DCM D.K. Shivakumar has taken responsibility to resolve the problem; H.D. Kumaraswamy

ಸಮೀಕ್ಷೆ: ಡಿಸಿಎಂ ಡಿ.ಕೆ. ಶಿವಕುಮಾರ್ ಸಮಸ್ಯೆ ಬಗೆಹರಿಸುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ; ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಸಭೆಯಲ್ಲಿ ಎಲ್ಲಾ ಸಾಧಕ -ಬಾಧಕಗಳ ಬಗ್ಗೆ ಚರ್ಚೆ ಮಾಡೆಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ (D.K. Shivakumar) ಅವರು ಎಲ್ಲಾ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಹೇಳಿದರು.

ಈಗಾಗಲೇ ಕಾಂತರಾಜ್ ಆಯೋಗ, ಜಯಪ್ರಕಾಶ್ ಹೆಗಡೆ ಆಯೋಗ ಆಯಿತು. ಈಗ ಮೂರನೇ ಆಯೋಗ ರಚನೆ ಆಗಿದೆ. ಈ ರೀತಿಯ ಆಯೋಗ ರಚನೆ ಮಾಡಬೇಕಾದರೆ ಏನೆಲ್ಲಾ ಮಾನದಂಡಗಳನ್ನು ಅನುಸರಿಸಿದ್ದಾರೆ ಎನ್ನುವುದನ್ನು ಎಂಬುದನ್ನು ನೋಡಬೇಕು. ಸುಮ್ಮ ಸುಮ್ಮನೆ ಆಯೋಗ ರಚನೆ ಮಾಡಲು ಸಾಧ್ಯವಿಲ್ಲ. ಸಮೀಕ್ಷೆಗೆ 15 ದಿನಗಳ ಅವಕಾಶ ಕೊಟ್ಟಿದ್ದಾರೆ. ಅದರಲ್ಲಿ 9 ದಿನ ನವರಾತ್ರಿ ಬರುತ್ತದೆ, ಉಳಿದ 6 ದಿನಗಳಲ್ಲಿ ಆಯೋಗ ಏನು ವರದಿ ಕೊಡಲು ಸಾಧ್ಯ? ಹಾಗಾದರೆ ಇವರು ಕಾಂತರಾಜ್ ವರದಿಯನ್ನೇ ಭಟ್ಟಿ ಇಳಿಸುತ್ತಾರ? ಇಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಮಾಡಿದ್ದೇವೆ. ಸರ್ಕಾರದಿಂದ ಸಮೀಕ್ಷೆಯಲ್ಲಿ ಅನ್ಯಾಯವಾದರೆ ಸ್ವಾಮೀಜಿಗಳ ನೇತೃತ್ವದಲ್ಲಿ ಮುಂದಿನ ಹೋರಾಟದ ರೂಪರೇಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಇದು ಸಣ್ಣ ಮಟ್ಟದ ಸಭೆ ಅಷ್ಟೇ. ಈ ಸರ್ಕಾರ ಬೆಂಕಿ ಹಚ್ಚಲು ಏನ್ ಬೇಕೋ ಅದನ್ನು ಮಾಡಿದೆ. ಇದರ ಪ್ರತಿಪ್ರಲ ಮುಂದೆ ಗೊತ್ತಾಗುತ್ತದೆ. ವಾಸ್ತವಾಂಶದ ಬಗ್ಗೆ ಮಾತ್ರ ಚರ್ಚೆ ಆಗಬೇಕು ಎಂದು ಅವರು ಕಿಡಿಕಾರಿದರು.

ಜಾತಿ ವಿಚಾರದಲ್ಲಿ ಒಕ್ಕಲಿಗರಿಗೆ ದೊಡ್ಡಮಟ್ಟದ ಪೆಟ್ಟು ಬಿದ್ದಿದೆ. ಬೆಂಗಳೂರಿನಲ್ಲಿ ಹೆಚ್ಚು ಭೂಮಿಯನ್ನು ಕಳೆದುಕೊಂಡಿದ್ದು ಒಕ್ಕಲಿಗರ ಸಮಾಜ. ಡಿ.ಕೆ ಶಿವಕುಮಾರ್ ಎಲ್ಲಾ ಸಮಸ್ಯೆ ಬಗೆಹರಿಸಲು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಮುಂದೆ ನೋಡೋಣ, ಏನಾಗುತ್ತದೆ ಅಂತ. ಇದು ಇನ್ನೊಂದು ಕಾಂತರಾಜ್ ವರದಿ ಅಲ್ಲ, ಅದಕ್ಕಿಂತಲೂ ಕೆಟ್ಟದಾಗಿ ಇರುತ್ತದೆ ಎಂದು ದೂರಿದರು ಕೇಂದ್ರ ಸಚಿವರು.

ರಾಜ್ಯ ಸರ್ಕಾರ ಜಾತಿ ಜನಗಣತಿಯನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ವರದಿ ಕೊಡಬೇಕು ಅಂತ ಮೂರನೇ ಆಯೋಗ ರಚನೆ ಮಾಡಿದೆ. ಮಧುಸೂದನ್ ನಾಯ್ಕ್ ಆಯೋಗ ರಚನೆ ಆಗಿದೆ. ಕೇವಲ ಹದಿನೈದು ದಿನಗಳಲ್ಲಿ ವರದಿ ಕೊಡಬೇಕು ಅಂತೆ. ಆಯೋಗ ಸ್ಟ್ಯಾಚುಟರಿ ಬಾಡಿ, ಹೀಗಾಗಿ ನಾನು ಏನು ಡೈರೆಕ್ಷನ್ ಕೊಡಲು ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಏನಾದರೂ ಬದಲಾವಣೆ ತರಲು ಪವರ್ ಇಲ್ಲ ಅಂತಾರೆ ಎಂದ ಕುಮಾರಸ್ವಾಮಿ ಅವರು; ನಮ್ಮ ಸಮಾಜದ ಭವಿಷ್ಯಕ್ಕಾಗಿ ಹಾಗೂ ಸಮಾಜಕ್ಕೆ ಆದ ಅನ್ಯಾಯದ ಬಗ್ಗೆ ಧ್ವನಿ ಎತ್ತುವ ಸಲುವಾಗಿ ಸಭೆ ಮಾಡಿದ್ದೇವೆ. ಸ್ವಾಮೀಜಿಗಳ ಸೂಚನೆ ಮೇರೆಗೆ ಇಲ್ಲಿ ಸೇರಿದ್ದೇವೆ ಎಂದರು.

ಕ್ರಿಶ್ಚಿಯನ್ ಒಕ್ಕಲಿಗ ಜಾತಿಯನ್ನು ಹೇಗೆ ತೆಗೆಯುತ್ತಾರೆ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ; ಸಮಯದ ಅಭಾವ ಇದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು,ಈಗ ಏನಿದೆ ಅದನ್ನೇ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೊಬ್ಬ ಮಂತ್ರಿ ಹೇಳಿದ್ದಾರೆ, ಈಗಿನ ಆಯೋಗ ಉತ್ತಮವಾದ ಆಯೋಗವಂತೆ. ಒಳ್ಳೆಯ ನಿರೀಕ್ಷೆ ಇಟ್ಟುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ನಾನು ಆ ಮಂತ್ರಿಯನ್ನು ಕೇಳಲು ಬಯಸುತ್ತೇನೆ, ಇದು ಸತ್ಯದ ಆಯೋಗವೇ? ರಾಜ್ಯ ನೆಮ್ಮದಿಯಾಗಿ ಇದೆ. ಈ ಆಯೋಗ ಬೆಂಕಿ ಹಚ್ಚುವ ಕೆಲಸ ಮಾಡಲು ಹೊರಟಿದೆ. ಸಿದ್ದರಾಮಯ್ಯನವರು ಮುಂಜಾಗ್ರತೆ ಕ್ರಮವಾಗಿ ಯಾವುದೇ ಆಲೋಚನೆ ಮಾಡಿಲ್ಲ ಎಂದು ಕೇಂದ್ರ ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಮಯ ಮುಂದೂಡುವುದು ಮುಖ್ಯವಲ್ಲ. ವಾಸ್ತವಾಂಶದ ಪರಿಹಾರವಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಬೆಂಗಳೂರು ನಗರದ ಅಭಿವೃದ್ಧಿ ಬಗ್ಗೆ ಪದೇ ಪದೇ ಚರ್ಚೆ ಮಾಡುತ್ತೇವೆ. ಬೆಂಗಳೂರು ನಗರದ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಲ್ಲಿ ಬೆಂಗಳೂರು ಅಭಿವೃದ್ಧಿಗಾಗಿ ಎಷ್ಟು ರೈತರ ಭೂಮಿ ಬಳಕೆ ಆಗಿದೆ, ಅದರಲ್ಲಿ ಬಹುಪಾಲು ಭೂಮಿ ಕಳೆದುಕೊಂಡವರು ಒಕ್ಕಲಿಗರು. ಈಗಲೂ ಗ್ರೇಟರ್ ಬೆಂಗಳೂರು ಹೆಸರಲ್ಲಿ ನಡೆಯುತ್ತಿದೆ ಭೂಮಿಯನ್ನು ಕಿತ್ತುಕೊಳ್ಳುವುದು ನಡೆಯುತ್ತಿದೆ ಎಂದರು ಅವರು.

ಏರ್ ಪೋರ್ಟ್ ಮಾಡುವುದಕ್ಕೆ 50 ಸಾವಿರ ಎಕರೆ ಭೂಮಿ ಬೇಕು. ಇದಕ್ಕೆ ಯಾವ ಸಮಾಜದ ಜಮೀನು ಜಾಸ್ತಿ ಹೋಗುತ್ತಿದೆ? ಬೇರೆ ಸಮಾಜಗಳ ಜನರ ಭೂಮಿ ಸಣ್ಣ ಪುಟ್ಟ ಪ್ರಮಾಣದಲ್ಲಿ ಹೋಗಿರಬಹುದು. ಆದರೆ ಹೆಚ್ಚಿನ ಭೂಮಿ ಕಳೆದುಕೊಂಡಿದ್ದು ಒಕ್ಕಲಿಗರು. ಜಮೀನು ಮಾರಿ ಯಾವುದೋ ಒಂದು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆಲ್ಲ ಏನ್ ಕೊಟ್ಡಿದ್ದಾರೆ? ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ನಡೆ ನೋಡಿದರೆ ಇದು ಕಾಂತರಾಜ್ ವರದಿಗಿಂತಲೂ ಕೆಟ್ಟದಾಗಿ ಇರುತ್ತದೆ. ಈ ಬಗ್ಗೆ ಯಾವ ಸಂಶಯವೂ ಬೇಡ ಎಂದು ಅವರು ಕಳವಳ ವ್ಯಕ್ತಪಡಿಸಿದರು.

331 ಹೊಸ ಜಾತಿಗಳು ಎಲ್ಲಿಂದ ಹುಟ್ಟಿಕೊಂಡಿತು ನಿಖಿಲ್ ಕುಮಾರಸ್ವಾಮಿ ಕೆಂಡ

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮಾತನಾಡಿ, ಸರ್ಕಾರದಿಂದ ಸಿಗಬೇಕಾದ ಸೌಲಭ್ಯ ಸಮಾಜದ ಕಟ್ಟಕಡೆಯ ವ್ಯಕ್ತಿ ಗುರುತಿಸಿ ತಯಾರಿಸುವ ಜಾತಿಗಣತಿಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಇದು ಅವೈಜ್ಞಾನಿಕವಾಗಿ ತಯಾರಿಸಿರುವ ವರದಿ ಆಗಿದ್ದು, ವಿರೋಧಿಸುತ್ತೇವೆ’ ಎಂದು ಹೇಳಿದರು.

ಸಮಾಜ ಸಮಾಜ ಜೊತೆ ಸಂಘರ್ಷ ತರಲು ರಾಜ್ಯ ಸರ್ಕಾರ ಹೊರಟಿದೆ. 331 ಹೊಸ ಜಾತಿ ಎಲ್ಲಿ ಹುಟ್ಟಿಕೊಂಡಿದೆ ಗೊತ್ತಿಲ್ಲ ಎಂದು ಜಾತಿ ಸಮೀಕ್ಷೆ ಬಗ್ಗೆ ವ್ಯಂಗ್ಯವಾಡಿದರು.

ಕುಮಾರಣ್ಣನವರು ಕಾಂತರಾಜು ವರದಿಯನ್ನ ರಿಜೆಕ್ಟ್ ಮಾಡ್ತಾರೇ, ಮಧೂಸುದನ್ ಅಧ್ಯಕ್ಷರಾದ 15 ದಿನದಲ್ಲಿ 2 ಕೋಟಿ ಜನರ ಮಾಹಿತಿ ಕಲೆ ಹಾಕಲು ಸಾಧ್ಯವಾ.? ಎಂದು ಪ್ರಶ್ನಿಸಿದರು.

ಜಾತಿ ಸಮೀಕ್ಷೆಗಳು ಆಗಬೇಕಾಗಿರೋದು ಕಟ್ಟಕಡೆಯ ವ್ಯಕ್ತಿ ಮೇಲೆತ್ತಲು ಮಾಡಬೇಕು. ಆರ್ಥಿಕ ಮತ್ತು ಸಾಮಾಜಿಕವಾಗಿ ನ್ಯಾಯವಾದಿಸುವ ನಿಟ್ಟಿನಲ್ಲಿ ಈ ಸಮೀಕ್ಷೆಗಳು ಆಗುವದರಲ್ಲಿ ನಮ್ಮ ಸ್ವಾಗತ ಇದೆ. ಆದರೆ ಇದರ ಹಿಂದೆ ದುರುದ್ದೇಶಗಳನ್ನು ಇಟ್ಟುಕೊಂಡು ಒಂದು ಸಮುದಾಯವನ್ನು ಮೇಲೆತ್ತಿಕೊಳ್ಳುವುದಕ್ಕೆ. ಇನ್ನೊಂದು ಪ್ರಬಲ ಸಮುದಾಯದ ನಂಬರ್ ಗಳನ್ನು ಮುಂದಿಟ್ಟು ಸಮಾಜ ಸಮಾಜಗಳ ನಡುವೆ ಸಂಘರ್ಷ ಉಂಟು ಮಾಡುವುದಕ್ಕೆ ಸರ್ಕಾರ ಮುಂದಾಗಬಾರದು ಎಂದು ಹೇಳಿದರು.

ಇಲ್ಲಿ 331 ಹೊಸ ಜಾತಿಗಳು ಎಲ್ಲಿಂದ ಹುಟ್ಟಿಕೊಳ್ಳುತ್ತೋ ಗೊತ್ತಿಲ್ಲ. ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗದ ಆಯೋಗ ಮಾಡಿಕೊಂಡು 180 ಕೋಟಿ ಖರ್ಚು ಮಾಡಿದರು, ಈಗ ಮಧುಸೂದನ್ ಅವರ ಅಧ್ಯಕ್ಷತೆಯಲ್ಲಿ ಹೊಸ ಆಯೋಗವನ್ನು ರಚಿಸಿ 15 ದಿನದಲ್ಲಿ 2 ಕೋಟಿ ಜನರ ಮಾಹಿತಿ ಕಲೆ ಹಾಕಲು ಸಾಧ್ಯವಾ..,? ಇಂದು ಕಿಡಿಕಾರಿದರು.

10 ವರ್ಷದಲ್ಲಿ ಆಗದೆ ಇರುವಂತಹ ಜಾತಿ ಸಮೀಕ್ಷೆ ಹೀಗ್ಯಾಕೆ.? ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ಮಾಡೋದಕ್ಕೆ ಅಧಿಕಾರವಿದೆ. ಆದರೆ ಅಂತಿಮವಾಗಿ ಕೇಂದ್ರ ಸರ್ಕಾರ ಜಾತಿ ಗಣತಿ ಕಾಲಂ ನನ್ನ ಸೇರಿಸಿದ್ದಾರೆ. ನಾಲ್ಕು ತಿಂಗಳಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ಇಡೀ ರಾಜ್ಯ ವ್ಯಾಪ್ತಿ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಜಾತಿಗಣತಿ ವಿಚಾರದಲ್ಲಿ ಸರ್ಕಾರ ಆಗಾಗ ಕೆಲವೊಂದಿಷ್ಟು ಹೆಜ್ಜೆಗಳನ್ನ ಇಡುವುದನ್ನು ನೋಡಿದ್ದೇವೆ.ಈ ಹಿಂದೆಯೂ ಕೂಡ ಇದೇ ರೀತಿ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ಆಡಳಿತ ಪಕ್ಷದ ಮಂತ್ರಿಗಳಲ್ಲೇ ಅಪಸ್ವರ, ಭಿನ್ನಾಭಿಪ್ರಾಯ ಇರುವುದನ್ನ ನೋಡಿದ್ದೇವೆ ಎಂದು ಹೇಳಿದರು.

ಜಾತಿಗಣತಿ ಎಲ್ಲಾ ಸಮುದಾಯದಲ್ಲಿ ಗೊಂದಲದ ವಾತಾವರಣ ಸೃಷ್ಟಿ ಮಾಡಿದೆ. ಈ ನೆಲೆಯಲ್ಲಿ ಪರಮ ಪೂಜ್ಯ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳ ನೇತೃತ್ವದಲ್ಲಿ ಸರ್ವ ಪಕ್ಷದ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ಕೆಲವೊಂದಿಷ್ಟು ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶಿರಾದ ಶ್ರೀ ಸ್ಫಟಿಕಪುರಿ ಮಠದ ಶ್ರೀ ನಂಜಾವಾಧೂತ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಡಿಸಿಎಂ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್, ಸಚಿವರಾದ ಚಲುವರಾಯಸ್ವಾಮಿ, ಸುಧಾಕರ್, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಡಿಸಿಎಂ ಅಶ್ವಥ್ ನಾರಾಯಣ್, ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಇನ್ನಿತರ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!