CM Siddaramaiah is an ambassador of conversion: Opposition leader R. Ashoka attacks

ಸಿಎಂ ಸಿದ್ದರಾಮಯ್ಯ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್.ಅಶೋಕ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Cmsiddaramaiah) ಎಂದರೆ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದಂತಹ ಜಾತಿಗಳನ್ನು ಅವರು ಸೃಷ್ಟಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka)

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಹುಟ್ಟುಹಾಕಿದ್ದಾರೆ. ಇಂತಹ ಜಾತಿ ಸಮೀಕ್ಷೆ ರದ್ದಾಗಲಿದೆ. ಈ ಸಮೀಕ್ಷೆ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಿ, ಹಿಂದೂಗಳನ್ನು ತುಳಿಯಲಾಗುತ್ತಿದೆ. ಏನೇ ಮಾಡಿದರೂ ಸಂವಿಧಾನದ ಪ್ರಕಾರ ಮಾಡಲಿ. ಮೀಸಲಾತಿಗೆ ಸಂಬಂಧಿಸಿದಂತೆ ಕೋರ್ಟ್‌ ಆದೇಶವಿದೆ. ಅದರ ಪ್ರಕಾರ ಕ್ರಮ ವಹಿಸಲಿ ಎಂದರು.

ಸಿಎಂ ಸಿದ್ದರಾಮಯ್ಯ ಎಲ್ಲದರಲ್ಲೂ ಮುಸ್ಲಿಂ ಓಲೈಕೆ ಮಾಡುತ್ತಾರೆ. ಹಿಂದೂಗಳ ಮತ ಮಾತ್ರ ಬೇಕು. ಮತ ಸಿಕ್ಕ ನಂತರ ಹಿಂದೂ ಧರ್ಮದಲ್ಲಿ ಲೋಪವಿದೆ ಎಂದಿದ್ದಾರೆ. ಮುಸ್ಲಿಮರಲ್ಲಿ ಮಹಿಳೆಯರು ಮಸೀದಿಗೆ ಹೋಗುವಂತಿಲ್ಲ. ಇದು ಕೂಡ ತಪ್ಪೆಂದು ಅವರಿಗೆ ಅನ್ನಿಸಲಿಲ್ಲ. ಅಂದರೆ ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ. ಕೇವಲ ಹಿಂದೂ ಧರ್ಮವನ್ನು ಟಾರ್ಗೆಟ್‌ ಮಾಡುವ ಬದಲು ಬೇರೆ ಧರ್ಮಗಳ ಬಗ್ಗೆ ಕೂಡ ಮಾತಾಡಲಿ ಎಂದರು.

ದಸರಾ ಹಬ್ಬವನ್ನು ನಾಡಹಬ್ಬ, ಹಿಂದೂಗಳ ಹಬ್ಬ ಎನ್ನುತ್ತಾರೆ. ಅದೇ ರೀತಿ ಮುಸ್ಲಿಂ ಹಬ್ಬಗಳನ್ನು ಕೂಡ ನಾಡಹಬ್ಬ ಎನ್ನಲಿ ಮತ್ತು ಮುಸ್ಲಿಂ ಹಬ್ಬಗಳನ್ನು ಹಿಂದೂಗಳ ಕೈಯಲ್ಲಿ ಉದ್ಘಾಟನೆ ಮಾಡಿಸಲಿ. ದಸರಾ ಉದ್ಘಾಟನೆಯನ್ನು ಹಿಂದೂಗಳ ಕೈಯಲ್ಲಿ ಮಾಡಿಸಬೇಕಿತ್ತು. ಈ ಹಬ್ಬವನ್ನು ಮೈಸೂರು ಅರಸರು ಮಾಡಿಕೊಂಡು ಬಂದಿದ್ದಾರೆ. ಇದು ಪರಂಪರೆಯೇ ಹೊರತು ಕಾನೂನಲ್ಲ. ಆದ್ದರಿಂದ ಇದಕ್ಕಾಗಿ ಪ್ರತ್ಯೇಕ ಕಾನೂನು ತರುವ ಅಗತ್ಯವಿದೆ. ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದು ಎಂಬಂತೆ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರದಿಂದ ಹಿಂದೂ-ಮುಸ್ಲಿಂ ನಡುವೆ ಒಡಕು ಮೂಡಿದೆ ಎಂದರು.

ಬೆಂಗಳೂರಿನಲ್ಲಿ 5,000 ಕೋಟಿ ರೂ. ಬಿಡುಗಡೆಯಾಗಿದ್ದರೂ ರಸ್ತೆ ದುರಸ್ತಿ ಮಾಡಿಲ್ಲ. ಶುದ್ಧ ಕುಡಿಯುವ ನೀರಿನ ಘಟಕದ 20 ಲೀಟರ್‌ ನೀರಿನ ದರವನ್ನು 5 ರಿಂದ 10 ರೂ. ಗೆ ಏರಿಸಲಾಗಿದೆ. ತೈಲ ದರ, ಹಾಲಿನ ದರ ಏರಿಕೆ, ಹೊಸದಾಗಿ ಕಸ ಶುಲ್ಕ ಹೇರಲಾಗಿದೆ. ಇನ್ನು ಗಾಳಿಗೂ ಶುಲ್ಕ ತಂದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K. Shivakumar) ಅವರ ಬ್ರ್ಯಾಂಡ್‌ ಬೆಂಗಳೂರು ಸಾಕಾರವಾಗಲಿದೆ. 65-70,000 ಕೋಟಿ ರೂ.ನಷ್ಟು ಹೆಚ್ಚುವರಿ ತೆರಿಗೆಯನ್ನು ಹೇರಲಾಗಿದೆ ಎಂದರು.

ಕಾಂಗ್ರೆಸ್‌ ಬಂದ ನಂತರ ಪಾಲಿಕೆಯನ್ನು ಐದು ಹೋಳು ಮಾಡಲಾಗಿದೆ. 198 ವಾರ್ಡ್‌ಗೆ 90% ನಷ್ಟು ಇಂಜಿನಿಯರ್‌ ಇಲ್ಲ. ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ? ಒಂದು ಸಾವಿರಕ್ಕೂ ಅಧಿಕ ನೇಮಕಾತಿ ಮಾಡಿದರೆ ಹಣ ಎಲ್ಲಿಂದ ತರುತ್ತಾರೆ? ಬಹಳ ಕಡೆ ಶಂಕುಸ್ಥಾಪನೆಯಾಗಿ, ಕಾಮಗಾರಿ ಸ್ಥಗಿತವಾಗಿದೆ. ಇಂತಹ ಸ್ಥಿತಿಯಲ್ಲಿ ಆಡಳಿತ ನಡೆಯುವುದಿಲ್ಲ ಎಂದರು.

ವಯನಾಡಿನಲ್ಲಾದ ಆನೆಯಿಂದ ಸತ್ತವರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಹಾಸನದಲ್ಲಿ ನಡೆದ ಘಟನೆಯಲ್ಲಿ ಸಂತ್ರಸ್ತರಿಗೆ ಮಾನವೀಯತೆ ಆಧಾರದಲ್ಲಿ ಹೆಚ್ಚು ಪರಿಹಾರ ನೀಡಬೇಕಿತ್ತು. ಸಿಎಂ ಸಿದ್ದರಾಮಯ್ಯನವರಿಗೆ ನಮ್ಮ ರಾಜ್ಯದ ಜನರ ಮೇಲೆ ಮಾನವೀಯತೆ ಇಲ್ಲ ಎಂದರು.

ಆನೇಕಲ್‌ನಲ್ಲಿ ಫಲವತ್ತಾದ ಸಾವಿರಾರು ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ. ಬಿಡದಿ ನೀರಾವರಿ ಪ್ರದೇಶವಾಗಿದ್ದು, ಇಲ್ಲಿನ ಸ್ವಾಧೀನವನ್ನು ಹಿಂದಿನ ಸರ್ಕಾರ ರದ್ದು ಮಾಡಿದೆ. ಆದರೆ ಈಗ ಮತ್ತೆ ಸ್ವಾಧೀನ ಮಾಡಲಾಗುತ್ತಿದೆ. ಕೆಂಗೇರಿ, ಯಲಹಂಕ ಸೇರಿದಂತೆ ರೈತರ 50,000 ಎಕರೆ ಜಮೀನನ್ನು ಸ್ವಾಧೀನ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದರು.

ಧರ್ಮಸ್ಥಳದ ವಿಚಾರದಲ್ಲಿ ಎಸ್‌ಐಟಿ ವೇಗವಾಗಿ ಗುಂಡಿ ಅಗೆದಿದೆ. ಆದರೆ ತನಿಖೆ ನಿಧಾನವಾಗಿದೆ. ತನಿಖೆಗೆ ಒಳಪಟ್ಟವರು ಹೊರಗೆ ಬಂದು ಮಾಧ್ಯಮಗಳ ಜೊತೆ ಮಾತಾಡಿದ್ದಾರೆ. ಈ ವಿಚಾರದಲ್ಲಿ ನಾವು ಹೋರಾಟ ಮಾಡುತ್ತೇವೆ. ಇದು ಸರಿಯಾಗಿ ತನಿಖೆಯಾಗಬೇಕು. ಇದಕ್ಕಾಗಿ ಕೋರ್ಟ್‌ ಮೊರೆ ಕೂಡ ಹೋಗುತ್ತೇವೆ. ಧರ್ಮಸ್ಥಳವನ್ನು ಹಾಳು ಮಾಡಲು ಕಮ್ಯುನಿಸ್ಟ್‌ಗಳು ಪ್ರಯತ್ನ ಮಾಡಿದ್ದಾರೆ ಎಂದರು.

ವಕ್ಫ್‌ ತಿದ್ದುಪಡಿ ಮಸೂದೆಯನ್ನು ಸುಪ್ರೀಂ ಕೋಟ್‌ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಇದರಿಂದಾಗಿ ಲಕ್ಷಾಂತರ ರೈತರ, ದೇವಾಲಯಗಳ ಜಮೀನು ಉಳಿದಿದೆ ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!