಯಕರ ನಿರಾಕರಣೆ

ಭಾನುವಾರದ ಟಾಸ್‌ಗೂ ಮುನ್ನ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಪಾಕ್ ನಾಯಕ ಸಲ್ಮಾನ್ ಅಲಿ ಆಘಾ ಹಸ್ತಲಾಘವ ನಿರಾಕರಿಸಿದರು. ಟೂರ್ನಿ ಆರಂಭಕ್ಕೂ ಮುನ್ನ ನಡೆದಿದ್ದ ನಾಯಕರ ಸುದ್ದಿಗೋಷ್ಠಿಯಲ್ಲಿಯೂ ಇವರಿಬ್ಬರು ಹಸ್ತಲಾಘವ ಮಾಡಿರಲಿಲ್ಲ. ಇದೀಗ ಆನ್‌ಫೀಲ್ಡ್‌ನಲ್ಲಿಯೂ ಉಭಯ ನಾಯಕರ ಈ ಸಮರ ಮುಂದುವರಿಯಿತು. ಪಹಲ್ಗಾಮ್ ಉಗ್ರರ ದಾಳಿ ಮತ್ತು ಆಪರೇಶನ್ ಸಿಂದೂರದ ಬಳಿಕ ಇತ್ತಂಡಗಳ ನಡುವೆ ನಡೆಯುತ್ತಿರುವ ಮೊದಲ ಪಂದ್ಯವಾಗಿದೆ. ಪಂದ್ಯವನ್ನು ಬಹಿಷ್ಕರಿಸಿ ಎಂಬ ಕೂಗಿನ ಹಿನ್ನೆಲೆಯಲ್ಲಿ ಪಂದ್ಯ ಮಹತ್ವ ಪಡೆದಿತ್ತು.

ಬಿಜೆಪಿ-ಕಾಂಗ್ರೆಸ್‌ನ ಹಲವು ನಾಯಕರಿಂದ ವಿರೋಧ

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಪಂದ್ಯ ನಾಡುತ್ತಿರುವುದು ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಪಹಲ್ಲಾಮ್ ಘಟನೆಯ ಬಳಿಕ ಪಾಕಿಸ್ತಾನ ದೊಂದಿಗೆ ಎಲ್ಲ ರೀತಿಯ ಸಂಬಂಧಕ್ಕೆ ಬ್ರೇಕ್ ಹಾಕಲಾಗಿದೆ. ಈ ಮಧ್ಯೆ ಪಾಕಿಸ್ತಾನ ಮತ್ತು ಭಾರತದ ನಡುವಿನ ವಿಷ್ಯಾ ಕಪ್ ಕ್ರಿಕೆಟ್ ಪಂದ್ಯವಾಡಲು ಅವಕಾಶ ನೀಡಿದ್ದಕ್ಕಾಗಿ ದೇಶದಲ್ಲಿ ವಿರೋಧ ವ್ಯಕ್ತವಾಗಿದೆ.

ಬಿಜೆಪಿ ನಾಯಕರು ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಸರಕಾರದ ವಿರುದ್ದ ಪ್ರತಿಪಕ್ಷನಾಯಕರು ಕಿಡಿಕಾರುತ್ತಿದ್ದಾರೆ. ವಿಶ್ವ ಗುರು ಎಂದು ಬೇರೆ ಯುದ್ಧ ನಿಲ್ಲಿಸುವ ತಾಕತ್ತು ಇರುವ ಪ್ರಧಾನಿ ಮೋದಿಯವರಿಗೆ ಇಂಡೋ ಪಾಕ್ ಮಧ್ಯದ ಪಂದ್ಯ ನಿಲ್ಲಿಸಲು ಆಗೋಲ್ವ ಎಂದು ಲೇವಡಿ ಮಾಡುತ್ತಿದ್ದಾರೆ. ಬಾಯ್ಕಾಟ್ ಇಂಡಿಯಾ ವರ್ಸಸ್ ಪಾಕಿಸ್ತಾನ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ಅಭಿಯಾನ ಶುರು ಆಗಿದೆ.

ಪಾಕಿಸ್ತಾನ ವಿರುದ್ಧ ಆಡುತ್ತಿರುವುದಕ್ಕೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ನೇತೃತ್ವ ದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಹಿಳಾ ಘಟಕದ ಕಾರ್ಯಕರ್ತೆಯರು ಸಿಂದೂರ ಹಾಗೂ ಕ್ಯಾಂಡೆಲ್ ಹಿಡಿದು ಪ್ರತಿಭಟನೆ ನಡೆಸಿದರು. ಆದರೆ ಈ ವೇಳೆ ಬಿಜೆಪಿ ಬೆಂಬಲಿತರೆನ್ನಲಾದ ಯುವಕರು, ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ರಾಜಕೀಯ

ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕಿನಲ್ಲಿ ಬೆಳಕು: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕಿನಲ್ಲಿ ಬೆಳಕು: ಡಿಸಿಎಂ ಡಿ.ಕೆ. ಶಿವಕುಮಾರ್

"ನಮ್ಮ‌ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಬದುಕಿನಲ್ಲಿ ಬೆಳಕು ಬಂದಿದೆ. ಈ ಹಸ್ತ ರೈತರ, ಬಡವರ, ಕೂಲಿಕಾರ್ಮಿಕರ, ಮಹಿಳೆಯರ ಬದುಕನ್ನು ಭದ್ರ‌ ಮಾಡಿದೆ": ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="113909"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: Asia Cup- ಪಾಕ್ ವಿರುದ್ಧ ಭಾರತಕ್ಕೆ ಗೆಲುವು

ಗುಡ್ಮಾರ್ನಿಂಗ್ ನ್ಯೂಸ್: Asia Cup- ಪಾಕ್ ವಿರುದ್ಧ ಭಾರತಕ್ಕೆ ಗೆಲುವು

ಭಾರತೀಯ ಯೋಧರು ಮತ್ತು ಇತರೆ ವಲಯಗಳಿಂದ ಪಾಕಿಸ್ತಾನದ ವಿರುದ್ದ ಏಷ್ಯಾ ಕಪ್ (Asia Cup) ಟಿ20 ಪಂದ್ಯ ಬಹಿಷ್ಕರಿಸಿ ಎಂಬ ಒತ್ತಾಯಕ್ಕೆ ಯಾವುದೇ ಬೆಲೆ ನೀಡದೆ ಭಾನುವಾರ ಇಲ್ಲಿ ಭಾರತ- ಪಾಕಿಸ್ತಾನ ನಡುವೆ ಪಂದ್ಯ

[ccc_my_favorite_select_button post_id="113903"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!