ಬೆಂಗಳೂರು: ಜಾತಿ ಜನಗಣತಿ ವಿಚಾರ ಈಗಾಗಲೇ ರಾಜ್ಯದ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯದ ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿದ್ದು, ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ನಮ್ಮ ನಾಡಿನ ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (B.Y. Vijayendra) ಟೀಕಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಜನರು ಜಾಗೃತರಾಗಿದ್ದಾರೆ; ಸಮಾಜ ಜಾಗೃತವಾಗಿದೆ. ಹಿಂದೂ ಸಮಾಜವೂ ಇನ್ನೂ ಜಾಗೃತಿ ಆಗಬೇಕಿದೆ ಎಂದು ನುಡಿದರು. ರಾಜ್ಯ ಸರಕಾರವು ಜಾತಿ ಜನಗಣತಿ ಅಧಿಕಾರ ಇಲ್ಲದಿದ್ದರೂ ಈ ರೀತಿ ಹುಡುಗಾಟಿಕೆ ಮಾಡುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ನ್ಯಾಯಾಲಯದಲ್ಲಿ ಏನಾಗಲಿದೆ ಎಂದು ಕಾದು ನೋಡುತ್ತೇವೆ ಎಂದು ಹೇಳಿದರು.
ಜಿಎಸ್ಟಿ ಸುಧಾರಣೆ ಮೂಲಕ ಜನಸಾಮಾನ್ಯರಿಗೆ ಪ್ರಯೋಜನ ಲಭಿಸಬೇಕೆಂಬ ಅಪೇಕ್ಷೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರದು. ಸಣ್ಣಪುಟ್ಟ ಗೊಂದಲ ನಿವಾರಣೆ ಕಡೆ ಕೇಂದ್ರ ಸರಕಾರ ಗಮನ ಹರಿಸಲಿದೆ ಎಂದು ತಿಳಿಸಿದರು. ಜಿಎಸ್ಟಿ ಸರಳೀಕರಣದ ಲಾಭ ಜನರಿಗೆ ತಲುಪುವ ನಿಟ್ಟಿನಲ್ಲಿ ಅನುಷ್ಠಾನ ಆಗಲಿದೆ ಎಂದರು.
ನಾಡಿನ ಜನತೆಗೆ ನವರಾತ್ರಿ ಶುಭಾಶಯ ಕೋರಿದ ಅವರು, ನರೇಂದ್ರ ಮೋದಿಜೀ ಅವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಜನತೆಗೆ ನವರಾತ್ರಿ ಶುಭಾಶಯ ಕೋರಿದ್ದಲ್ಲದೇ, ಇಂದಿನಿಂದ ಜಿಎಸ್ಟಿ ಸುಧಾರಣೆಯ ಅನುಷ್ಠಾನದ ವಿಚಾರ ತಿಳಿಸಿದ್ದಾರೆ. ಇದೊಂದು ಐತಿಹಾಸಿಕ ದಿನ ಎಂದು ವಿಶ್ಲೇಷಿಸಿದರು.