ದೊಡ್ಡಬಳ್ಳಾಪುರ: ಭೀಕರ ಅಪಘಾತ.. ಗಾಯಗೊಂಡಿದ್ದ ಮಹಿಳೆ ಸಾವು, ಮಗನ ಸ್ಥಿತಿ ಗಂಭೀರ..!

Doddaballapura: Horrific accident.. Injured woman dies, son's condition critical..!

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ (Accident) ಸಂಭವಿಸಿ, ಮಹಿಳೆಯೋರ್ವರು ಸಾವನಪ್ಪಿ, ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗುಮ್ಮನಹಳ್ಳಿ ಸಮೀಪ ಇಂದು ಸಂಜೆ ಸಂಭವಿಸಿದೆ.

ತಾಲೂಕಿನ ಗುಮ್ಮನಹಳ್ಳಿ-ಲಿಂಗಧೀರನಹಳ್ಳಿ ಗೇಟ್ ನಡುವಿನ ತಿರುವಿನಲ್ಲಿ ಮುಖಾಮುಖಿಯಾದ ಸ್ಕೂಟರ್ ಮತ್ತು ಬೈಕ್ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಮೃತ ಮಹಿಳೆಯನ್ನು ಮಧುಗಿರಿ ತಾಲೂಕಿನ ಬಿಜವಾರ ಗ್ರಾಮದ ಶೈಲಜ (42 ವರ್ಷ) ಎಂದು ಗುರುತಿಸಲಾಗಿದ್ದು, ಈಕೆ ಮಗ 19 ವರ್ಷದ ನವೀನ್ ಕುಮಾರ್ ಗಂಭೀರವಾಗಿ ಗಾಯಗೊಂಡು ನಗರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ದೊಡ್ಡಬಳ್ಳಾಪುರ ತಾಲ್ಲೂಕಿನ ಭಕ್ತರಹಳ್ಳಿಯಲ್ಲಿ ಪೂಜಾ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿ ಹಿಂತಿರುಗಿ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ

ಅಪಘಾದಲ್ಲಿ ಗಾಯಗೊಂಡ ಉಳಿದ ಇಬ್ಬರು ನೇಪಾಳಿ ಮೂಲದ ಯುವಕರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಕುರಿತಂತೆ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಾರದ ಅಂಬುಲೆನ್ಸ್.. ಆಕ್ರೋಶ

ಇನ್ನೂ ಅಪಘಾತ ನಡೆದು ಒಂದು ಗಂಟೆ ಕಳೆದರು ಸ್ಥಳಕ್ಕೆ ಅಂಬುಲೆನ್ಸ್ ಬಾರದೆ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಾಸಲು ವ್ಯಾಪ್ತಿಯಲ್ಲಿ ಇದ್ದ ಅಂಬುಲೆನ್ಸ್ ಮತ್ತೊಂದು ಅಪಘಾತದಲ್ಲಿ ಗಾಯಗೊಂಡವರ ಕರೆದುಕೊಂಡು ಬೆಂಗಳೂರಿಗೆ ತೆರಳಿದೆ. ಬದಲಿ ಅಂಬುಲೆನ್ಸ್ಗೆ ಕರೆ ಮಾಡಿದರು ಸ್ಥಳಕ್ಕೆ ಬಾರದೆ ಉಳಿದಿದ್ದು, ಗಾಯಾಳುಗಳು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಿದ್ದು ಸ್ಥಳದಲ್ಲಿದ್ದವರ ಆಕ್ರೋಶ ವ್ಯಾಪಕವಾಗಿ ಕೇಳಿಬಂತು.

ಟಿ.ವೆಂಕಟರಮಣಯ್ಯ ನೆರವು

ಘಟನೆ ಸಂಭವಿಸಿದ ದಾರಿಯಲ್ಲಿಯೇ ತೆರಳುತ್ತಿದ್ದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು, ಅಪಘಾತ ಕಂಡು ಕಾರು ನಿಲ್ಲಿಸಿ ಸ್ಥಳಕ್ಕೆ ದೌಡಾಯಿಸಿದರು.

ದೊಡ್ಡಬಳ್ಳಾಪುರ: ಭೀಕರ ಅಪಘಾತ.. ಗಾಯಗೊಂಡಿದ್ದ ಮಹಿಳೆ ಸಾವು, ಮಗನ ಸ್ಥಿತಿ ಗಂಭೀರ..!

ಈ ವೇಳೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿ, ಅಂಬುಲೆನ್ಸ್ ಗಾಗಿ ಕಾದು ನಿಂತರು. ಆದರೆ ಅಂಬುಲೆನ್ಸ್ ಬಾರದೆ ಹೋದಾಗ ತಮ್ಮ ಕಾರಿನಲ್ಲಿ ಇದ್ದ ಮಗು ಸೇರಿದಂತೆ ಕುಟುಂಬಸ್ಥರ ಕೆಳಗಿಳಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರು.

ಈ ವೇಳೆ 112 ವಾಹನ, ಹಾಗೂ ಅಪಘಾತಕ್ಕೆ ಒಳಗಾದವರ ಸಂಬಂಧಿಕರು ಬಂದು ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶೈಲಜ ಸಾವನಪ್ಪಿದ್ದಾರೆ.

ಕೆರಳಿದ ಯುವಕರಿಂದ ಆಸ್ಪತ್ರೆಗೆ ಬೇಲಿ

ಅಪಘಾತದಲ್ಲಿ ಗಾಯಗೊಂಡವನ್ನು ಆಸ್ಪತ್ರೆಗೆ ಕರೆದೊಯ್ಯಲು ಅಂಬುಲೆನ್ಸ್ ಲಭ್ಯವಿಲ್ಲವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ ಇರುವುದರಿಂದ ಕೆರಳಿದ ಯುವಕರು ಸಾಸಲು ಸರ್ಕಾರಿ ಆಸ್ಪತ್ರೆ ಬಾಗಿಲಿಗೆ ಬೇಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Doddaballapura: Horrible accident
Doddaballapura: Horrible accident

ಸಾಸಲು ಹೋಬಳಿ ಕೇಂದ್ರವಾಗಿದ್ದು, 24X7 ಕಾರ್ಯನಿರ್ವಹಿಸಬೇಕಿದೆ. ಆದರೆ ಇಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿಂದ ಯಾವುದೇ ಸೌಲಭ್ಯ ದೊರಕುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ದೊಡ್ಡಬೆಳವಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ತಿಳಿಗೊಳಿಸಿದರು.

ರಾಜಕೀಯ

5 ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳವೇ ಈ ಸರ್ಕಾರಕ್ಕೆ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

5 ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳವೇ ಈ ಸರ್ಕಾರಕ್ಕೆ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ

[ccc_my_favorite_select_button post_id="120737"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]