ಗುಡ್ಮಾರ್ನಿಂಗ್ ನ್ಯೂಸ್: Asia Cup- ಪಾಕ್ ವಿರುದ್ಧ ಭಾರತಕ್ಕೆ ಗೆಲುವು

Asia Cup- India wins against Pakistan

ದುಬೈ: ಭಾರತೀಯ ಯೋಧರು ಮತ್ತು ಇತರೆ ವಲಯಗಳಿಂದ ಪಾಕಿಸ್ತಾನದ ವಿರುದ್ದ ಏಷ್ಯಾ ಕಪ್ (Asia Cup) ಟಿ20 ಪಂದ್ಯ ಬಹಿಷ್ಕರಿಸಿ ಎಂಬ ಒತ್ತಾಯಕ್ಕೆ ಯಾವುದೇ ಬೆಲೆ ನೀಡದೆ ಭಾನುವಾರ ಇಲ್ಲಿ ಭಾರತ- ಪಾಕಿಸ್ತಾನ ನಡುವೆ ಪಂದ್ಯ ನಡೆಯಿತು.

ಪಾಕಿಸ್ತಾನ ತಂಡವನ್ನು ಎಲ್ಲ ವಿಭಾಗಗಳಲ್ಲೂ ಹಣಿದ ಭಾರತ 7 ವಿಕೆಟ್ ಗಳಿಂದ ಜಯ ಸಾಧಿಸಿತು. ಈ ವರ್ಷ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲೂ ಪಾಕಿಸ್ತಾ ನದ ವಿರುದ್ಧ ಭಾರತ ಗೆದ್ದಿತ್ತು.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಪಾಕಿಸ್ತಾನ ಅಲ್ಲೇ ಎಡವಿತು. ಆರಂಭದಿಂದಲೇ ಕುಸಿಯತೊಡಗಿದ ಅದು 20 ಓವರ್‌ಗಳಲ್ಲಿ 9 ವಿಕೆಟ್‌ಗೆ 127 ರನ್ ಗಳಿಸಿತು. ಇದನ್ನು ಹಿಂಬಾಲಿಸಿ ಹೊರಟ ಭಾರತ 15.5 ಓವರ್‌ಗಳಲ್ಲಿ 3 ವಿಕೆಟ್‌ಗೆ 131 ರನ್ ಗಳಿಸಿತು. ಇನ್ನೂ 25 ಎಸೆತಗಳು ಬಾಕಿಯಿರುವಂತೆಯೇ ಗೆಲುವು ಸಾಧಿಸಿತು.

ತಂಡದ ಪರ ಆರಂಭಿಕ ಅಭಿಷೇಕ್ ಶರ್ಮಾ ಸ್ಪೋಟಕವಾಗಿ ಬ್ಯಾಟ್ ಮಾಡಿ ಬರೀ 13 ಎಸೆತಗಳಲ್ಲಿ 31 ರನ್ ಚಚ್ಚಿದರು. ನಾಯಕ ಸೂರ್ಯಕುಮಾ‌ರ್ ಯಾದವ್ 37 ಎಸೆತಗಳಲ್ಲಿ ಅಜೇಯ 47 ರನ್ ಗಳಿಸಿದರು. ಕಡೆಯಲ್ಲಿ ತಿಲಕ್ ವರ್ಮಾ 31 ರನ್ ಬಾರಿಸಿದರು.

ಹಸ್ತಲಾಘವಕ್ಕೆ ಉಭಯ ನಾಯಕರ ನಿರಾಕರಣೆ

ಭಾನುವಾರದ ಟಾಸ್‌ಗೂ ಮುನ್ನ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಪಾಕ್ ನಾಯಕ ಸಲ್ಮಾನ್ ಅಲಿ ಆಘಾ ಹಸ್ತಲಾಘವ ನಿರಾಕರಿಸಿದರು. ಟೂರ್ನಿ ಆರಂಭಕ್ಕೂ ಮುನ್ನ ನಡೆದಿದ್ದ ನಾಯಕರ ಸುದ್ದಿಗೋಷ್ಠಿಯಲ್ಲಿಯೂ ಇವರಿಬ್ಬರು ಹಸ್ತಲಾಘವ ಮಾಡಿರಲಿಲ್ಲ. ಇದೀಗ ಆನ್‌ಫೀಲ್ಡ್‌ನಲ್ಲಿಯೂ ಉಭಯ ನಾಯಕರ ಈ ಸಮರ ಮುಂದುವರಿಯಿತು. ಪಹಲ್ಗಾಮ್ ಉಗ್ರರ ದಾಳಿ ಮತ್ತು ಆಪರೇಶನ್ ಸಿಂದೂರದ ಬಳಿಕ ಇತ್ತಂಡಗಳ ನಡುವೆ ನಡೆಯುತ್ತಿರುವ ಮೊದಲ ಪಂದ್ಯವಾಗಿದೆ. ಪಂದ್ಯವನ್ನು ಬಹಿಷ್ಕರಿಸಿ ಎಂಬ ಕೂಗಿನ ಹಿನ್ನೆಲೆಯಲ್ಲಿ ಪಂದ್ಯ ಮಹತ್ವ ಪಡೆದಿತ್ತು.

ಬಿಜೆಪಿ-ಕಾಂಗ್ರೆಸ್‌ನ ಹಲವು ನಾಯಕರಿಂದ ವಿರೋಧ

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಪಂದ್ಯ ನಾಡುತ್ತಿರುವುದು ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಪಹಲ್ಲಾಮ್ ಘಟನೆಯ ಬಳಿಕ ಪಾಕಿಸ್ತಾನ ದೊಂದಿಗೆ ಎಲ್ಲ ರೀತಿಯ ಸಂಬಂಧಕ್ಕೆ ಬ್ರೇಕ್ ಹಾಕಲಾಗಿದೆ. ಈ ಮಧ್ಯೆ ಪಾಕಿಸ್ತಾನ ಮತ್ತು ಭಾರತದ ನಡುವಿನ ವಿಷ್ಯಾ ಕಪ್ ಕ್ರಿಕೆಟ್ ಪಂದ್ಯವಾಡಲು ಅವಕಾಶ ನೀಡಿದ್ದಕ್ಕಾಗಿ ದೇಶದಲ್ಲಿ ವಿರೋಧ ವ್ಯಕ್ತವಾಗಿದೆ.

ಬಿಜೆಪಿ ನಾಯಕರು ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಸರಕಾರದ ವಿರುದ್ದ ಪ್ರತಿಪಕ್ಷನಾಯಕರು ಕಿಡಿಕಾರುತ್ತಿದ್ದಾರೆ. ವಿಶ್ವ ಗುರು ಎಂದು ಬೇರೆ ಯುದ್ಧ ನಿಲ್ಲಿಸುವ ತಾಕತ್ತು ಇರುವ ಪ್ರಧಾನಿ ಮೋದಿಯವರಿಗೆ ಇಂಡೋ ಪಾಕ್ ಮಧ್ಯದ ಪಂದ್ಯ ನಿಲ್ಲಿಸಲು ಆಗೋಲ್ವ ಎಂದು ಲೇವಡಿ ಮಾಡುತ್ತಿದ್ದಾರೆ. ಬಾಯ್ಕಾಟ್ ಇಂಡಿಯಾ ವರ್ಸಸ್ ಪಾಕಿಸ್ತಾನ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ಅಭಿಯಾನ ಶುರು ಆಗಿದೆ.

ಪಾಕಿಸ್ತಾನ ವಿರುದ್ಧ ಆಡುತ್ತಿರುವುದಕ್ಕೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ನೇತೃತ್ವ ದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಹಿಳಾ ಘಟಕದ ಕಾರ್ಯಕರ್ತೆಯರು ಸಿಂದೂರ ಹಾಗೂ ಕ್ಯಾಂಡೆಲ್ ಹಿಡಿದು ಪ್ರತಿಭಟನೆ ನಡೆಸಿದರು. ಆದರೆ ಈ ವೇಳೆ ಬಿಜೆಪಿ ಬೆಂಬಲಿತರೆನ್ನಲಾದ ಯುವಕರು, ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]