ಪ್ರತಿ ಪೇದೆಯು ಜನಪರ, ಜನಸ್ನೇಹಿ ಪೊಲೀಸ್ ಆಗಬೇಕು: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆಲೋಕ್ ಕುಮಾರ್

Every constable should become a pro-people, people-friendly police officer: Alok Kumar

ಧಾರವಾಡ: ಪೊಲೀಸ್ (Police) ವ್ಯವಸ್ಥೆಗೆ ಸೇರುವ ಪ್ರತಿ ಸಿಬ್ಬಂದಿ ಸಾರ್ವಜನಿಕ ಸೇವಕರಾಗಬೇಕು. ಪೀಡಕರಾಗಬಾರದು. ಸಾರ್ವಜನಿಕರಿಗೆ ಜನಸ್ನೇಹಿಯಾಗಿ, ಜನಪರವಾಗಿ ತಮ್ಮ ವೃತ್ತಿ ನಿರ್ವಹಿಸಿ, ಯಶಸ್ವಿಯಾಗಬೇಕು ಎಂದು ರಾಜ್ಯ ಪೊಲೀಸ್ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಆಲೋಕ್ ಕುಮಾರ್ (Alok Kumar) ಹೇಳಿದರು.

ಅವರು ಇಂದು ಬೆಳಿಗ್ಗೆ ಕಲಘಗಿ ರಸ್ತೆಯ ಗಿರಿನಗರದಲ್ಲಿರುವ ಪೊಲೀಸ್ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ಜರುಗಿದ 2ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್‍ಟೆಬಲ್‍ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು.

ಪ್ರತಿ ಪೇದೆಯು ಜನಪರ, ಜನಸ್ನೇಹಿ ಪೊಲೀಸ್ ಆಗಬೇಕು: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆಲೋಕ್ ಕುಮಾರ್

ತರಬೇತಿ ಗುಣಮಟ್ಟದ ಮೇಲೆ ಪೊಲೀಸ್ ಪೇದೆಗಳ ಸೇವೆಯ ಸಾಮಥ್ರ್ಯ ಅವಲಂಬಿಸಿರುತ್ತದೆ. ಕಳಪೆಗುಣಮಟ್ಟದ ತರಬೇತಿ ನೀಡಿದರೆ ಉತ್ತಮವಾದ ಬದ್ಧತೆಯ ಕರ್ತವ್ಯ ನಿರೀಕ್ಷೆ ಮಾಡುವುದು ಅಸಾಧ್ಯ ಎಂದು ಅವರು ಹೇಳಿದರು.

ಅಧಿಕಾರಿ ಹಂತದ ಪೊಲೀಸ್‌ರಿಗೆ ಇಲಾಖೆಯ ತರಬೇತಿಗಳು ಕೇಂದ್ರಿಕೃತವಾಗಿವೆ. ಪೊಲೀಸ್ ಪೇದೆಗಳಿಗೆ ಉತ್ತಮವಾದ ತರಬೇತಿ ನೀಡಿದರೆ, ಪೊಲೀಸ್ ವ್ಯವಸ್ಥೆ ಬಲವಾಗುತ್ತದೆ. ತರಬೇತಿಯಲ್ಲಿ ಪಠ್ಯಕ್ರಮ, ಪ್ರಾಯೋಗಿಕ ತರಬೇತಿ, ದೈಹಿಕ ತರಬೇತಿ ಅಳವಡಿಸಲಾಗಿದೆ. ಈಗ ತರಬೇತಿಯಲ್ಲಿ ಆಮೂಲಾಗ್ರ ಪರಿವರ್ತನೆ ತರಲಾಗಿದೆ ಎಂದು ಅವರು ಹೇಳಿದರು.

ಪೊಲೀಸ್ ತರಬೇತಿ ಪಡೆದ ಪ್ರಶಿಕ್ಷಣಾರ್ಥಿಗಳು ತರಬೇತಿ ಪಡೆದು, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು. ಯಾವುದೇ ಅಕ್ರಮಗಳಲ್ಲಿ, ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿ ಆಗಬಾರದು. ಅಪರಾಧಿಗಳಿಂದ ದೂರವಿದ್ದು, ಶಿಷ್ಟರನ್ನು ರಕ್ಷಿಸಬೇಕು. ಕಾನೂನು ಪಾಲನೆ ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಅವರು ತಿಳಿಸಿದರು.

ಮುಂದಿನ ಐದು ವರ್ಷದಲ್ಲಿ ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿ ಆಗುವದಿಲ್ಲ ಎಂಬ ವಾರಂಟಿ ನೀಡಬೇಕು. ಪ್ರತಿಜ್ಞಾ ವಿಧಿ ಸ್ವೀಕರಿಸಿಯೂ ಓಥ್ ಬ್ರಿಚ್ ಮಾಡಿದರೆ, ಅಂತವರ ವಿರುದ್ಧ ಚಾರ್ಜ್ ಮಾಡಿ ಕೇಸ್ ದಾಖಲಿಸಬೇಕು. ಈ ಕುರಿತು ತರಬೇತಿ ಶಾಲೆಯ ಮುಖ್ಯಸ್ಥರು ಲಿಖಿತವಾಗಿ ಹೇಳಿಕೆ ಪಡೆದು, ಪ್ರಶಿಕ್ಷಣಾರ್ಥಿಗಳು ಸೇವೆಗೆ ಸೇರುವ ಪೊಲೀಸ್ ಠಾಣೆಗಳಿಗೆ ಕಳುಹಿಸಬೇಕು. ಇದರಿಂದ ಅವರಿಗೆ ಎಚ್ಚರಿಕೆ ಇರುತ್ತದೆ ಎಂದು ಅವರು ಸಲಹೆ ನೀಡಿದರು.

ಉತ್ತಮ ಸೇವೆಯ ಭರವಸೆ ನೀಡಿ, ನಾಳೆಯಿಂದ ಸೇವೆಗೆ ಸೇರಬೇಕು ಎಂದು ಅವರು ತಿಳಿಸಿದರು.
ಪೊಲೀಸ್ ವ್ಯವಸ್ಥೆಯಿಂದ ಸಮಾಜಕ್ಕೆ, ಸಾರ್ವಜನಿಕರಿಗೆ ರಕ್ಷಣೆಯ ಬಲವಾದ ಭರವಸೆ ಇದೆ. ಪೊಲೀಸ್ ಇರುವುದು ಸಾರ್ವಜನಿಕರ ರಕ್ಷಣೆಗಾಗಿ, ಸಾರ್ವಜನಿಕ ಆಸ್ತಿಪಾಸ್ತಿ, ಜೀವ ರಕ್ಷಣೆಗಾಗಿ ನಮ್ಮ ಕರ್ತವ್ಯವಿರಬೇಕು. ಬಡವರ, ಮಹಿಳೆಯರ, ಅಸಹಾಯಕರ, ಮಕ್ಕಳ ರಕ್ಷಣೆ ಮಾಡಬೇಕು ಎಂದರು.

ಯಾವುದೇ ಸಂದರ್ಭದಲ್ಲಿ ಬಂದೋಬಸ್ತ ಸ್ಥಳದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯ ಬಲ ಪ್ರಯೋಗ ಮಾಡಬಾರದು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಮಸ್ಯೆ ಬಗೆಹರಿಸಬೇಕು ಎಂದು ಅವರು ಹೇಳಿದರು.

ಪೊಲೀಸ್ ಇಲಾಖೆಯಲ್ಲಿ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಹೊಂದಾಣಿಕೆ ಇರಬೇಕು. ಬರುವ ಸಂದಿಗ್ಧ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಿ, ಸಮಾಜದಲ್ಲಿ ಮಾದರಿ ಆಗಿ ನಿಲ್ಲಬೇಕು ಎಂದರು. ಆರೋಗ್ಯವು ಮುಖ್ಯ. ಪ್ರತಿಯೊಬ್ಬರು ಮಾನಸಿಕ ಮತ್ತು ಶಾರೀರಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರತಿದಿನ ಕನಿಷ್ಠ 45 ನಿಮಿಷ ವ್ಯಾಯಾಮ, ಯೋಗ ಮಾಡಬೇಕು ಎಂದರು.

ಎಲ್ಲ ಪೊಲೀಸ್ ಸಿಬ್ಬಂದಿಗಳು ಜನಪರ, ಜನಸ್ನೇಹಿ ಪೊಲೀಸ್ ಆಗಬೇಕು. ತರಬೇತಿಯಲ್ಲಿ ನೀಡಿರುವ ಗುಣಮಟ್ಟದ ಅಂಶಗಳನ್ನು, ನೀತಿಗಳನ್ನು ವೃತ್ತಿ ಜೀವನದಲ್ಲಿ ಅಳವಡಿಸಕೊಳ್ಳಬೇಕೆಂದು ಅವರು ಹೇಳಿದರು.
ಧಾರವಾಡ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಪೊಲೀಸ್ ಅಧೀಕ್ಷಕ ಎಂ.ಎಂ.ಯಾದವಾಡ ಅವರು ಸ್ವಾಗತಿಸಿ, ತರಬೇತಿ ಶಾಲೆಯ ವರದಿ ವಾಚನ ಮಾಡಿದರು.

ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಮಹಾನಗರ ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾಂವಿ ಸೇರಿದಂತೆ ಪೆÇಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳು ಇದ್ದರು.

ತರಬೇತಿಯಲ್ಲಿ ಒಳಾಂಗಣ ಕ್ರೀಡೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಸಾಧಕ ಪ್ರಶಿಕ್ಷಣಾರ್ಥಿ ಪೊಲೀಸ್ ಕಾನ್ಸ್‍ಟೇಬಲ್‍ಗಳಾದ ಶ್ರೀನಿವಾಸ ಪಾಟೀಲ ಪ್ರಥಮ ಸ್ಥಾನ, ಅಜರ್ ಮೈಮೂದ್ ದ್ವಿತೀಯ ಸ್ಥಾನ, ಹನುಮಂತರಾಯ ತೃತೀಯ ಸ್ಥಾನವನ್ನು ಮತ್ತು ಹೊರಾಂಗಣ ಕ್ರೀಡೆಗಳಲ್ಲಿ ಪ್ರಶಿಕ್ಷಣಾರ್ಥಿಗಳಾದ ರಾಜಬಕ್ಷಿ ಪಿಂಜಾರ ಪ್ರಥಮ ಸ್ಥಾನ, ಸಂತೋಷ ಬಿರಾದಾರ ದ್ವಿತೀಯ ಸ್ಥಾನ, ನಿತೀನ್ ವೈ. ತೃತೀಯ ಸ್ಥಾನವನ್ನು ಮತ್ತು ಪೈರಿಂಗ್ ವಿಭಾಗದಲ್ಲಿ ಉಮೇಶ ಸಿದ್ದಪ್ಪ ಪೂಜೇರಿ ಪ್ರಥಮ ಸ್ಥಾನ, ನಾಗಲಿಂಗ ಕುರಿ ದ್ವಿತೀಯ ಸ್ಥಾನ ಮತ್ತು ಶಶಿಭೂಷಣ ಎಂ.ಬಿ. ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಿಜೇತರನ್ನು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅಲೋಕ್ ಕುಮಾರ್ ಅವರು ಬಹುಮಾನ ವಿತರಿಸಿ, ಅಭಿನಂದಿಸಿದರು.

ಸರ್ವೋತ್ತಮ ಪ್ರಶಸ್ತಿ ಶ್ರೀಶೈಲ ಚಿನಗುಂಡಿ ಅವರು ಪಡೆದರು. ನಂತರ ಸ್ಪೂರ್ಥಿ ಸ್ಮರಣಸಂಚಿಕೆ ಬಿಡುಗಡೆ ಕಾರ್ಯಕ್ರಮ ನೇರವೇರಿತು.

ಸಿಪಿಐ ರಮೇಶ ಗೋಕಾಕ ಅವರು ವಂದಿಸಿದರು. ಆಕಾಶವಾಣಿ ಹಿರಿಯ ಉದ್ಘೋಷಕಿ ಮಾಯಾ ರಾಮನ್ ಅವರು ಹಾಗೂ ಮಹಾಂತೇಶ ಸಣ್ಣಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳ ಪಾಲಕರು, ಸಾರ್ವಜನಿಕರು ಭಾಗವಹಿಸಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]