GST tax reduction: BJP celebrates.. R. Ashoka challenges the state government

GST ತೆರಿಗೆ ಇಳಿಕೆ: ಬಿಜೆಪಿ ಸಂಭ್ರಮಾಚರಣೆ.. ರಾಜ್ಯ ಸರ್ಕಾರಕ್ಕೆ ಆರ್.ಅಶೋಕ ಸವಾಲು

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರು (Cmsiddaramaiah) ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ. ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R.Ashoka) ಹೇಳಿದರು.

ಸೋಮವಾರ ಮಂಡ್ಯದ ಪೇಟೆಬೀದಿಯಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಜಿಎಸ್ ಟಿ ಉಳಿತಾಯ ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ ವೇದಿಕೆ ಸೃಷ್ಟಿಸಿದ್ದಾರೆ.

ಒಕ್ಕಲಿಗ, ದಲಿತ, ವಿಶ್ವಕರ್ಮರನ್ನು ಕ್ರೈಸ್ತ ಧರ್ಮಕ್ಕೆ ಸೇರಿಸಲು 52 ಹೊಸ ಜಾತಿಗಳನ್ನು ಸೃಷ್ಟಿ ಮಾಡಲಾಗಿದೆ. ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಕಡಿಮೆ ಅಥವಾ ಹೆಚ್ಚು ಎಂದು ತೋರಿಸಬಹುದು. ಮುಸ್ಲಿಮರು ಹಾಗೂ ಕ್ರೈಸ್ತರಲ್ಲಿ ಅನೇಕ ಜಾತಿಗಳಿದ್ದು, ಅದನ್ನು ಬಹಿರಂಗ ಮಾಡುತ್ತಿಲ್ಲ. ಆದರೆ ಹಿಂದೂಗಳಲ್ಲಿ ತಾರತಮ್ಯ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಮಸೀದಿಗಳಿಗೆ ಮಹಿಳೆಯರಿಗೆ ಪ್ರವೇಶವಿಲ್ಲ, ಮಹಿಳೆಯರಿಗೆ ಬುರ್ಕಾ ಧರಿಸಬೇಕು. ಹೀಗೆ ಎಲ್ಲ ಧರ್ಮಗಳಲ್ಲಿ ತಾರತಮ್ಯ ಇದೆ ಎಂದರು.

ರಾಜ್ಯದಲ್ಲಿ ಲಿಂಗಾಯತರ ಸಂಖ್ಯೆ ಅತ್ಯಧಿಕ, ನಂತರ ಒಕ್ಕಲಿಗರ ಸಂಖ್ಯೆ ಇದೆ. ಸಿಎಂ ಸಿದ್ದರಾಮಯ್ಯ ಈ ಪ್ರಮಾಣವನ್ನೇ ಬದಲಿಸಲು ಮುಂದಾಗಿದ್ದಾರೆ. ಒಕ್ಕಲಿಗ ಸಮುದಾಯವನ್ನೇ ಒಡೆಯುತ್ತಿದ್ದಾರೆ. ಹೊಸ ಜಾತಿಗಳನ್ನು ಹುಟ್ಟುಹಾಕಿದ್ದಾರೆ ಎಂದರು.

ಹದಿನೈದು ದಿನಗಳಲ್ಲಿ ಸಮೀಕ್ಷೆ ಮಾಡಲು ಆಗಲ್ಲ. ದಸರಾ ಇರುವುದರಿಂದ ಜನರು ಪ್ರವಾಸ ಮಾಡುತ್ತಾರೆ. ಆದ್ದರಿಂದ ಇದನ್ನು ಮುಂದೂಡಬೇಕು. ಅಲ್ಲದೆ ಕೇಂದ್ರ ಸರ್ಕಾರ ಈಗಾಗಲೇ ಗಣತಿಗೆ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರಕ್ಕೆ ಗಣತಿ ನಡೆಸುವ ಅಧಿಕಾರವಿಲ್ಲ ಎಂದರು‌.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಿಎಸ್ ಟಿ ಇಳಿಕೆ ಮಾಡಿ ಜನರಿಗೆ ಅನುಕೂಲ ಕಲ್ಪಿಸಿದೆ. ಬೆಣ್ಣೆ, ತುಪ್ಪ ಸೇರಿದಂತೆ ದಿನಬಳಕೆ ಸಾಮಗ್ರಿಗಳ ತೆರಿಗೆ 5% ಗೆ ಇಳಿದಿದೆ. ಯುಪಿಎ ಸರ್ಕಾರದಲ್ಲಿ ಸಿಮೆಂಟ್, ಟಿವಿ, ವಾಷಿಂಗ್ ಮಶಿನ್, ಪ್ರಿಡ್ಜ್ ಗೆ 30% ತೆರಿಗೆ ಇದ್ದು, ಈಗ 18% ಕ್ಕೆ ಬಂದಿದೆ. ರೆಸ್ಟೋರೆಂಟ್ ಗಳಿಗೆ 21% ಇದ್ದ ತೆರಿಗೆ 5% ಕ್ಕೆ ಬಂದಿದೆ. ರಸಗೊಬ್ಬರ ಯೂರಿಯಾಗೆ 18% ಇದ್ದು, ಅದೀಗ 5% ಕ್ಕೆ ಇಳಿದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ತೆರಿಗೆ ಭಾರ ಹೆಚ್ಚಿದ್ದು, ಅದನ್ನು ಮೋದಿ ಸರ್ಕಾರ ಕಡಿಮೆ ಮಾಡಿದೆ. ಇದು ಬಡವರಿಗೆ ಒಳ್ಳೆಯ ಸುದ್ದಿ ಎಂದರು.

ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಇದರಲ್ಲೂ ತಪ್ಪು ಹುಡುಕುತ್ತಿದ್ದಾರೆ. ಜನರಿಗೆ ತೆರಿಗೆ ಇಳಿಸಿದರೆ ನಷ್ಟ ಹೇಗಾಗುತ್ತದೆ ಎಂದು ಅವರೇ ತಿಳಿಸಬೇಕು. ಈ ಸರ್ಕಾರ 25 ಸರಕು, ಸೇವೆಗಳ ದರ ಏರಿಕೆ ಮಾಡಿದೆ. ಹಾಲು, ನೀರು, ವಾಹನ ನೋಂದಣಿ, ಸ್ಟಾಂಪ್ ಡ್ಯೂಟಿ, ಹೀಗೆ ಗಬ್ಬರ್ ಸಿಂಗ್ ಟ್ಯಾಕ್ಸ್ ಹಾಕಲಾಗಿದೆ.

ಗ್ಯಾರಂಟಿಗಳಿಗೆ ಹಣ ಹೊಂದಿಸಲು 65,000 ಕೋಟಿ ರೂ. ಹೆಚ್ಚುವರಿ ತೆರಿಗೆ ಸುಲಿಗೆ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಹಣವೇ ಇಲ್ಲದೆ ಸಣ್ಣ ವರ್ತಕರ ಮೇಲೆ ಜಿಎಸ್ ಟಿ ಹೇರಲಾಗಿತ್ತು. ಆಗ ಇದನ್ನು ಕೇಂದ್ರ ಸರ್ಕಾರ ಮಾಡಿದ್ದು ಎಂದು ಸುಳ್ಳು ಆರೋಪ ಮಾಡಲಾಗಿತ್ತು. ಈ ಸರ್ಕಾರಕ್ಕೆ ಮರ್ಯಾದೆ ಇದ್ದಿದ್ದರೆ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿ ‌ತೆರಿಗೆಗಳನ್ನು ಇಳಿಸಬೇಕಿತ್ತು. ತೆರಿಗೆ ಇಳಿಕೆಯಲ್ಲಿ ಸ್ಪರ್ಧೆ ಬರಲಿ ಎಂದರು.

ಮಂಗಳೂರು ಜೀವನ ಗುಣಮಟ್ಟದಲ್ಲಿ, ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ. ಅದೇ ರೀತಿ ಮಂಡ್ಯ ಕೂಡ ಬೆಳೆಯಬೇಕು. ಮಂಡ್ಯದಲ್ಲಿ ಧರ್ಮ ಗಲಭೆಯನ್ನು ನಾವು ಮಾಡುತ್ತಿಲ್ಲ, ಕಾಂಗ್ರೆಸ್ ನಾಯಕರು ಹಾಗೂ ಮತಾಂಧರು ಮಾಡುತ್ತಿದ್ದಾರೆ. ಕೇರಳದ ಮತಾಂಧರು ಇಲ್ಲೂ ಪ್ರಭಾವ ಬೀರುತ್ತಿದ್ದಾರೆ. ಈದ್ ಮಿಲಾದ್ ಮೆರವಣಿಗೆಗೆ ಯಾರೂ ಕಲ್ಲು ತೂರಿಲ್ಲ ಆದರೆ ಗಣೇಶ ಮೆರವಣಿಗೆಗೆ ಮಾತ್ರ ಕಲ್ಲು ತೂರಾಟವಾಗುತ್ತಿದೆ. ಹಿಂದೂಗಳು ಎಲ್ಲೂ ಗಲಭೆ ಮಾಡಿಲ್ಲ ಎಂದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಹೆಚ್ಚಿದ್ದರಿಂದ ಕಂಪನಿಗಳು ಬಿಟ್ಟು ಹೋಗುತ್ತಿವೆ. ಅದಕ್ಕೂ ಅನುದಾನ ಇಲ್ಲ. ಮುಖ್ಯಮಂತ್ರಿ ಸಲಹೆಗಾರರು ಹಾಗೂ ಶಾಸಕರು ಅಭಿವೃದ್ಧಿಗೆ ಹಣ ಇಲ್ಲ ಎಂದಿದ್ದಾರೆ. ಗುಂಡಿ ಮುಚ್ಚಲು ಇನ್ನು ಟೆಂಡರ್ ಕರೆದರೆ ಕಾಮಗಾರಿ ಆರಂಭವಾಗುವುದು ತಡವಾಗಲಿದೆ ಎಂದರು‌.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!