Doddaballapur: Accident News Update.. Boy dies

ದೊಡ್ಡಬಳ್ಳಾಪುರ: ಭೀಕರ ಅಪಘಾತ.. ಅಂಬುಲೆನ್ಸ್ ಸಿಗದೆ ಬೀದಿಯಲ್ಲಿ ಒದ್ದಾಡಿದ ಗಾಯಾಳುಗಳು..!

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ (Accident) ಸಂಭವಿಸಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗುಮ್ಮನಹಳ್ಳಿ ಸಮೀಪ ಇಂದು ಸಂಜೆ ಸಂಭವಿಸಿದೆ.

ತಾಲೂಕಿನ ಗುಮ್ಮನಹಳ್ಳಿ-ಲಿಂಗಧೀರನಹಳ್ಳಿ ಗೇಟ್ ನಡುವಿನ ತಿರುವಿನಲ್ಲಿ ಮುಖಾಮುಖಿಯಾದ ಸ್ಕೂಟರ್ ಮತ್ತು ಬೈಕ್ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಬೆನ್ನಲ್ಲೇ ದಾರಿ ಹೋಕರು ಅಂಬುಲೆನ್ಸ್ಗೆ ಕರೆ ಮಾಡಿ ಒಂದು ಗಂಟೆ ಕಾದರು ಸ್ಥಳಕ್ಕೆ ಬಾರದೆ ಇರುವ ಕಾರಣ, ಸುಮಾರು ಒಂದು ಗಂಟೆಗಳ ಕಾಲ ಗಾಯಗೊಂಡವರು ನಡು ರಸ್ತೆಯಲ್ಲಿಯೇ ನರಳಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಟಿ.ವೆಂಕಟರಮಣಯ್ಯ ನೆರವು

ದೊಡ್ಡಬಳ್ಳಾಪುರ: ಭೀಕರ ಅಪಘಾತ.. ಅಂಬುಲೆನ್ಸ್ ಸಿಗದೆ ಬೀದಿಯಲ್ಲಿ ಒದ್ದಾಡಿದ ಗಾಯಾಳುಗಳು..!

ಘಟನೆ ಸಂಭವಿಸಿದ ದಾರಿಯಲ್ಲಿಯೇ ತೆರಳುತ್ತಿದ್ದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು, ಅಪಘಾತ ಕಂಡು ಕಾರು ನಿಲ್ಲಿಸಿ ಸ್ಥಳಕ್ಕೆ ದೌಡಾಯಿಸಿದರು, ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿ, ತಮ್ಮ ಕಾರಿನಲ್ಲಿ ಇದ್ದ ಮಗು ಸೇರಿದಂತೆ ಕುಟುಂಬಸ್ಥರ ಕೆಳಗಿಳಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲು ಮುಂದಾದರು. ಈ ವೇಳೆ 112 ವಾಹನ ಸ್ಥಳಕ್ಕೆ ಬಂದು ಗಾಯಗೊಂಡವರನ್ನು ಆಸ್ಪತ್ರೆಗೆ ಕಳಿಸಿಕೊಡಲಾಯಿತು.

ಬಳಿಕ ಅಧಿಕಾರಗಳಿಗೆ ಕರೆ ಮಾಡಿ ಟಿ.ವೆಂಕಟರಮಣಯ್ಯ ಅವರು ಸಮರ್ಪಕವಾಗಿ ಅಂಬುಲೆನ್ಸ್ ವ್ಯವಸ್ಥೆ ಮಾಡದ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.

ಗಾಯಗೊಂಡವರನ್ನು ತಾಯಿ ಮತ್ತು ಮಗ ಮಧುಗಿರಿ ತಾಲೂಕಿನ ಬಿಜವಾರ ಗ್ರಾಮದವರು ಎನ್ನಲಾಗಿದ್ದು, ಇನ್ನಿಬ್ಬರು ನೇಪಾಳಿ ಮೂಲದವರು ಎನ್ನಲಾಗುತ್ತಿದೆ.

ಹೊಸಹಳ್ಳಿ ಮತ್ತು ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ನಡುವೆ ಘಟನೆ ಸಂಭವಿಸಿದ್ದು, ಯಾವ ಠಾಣೆ ವ್ಯಾಪ್ತಿಯೆಂದು ಖಚಿತವಾಗಿಲ್ಲ.

ಬಾರದ ಅಂಬುಲೆನ್ಸ್.. ಆಕ್ರೋಶ

ಇನ್ನೂ ಘಟನೆ ನಡೆದು ಗಂಟೆಗಳು ಕಳೆದರು ಸ್ಥಳಕ್ಕೆ ಅಂಬುಲೆನ್ಸ್ ಬಾರದೆ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಾಸಲು ವ್ಯಾಪ್ತಿಯಲ್ಲಿ ಇದ್ದ ಅಂಬುಲೆನ್ಸ್ ಮತ್ತೊಂದು ಅಪಘಾತದಲ್ಲಿ ಗಾಯಗೊಂಡವರ ಕರೆದುಕೊಂಡು ಬೆಂಗಳೂರಿಗೆ ತೆರಳಿದೆ. ಬದಲಿ ಅಂಬುಲೆನ್ಸ್ಗೆ ಕರೆ ಮಾಡಿದರು ಸ್ಥಳಕ್ಕೆ ಬರಲಿಲ್ಲವೆಂದು ಆಕ್ರೋಶ ವ್ಯಾಪಕವಾಗಿ ಕೇಳಿಬಂತು.

ಇದನ್ನೂ ಓದಿ; ದೊಡ್ಡಬಳ್ಳಾಪುರ: ಭೀಕರ ಅಪಘಾತ.. ಕೆರಳಿದ ಯುವಕರಿಂದ ಸರ್ಕಾರಿ ಆಸ್ಪತ್ರೆಗೆ ಬೇಲಿ..!

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!