Every constable should become a pro-people, people-friendly police officer: Alok Kumar

ಪ್ರತಿ ಪೇದೆಯು ಜನಪರ, ಜನಸ್ನೇಹಿ ಪೊಲೀಸ್ ಆಗಬೇಕು: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆಲೋಕ್ ಕುಮಾರ್

ಧಾರವಾಡ: ಪೊಲೀಸ್ (Police) ವ್ಯವಸ್ಥೆಗೆ ಸೇರುವ ಪ್ರತಿ ಸಿಬ್ಬಂದಿ ಸಾರ್ವಜನಿಕ ಸೇವಕರಾಗಬೇಕು. ಪೀಡಕರಾಗಬಾರದು. ಸಾರ್ವಜನಿಕರಿಗೆ ಜನಸ್ನೇಹಿಯಾಗಿ, ಜನಪರವಾಗಿ ತಮ್ಮ ವೃತ್ತಿ ನಿರ್ವಹಿಸಿ, ಯಶಸ್ವಿಯಾಗಬೇಕು ಎಂದು ರಾಜ್ಯ ಪೊಲೀಸ್ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಆಲೋಕ್ ಕುಮಾರ್ (Alok Kumar) ಹೇಳಿದರು.

ಅವರು ಇಂದು ಬೆಳಿಗ್ಗೆ ಕಲಘಗಿ ರಸ್ತೆಯ ಗಿರಿನಗರದಲ್ಲಿರುವ ಪೊಲೀಸ್ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ಜರುಗಿದ 2ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್‍ಟೆಬಲ್‍ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು.

ತರಬೇತಿ ಗುಣಮಟ್ಟದ ಮೇಲೆ ಪೊಲೀಸ್ ಪೇದೆಗಳ ಸೇವೆಯ ಸಾಮಥ್ರ್ಯ ಅವಲಂಬಿಸಿರುತ್ತದೆ. ಕಳಪೆಗುಣಮಟ್ಟದ ತರಬೇತಿ ನೀಡಿದರೆ ಉತ್ತಮವಾದ ಬದ್ಧತೆಯ ಕರ್ತವ್ಯ ನಿರೀಕ್ಷೆ ಮಾಡುವುದು ಅಸಾಧ್ಯ ಎಂದು ಅವರು ಹೇಳಿದರು.

ಅಧಿಕಾರಿ ಹಂತದ ಪೊಲೀಸ್‌ರಿಗೆ ಇಲಾಖೆಯ ತರಬೇತಿಗಳು ಕೇಂದ್ರಿಕೃತವಾಗಿವೆ. ಪೊಲೀಸ್ ಪೇದೆಗಳಿಗೆ ಉತ್ತಮವಾದ ತರಬೇತಿ ನೀಡಿದರೆ, ಪೊಲೀಸ್ ವ್ಯವಸ್ಥೆ ಬಲವಾಗುತ್ತದೆ. ತರಬೇತಿಯಲ್ಲಿ ಪಠ್ಯಕ್ರಮ, ಪ್ರಾಯೋಗಿಕ ತರಬೇತಿ, ದೈಹಿಕ ತರಬೇತಿ ಅಳವಡಿಸಲಾಗಿದೆ. ಈಗ ತರಬೇತಿಯಲ್ಲಿ ಆಮೂಲಾಗ್ರ ಪರಿವರ್ತನೆ ತರಲಾಗಿದೆ ಎಂದು ಅವರು ಹೇಳಿದರು.

ಪೊಲೀಸ್ ತರಬೇತಿ ಪಡೆದ ಪ್ರಶಿಕ್ಷಣಾರ್ಥಿಗಳು ತರಬೇತಿ ಪಡೆದು, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು. ಯಾವುದೇ ಅಕ್ರಮಗಳಲ್ಲಿ, ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿ ಆಗಬಾರದು. ಅಪರಾಧಿಗಳಿಂದ ದೂರವಿದ್ದು, ಶಿಷ್ಟರನ್ನು ರಕ್ಷಿಸಬೇಕು. ಕಾನೂನು ಪಾಲನೆ ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಅವರು ತಿಳಿಸಿದರು.

ಮುಂದಿನ ಐದು ವರ್ಷದಲ್ಲಿ ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿ ಆಗುವದಿಲ್ಲ ಎಂಬ ವಾರಂಟಿ ನೀಡಬೇಕು. ಪ್ರತಿಜ್ಞಾ ವಿಧಿ ಸ್ವೀಕರಿಸಿಯೂ ಓಥ್ ಬ್ರಿಚ್ ಮಾಡಿದರೆ, ಅಂತವರ ವಿರುದ್ಧ ಚಾರ್ಜ್ ಮಾಡಿ ಕೇಸ್ ದಾಖಲಿಸಬೇಕು. ಈ ಕುರಿತು ತರಬೇತಿ ಶಾಲೆಯ ಮುಖ್ಯಸ್ಥರು ಲಿಖಿತವಾಗಿ ಹೇಳಿಕೆ ಪಡೆದು, ಪ್ರಶಿಕ್ಷಣಾರ್ಥಿಗಳು ಸೇವೆಗೆ ಸೇರುವ ಪೊಲೀಸ್ ಠಾಣೆಗಳಿಗೆ ಕಳುಹಿಸಬೇಕು. ಇದರಿಂದ ಅವರಿಗೆ ಎಚ್ಚರಿಕೆ ಇರುತ್ತದೆ ಎಂದು ಅವರು ಸಲಹೆ ನೀಡಿದರು.

ಉತ್ತಮ ಸೇವೆಯ ಭರವಸೆ ನೀಡಿ, ನಾಳೆಯಿಂದ ಸೇವೆಗೆ ಸೇರಬೇಕು ಎಂದು ಅವರು ತಿಳಿಸಿದರು.
ಪೊಲೀಸ್ ವ್ಯವಸ್ಥೆಯಿಂದ ಸಮಾಜಕ್ಕೆ, ಸಾರ್ವಜನಿಕರಿಗೆ ರಕ್ಷಣೆಯ ಬಲವಾದ ಭರವಸೆ ಇದೆ. ಪೊಲೀಸ್ ಇರುವುದು ಸಾರ್ವಜನಿಕರ ರಕ್ಷಣೆಗಾಗಿ, ಸಾರ್ವಜನಿಕ ಆಸ್ತಿಪಾಸ್ತಿ, ಜೀವ ರಕ್ಷಣೆಗಾಗಿ ನಮ್ಮ ಕರ್ತವ್ಯವಿರಬೇಕು. ಬಡವರ, ಮಹಿಳೆಯರ, ಅಸಹಾಯಕರ, ಮಕ್ಕಳ ರಕ್ಷಣೆ ಮಾಡಬೇಕು ಎಂದರು.

ಯಾವುದೇ ಸಂದರ್ಭದಲ್ಲಿ ಬಂದೋಬಸ್ತ ಸ್ಥಳದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯ ಬಲ ಪ್ರಯೋಗ ಮಾಡಬಾರದು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಮಸ್ಯೆ ಬಗೆಹರಿಸಬೇಕು ಎಂದು ಅವರು ಹೇಳಿದರು.

ಪೊಲೀಸ್ ಇಲಾಖೆಯಲ್ಲಿ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಹೊಂದಾಣಿಕೆ ಇರಬೇಕು. ಬರುವ ಸಂದಿಗ್ಧ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಿ, ಸಮಾಜದಲ್ಲಿ ಮಾದರಿ ಆಗಿ ನಿಲ್ಲಬೇಕು ಎಂದರು. ಆರೋಗ್ಯವು ಮುಖ್ಯ. ಪ್ರತಿಯೊಬ್ಬರು ಮಾನಸಿಕ ಮತ್ತು ಶಾರೀರಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರತಿದಿನ ಕನಿಷ್ಠ 45 ನಿಮಿಷ ವ್ಯಾಯಾಮ, ಯೋಗ ಮಾಡಬೇಕು ಎಂದರು.

ಎಲ್ಲ ಪೊಲೀಸ್ ಸಿಬ್ಬಂದಿಗಳು ಜನಪರ, ಜನಸ್ನೇಹಿ ಪೊಲೀಸ್ ಆಗಬೇಕು. ತರಬೇತಿಯಲ್ಲಿ ನೀಡಿರುವ ಗುಣಮಟ್ಟದ ಅಂಶಗಳನ್ನು, ನೀತಿಗಳನ್ನು ವೃತ್ತಿ ಜೀವನದಲ್ಲಿ ಅಳವಡಿಸಕೊಳ್ಳಬೇಕೆಂದು ಅವರು ಹೇಳಿದರು.
ಧಾರವಾಡ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಪೊಲೀಸ್ ಅಧೀಕ್ಷಕ ಎಂ.ಎಂ.ಯಾದವಾಡ ಅವರು ಸ್ವಾಗತಿಸಿ, ತರಬೇತಿ ಶಾಲೆಯ ವರದಿ ವಾಚನ ಮಾಡಿದರು.

ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಮಹಾನಗರ ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾಂವಿ ಸೇರಿದಂತೆ ಪೆÇಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳು ಇದ್ದರು.

ತರಬೇತಿಯಲ್ಲಿ ಒಳಾಂಗಣ ಕ್ರೀಡೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಸಾಧಕ ಪ್ರಶಿಕ್ಷಣಾರ್ಥಿ ಪೊಲೀಸ್ ಕಾನ್ಸ್‍ಟೇಬಲ್‍ಗಳಾದ ಶ್ರೀನಿವಾಸ ಪಾಟೀಲ ಪ್ರಥಮ ಸ್ಥಾನ, ಅಜರ್ ಮೈಮೂದ್ ದ್ವಿತೀಯ ಸ್ಥಾನ, ಹನುಮಂತರಾಯ ತೃತೀಯ ಸ್ಥಾನವನ್ನು ಮತ್ತು ಹೊರಾಂಗಣ ಕ್ರೀಡೆಗಳಲ್ಲಿ ಪ್ರಶಿಕ್ಷಣಾರ್ಥಿಗಳಾದ ರಾಜಬಕ್ಷಿ ಪಿಂಜಾರ ಪ್ರಥಮ ಸ್ಥಾನ, ಸಂತೋಷ ಬಿರಾದಾರ ದ್ವಿತೀಯ ಸ್ಥಾನ, ನಿತೀನ್ ವೈ. ತೃತೀಯ ಸ್ಥಾನವನ್ನು ಮತ್ತು ಪೈರಿಂಗ್ ವಿಭಾಗದಲ್ಲಿ ಉಮೇಶ ಸಿದ್ದಪ್ಪ ಪೂಜೇರಿ ಪ್ರಥಮ ಸ್ಥಾನ, ನಾಗಲಿಂಗ ಕುರಿ ದ್ವಿತೀಯ ಸ್ಥಾನ ಮತ್ತು ಶಶಿಭೂಷಣ ಎಂ.ಬಿ. ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಿಜೇತರನ್ನು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅಲೋಕ್ ಕುಮಾರ್ ಅವರು ಬಹುಮಾನ ವಿತರಿಸಿ, ಅಭಿನಂದಿಸಿದರು.

ಸರ್ವೋತ್ತಮ ಪ್ರಶಸ್ತಿ ಶ್ರೀಶೈಲ ಚಿನಗುಂಡಿ ಅವರು ಪಡೆದರು. ನಂತರ ಸ್ಪೂರ್ಥಿ ಸ್ಮರಣಸಂಚಿಕೆ ಬಿಡುಗಡೆ ಕಾರ್ಯಕ್ರಮ ನೇರವೇರಿತು.

ಸಿಪಿಐ ರಮೇಶ ಗೋಕಾಕ ಅವರು ವಂದಿಸಿದರು. ಆಕಾಶವಾಣಿ ಹಿರಿಯ ಉದ್ಘೋಷಕಿ ಮಾಯಾ ರಾಮನ್ ಅವರು ಹಾಗೂ ಮಹಾಂತೇಶ ಸಣ್ಣಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳ ಪಾಲಕರು, ಸಾರ್ವಜನಿಕರು ಭಾಗವಹಿಸಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!