Guarantee schemes bring light to the lives of poor people: DCM D.K. Shivakumar

ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕಿನಲ್ಲಿ ಬೆಳಕು: ಡಿಸಿಎಂ ಡಿ.ಕೆ. ಶಿವಕುಮಾರ್

ಮಳವಳ್ಳಿ (ಮಂಡ್ಯ): “ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದರು.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಭಾನುವಾರ ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು ಮಾತನಾಡಿದರು.

“ಅನುದಾನದ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಮಂಡ್ಯ ಜಿಲ್ಲೆಯ ರೈತರ ಬದುಕಿನ ಉನ್ನತಿ ಸೇರಿದಂತೆ‌ ಎಲ್ಲರ ಸರ್ವತೋಮುಖ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಸಿದ್ದರಾಮಯ್ಯ ಅವರ ಸರ್ಕಾರ ಪಣತೊಟ್ಟಿದೆ” ಎಂದರು.

“ಮಳವಳ್ಳಿಯ ಜನಪ್ರಿಯ ಶಾಸಕರಾದ ನರೇಂದ್ರ ಸ್ವಾಮಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ₹300 ಕೋಟಿ ರೂ. ಅನುದಾನ ತಂದಿದ್ದಾರೆ. ಮಂಡ್ಯ ಜನತೆಯ ಸೇವೆಗೆ ಕಾಂಗ್ರೆಸ್ ‌ಸರ್ಕಾರ ಬದ್ಧವಾಗಿದೆ. ನಾವು ನಿಮ್ಮ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳು ಸಹ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವೊಬ್ಬರು ಜಿಲ್ಲೆಯಲ್ಲಿ ಶಾಂತಿಭಂಗ ಮಾಡುವ ಕೆಲಸ ಮಾಡುತ್ತಿದ್ದಾರೆ” ಎಂದರು.

“ನಗುವು ಸಹಜದ ಧರ್ಮ, ನಗಿಸುವುದು ಪರಧರ್ಮ, ನಗುವ ಕೇಳುತ ನಗುವುದತಿಶಯದ ಧರ್ಮ, ನಗುವ ನಗಿಸುವ ನಗಿಸಿ ನಗುತ ಬಾಳುವ ವರವಮಿಗೆ ನೀನು ಬೇಡಿಕೊಳೊ ಮಂಕುತಿಮ್ಮ ಎಂದು ಡಿವಿಜಿ ಹೇಳಿದ್ದಾರೆ. ಏನೇ ಬಂದರೂ ಎಲ್ಲರೂ ನಗುತಾ ಒಟ್ಟಾಗಿ ಬಾಳಬೇಕು” ಎಂದು ಕರೆ ನೀಡಿದರು‌.

ಪ್ರವಾಸೋದ್ಯಮ ನೀತಿಯಿಂದ 1.5 ಲಕ್ಷ ಉದ್ಯೋಗ ಸೃಷ್ಟಿ ಗುರಿ

“ನಮ್ಮ‌ ಕರ್ನಾಟಕ ಸಾಹಿತ್ಯ, ಸಂಗೀತ, ಚಿತ್ರಕಲೆ, ಶಿಲ್ಪಕಲೆ,‌ ಧಾರ್ಮಿಕ, ಶೈಕ್ಷಣಿಕ ಹೀಗೆ ಅನೇಕ ರಂಗಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ರಾಜ್ಯ ಪ್ರವಾಸೋದ್ಯಮ ನೀತಿಯನ್ನು ರೂಪಿಸಿ ನಾವು ಇತರರಿಗೆ ಮಾದರಿಯಾಗಿದ್ದೇವೆ. ಇದರಿಂದ 1.5 ಲಕ್ಷ ಉದ್ಯೋಗ ಸೃಷ್ಟಿಗೆ ನಾವು ಮುಂದಡಿಯಿಟ್ಟಿದ್ದೇವೆ” ಎಂದರು.

“ಕಾವೇರಿ ಆರತಿ ಮೂಲಕ ತಾಯಿಗೆ ನಮನ ಸಲ್ಲಿಸಲು ಹೊರಟಿದ್ದೆವು. ಕೋರ್ಟ್ ನಿರ್ಬಂಧ ‌ಹಾಗೂ ರೈತ ಸಂಘದವರ ಅಡಚಣೆಯಿಂದ‌ ನಿಧಾನವಾಗುತ್ತಿದೆ. ಪ್ರಾರ್ಥನೆ ಸಲ್ಲಿಸಲು, ಆರತಿ ಮಾಡಲು ಯಾರೂ ಸಹ ನಿರ್ಬಂಧ ಮಾಡಲು ಸಾಧ್ಯವಿಲ್ಲ” ಎಂದರು.

“ಈ ಭಾಗದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಪಟ್ಟ ಸಚಿವರು, ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸಲಾಗುವುದು. ಪ್ರವಾಸೋದ್ಯಮದಿಂದ ಯುವಕರ ಬದುಕಿನಲ್ಲಿ ಬದಲಾವಣೆಯಾಗಲಿದೆ. ಉದ್ಯೋಗ ಸೃಷ್ಟಿಯಾಗಲಿದೆ. ಕಬಿನಿ ಭಾಗದಲ್ಲಿನ ಪ್ರಾಕೃತಿಕ ಸಂಪತ್ತು ದೇಶದಲ್ಲಿಯೇ ಅಪರೂಪ. ಕರ್ನಾಟಕ ಜಲಪಾತಗಳ ತವರೂರು. ನಮ್ಮ ರಾಜ್ಯದಲ್ಲಿ ಸುಮಾರು 544 ಕ್ಕೂ ಹೆಚ್ಚು ಜಲಪಾತಗಳಿವೆ” ಎಂದರು.

“ಪ್ರವಾಸೋದ್ಯಮದಿಂದ ಸಾಕಷ್ಟು ಅಭಿವೃದ್ಧಿ ಸಾಧ್ಯ. ಕಳೆದ ವರ್ಷ ಸುಮಾರು 10 ಲಕ್ಷ‌ ಜನರು ದಸರಾ ವೀಕ್ಷಣೆ ಮಾಡಿದರು. ಶಕ್ತಿ ಯೋಜನೆಯ ಪರಿಣಾಮ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದಸರಾದಲ್ಲಿ ಭಾಗವಹಿಸಿದರು” ಎಂದರು.

“ಹೆಚ್ಚುವರಿ ಕಾವೇರಿ ನೀರಿನ ಸಂಗ್ರಹಕ್ಕಾಗಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ನಾನು ಹೋರಾಟ ಪ್ರಾರಂಭ ಮಾಡಿದೆ. ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಲಾಯಿತು. ಪ್ರಕೃತಿಯನ್ನು ಪೂಜಿಸುವುದು ನಮ್ಮ ಸಂಸ್ಕೃತಿ. ಜೂನ್ ತಿಂಗಳಿನಲ್ಲಿಯೇ ಕನ್ನಂಬಾಡಿ ಅಣೆಕಟ್ಟು ತುಂಬಿ ಇತಿಹಾಸ ನಿರ್ಮಾಣವಾಗಿದೆ. ಈ ವರ್ಷ 125 ಟಿಎಂಸಿ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ತೀರ್ಪಿನ ಪ್ರಕಾರ 177 ಟಿಎಂಸಿ ನೀರು ಹರಿಸಬೇಕಿತ್ತು” ಎಂದರು.

“ಕಾವೇರಿ ತಾಯಿ ನಮಗೆ ಬದುಕು, ಅನ್ನ, ಜನ್ಮ ನೀಡಿದ್ದಾಳೆ.‌‌ ಈಕೆ ಪುಣ್ಯದಾತೆ. ಕೊಡಗಿನಲ್ಲಿ ಜನಿಸಿ ಅರಬ್ಬಿ ಸಮುದ್ರ ಸೇರುವ ತನಕ ಲಕ್ಷಾಂತರ ಜನರಿಗೆ ಜೀವನ ನೀಡಿದ್ದಾಳೆ. ಕಾವೇರಿ ಹರಿಯುವ ಭೂಮಿ ಪವಿತ್ರ ಭೂಮಿ. ಕುಡಿಯುವ ನೀರಿಗೆ, ಕೈಗಾರಿಕೆಗೆ, ವಿದ್ಯುತ್ ಉತ್ಪಾದನೆಗೆ, ಪ್ರಮುಖವಾಗಿ ಕೃಷಿಗೆ, ಮೀನುಗಾರಿಕೆಗೆ ಹೀಗೆ ಪ್ರತಿ ಹಂತದಲ್ಲಿಯೂ ತಾಯಿ ಜೊತೆಯಾಗಿ ನಿಂತಿದ್ದಾಳೆ” ಎಂದರು.

“ಗಗನಚುಕ್ಕಿ ಜಲಪಾತವಿರುವ ಜಾಗ ಐತಿಹಾಸಿಕ ಸ್ಥಳ. ಏಷ್ಯಾದಲ್ಲಿಯೇ ಮೊಟ್ಟಮೊದಲು ಜಲವಿದ್ಯುತ್ ಉತ್ಪಾದನೆ ಮಾಡಿದ ಸ್ಥಳವಿದು. ಶಾಲಾ ದಿನಗಳಲ್ಲಿ ಇಲ್ಲಿಗೆ ಪ್ರವಾಸ ಬಂದಿದ್ದೆ. ಆನಂತರ ವಿದ್ಯುತ್ ಸಚಿವನಾಗಿದ್ದಾಗ ಭೇಟಿ ನೀಡಿದ್ದೆ. ಇಂದು ಮತ್ತೊಮ್ಮೆ ನೋಡುವ ಸೌಭಾಗ್ಯ ದೊರೆತಿದೆ. ಕೆಜಿಎಫ್ ಗೆ ವಿದ್ಯುತ್ ನೀಡಲು 1904 ರಲ್ಲಿ ಇಲ್ಲಿಂದ ವಿದ್ಯುತ್ ಉತ್ಪಾದನೆ ಮಾಡಿ ನೀಡಲಾಯಿತು. ಇಲ್ಲಿಂದ ವಿದ್ಯುತ್ ನೀಡದೇ‌ ಇದ್ದಿದ್ದರೆ ಅಭಿವೃದ್ಧಿಯೇ ಇಲ್ಲವಾಗುತ್ತಿತ್ತು. ಇದರಿಂದ ನಮ್ಮೆಲ್ಲರ ಬದುಕಿಗೆ ಬೆಳಕು ಬಂದಿದೆ” ಎಂದರು.

“ನಮ್ಮ‌ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಬದುಕಿನಲ್ಲಿ ಬೆಳಕು ಬಂದಿದೆ. ಈ ಹಸ್ತ ರೈತರ, ಬಡವರ, ಕೂಲಿಕಾರ್ಮಿಕರ, ಮಹಿಳೆಯರ ಬದುಕನ್ನು ಭದ್ರ‌ ಮಾಡಿದೆ” ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!