Isha Gramotsava 2025; Heggadihalli team from Doddaballapur emerged as the runner-up in the grand finale..!

ಈಶ ಗ್ರಾಮೋತ್ಸವ 2025; ಗ್ರ್ಯಾಂಡ್ ಫಿನಾಲೆಯಲ್ಲಿ ರನ್ನರ್‌ಅಪ್ ಆಗಿ ಹೊರಹೊಮ್ಮಿದ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ತಂಡ..!

ಕೊಯಂಬತ್ತೂರು: ಈಶ ಗ್ರಾಮೋತ್ಸವದಲ್ಲಿ (Isha Gramotsava) ಆಯೋಜಿಸಲಾಗಿದ್ದ ಪುರುಷರ ವಾಲಿಬಾಲ್‌ನಲ್ಲಿ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿಯ ಬಿ.ರಂಜಿತ್ ನೇತೃತ್ವದ ತಂಡವು ರನ್ನರ್‌ಅಪ್ ಆಗಿ ಹೊರಹೊಮ್ಮುವ ಮೂಲಕ ಕರ್ನಾಟಕದ ಗ್ರಾಮೀಣ ಆಟಗಾರರ ಶಕ್ತಿ ಹಾಗೂ ಚೈತನ್ಯವನ್ನು ತೋರ್ಪಡಿಸಿದೆ.

Isha Gramotsava 2025; Heggadihalli team from Doddaballapur emerged as the runner-up in the grand finale..!
Isha Gramotsava 2025; Heggadihalli team from Doddaballapur emerged as the runner-up in the grand finale..!

ಮಹಿಳೆಯರ ಥ್ರೋಬಾಲ್‌ನಲ್ಲಿ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಡಗನ್ನೂರಿನಿಂದ ಬಂದ ತಂಡವು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ದೇವರಾಯಪುರಂನಿಂದ ಬಂದ ತಂಡವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.

ಈಶ ಗ್ರಾಮೋತ್ಸವ 2025; ಗ್ರ್ಯಾಂಡ್ ಫಿನಾಲೆಯಲ್ಲಿ ರನ್ನರ್‌ಅಪ್ ಆಗಿ ಹೊರಹೊಮ್ಮಿದ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ತಂಡ..!

ವಿಜೇತರು ರೂ.5 ಲಕ್ಷ ಬಹುಮಾನ ಪಡೆದರೆ, ರನ್ನರ್-ಅಪ್ ತಂಡ ರೂ.3 ಲಕ್ಷ ಬಹುಮಾನ ಪಡೆಯುವ ಮೂಲಕ ಈಶ ಗ್ರಾಮೋತ್ಸವದ ಎರೆಡು ತಿಂಗಳುಗಳ ಸರಣಿ ಪಂದ್ಯಾವಳಿಗಳಿಗೆ ವಿಜೃಂಭಣೆಯಿಂದ ತೆರೆ ಎಳೆಯಲಾಯಿತು.

“ಇಷ್ಟೊಂದು ಭಾರೀ ಮಟ್ಟದ ಕಾರ್ಯಕ್ರಮವನ್ನು ಸದ್ಗುರುಗಳು ಹೇಗೆ ಆಯೋಜಿಸಿದ್ದಾರೆ ಎಂಬುದನ್ನು ತಿಳಿಯಲು ನಾನು ಈಶ ಗ್ರಾಮೋತ್ಸವಕ್ಕೆ ಬಂದಿದ್ದೇನೆ” ಎಂದು 2025ರ ಈಶ ಗ್ರಾಮೋತ್ಸವದ ಅಪಾರ ವ್ಯಾಪ್ತಿ ಮತ್ತು ಭವ್ಯತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತ, ಭಾರತದ ಕಾರ್ಮಿಕ ಹಾಗೂ ಉದ್ಯೋಗ ಸಚಿವರು ಹಾಗೂ ಯುವಜನಾಂಗ ಮತ್ತು ಕ್ರೀಡಾ ಸಚಿವರಾದ ಮನ್ಸುಖ್ ಮಂಡಾವಿಯಾ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಎರಡು ತಿಂಗಳ ಅವಧಿಯಲ್ಲಿ ನಡೆದ ಈಶ ಗ್ರಾಮೋತ್ಸವದ 2025ರ ಆವೃತ್ತಿಯು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತೆಲಂಗಾಣ ಸೇರಿದಂತೆ ಆರು ರಾಜ್ಯಗಳಲ್ಲಿ ಮತ್ತು ಮೊದಲ ಬಾರಿಗೆ ಒಡಿಶಾದಲ್ಲಿ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಿತು.

ಈ ಬಾರಿಯ ಉತ್ಸವವು 183 ಸ್ಥಳಗಳು, 5,472 ತಂಡಗಳು, 12,000 ಕ್ಕೂ ಹೆಚ್ಚು ಮಹಿಳೆಯರನ್ನು ಒಳಗೊಂಡಂತೆ ಒಟ್ಟು 63,220 ಸ್ಪರ್ಧಿಗಳು, ಮತ್ತು 35,000ಕ್ಕೂ ಹೆಚ್ಚು ಹಳ್ಳಿಗಳ ಪ್ರಾತಿನಿಧ್ಯಕ್ಕೆ ಸಾಕ್ಷಿಯಾಯಿತು.

“2028ರ ವೇಳೆಗೆ ಈಶ ಗ್ರಾಮೋತ್ಸವವು ದೇಶದ 28 ರಾಜ್ಯಗಳಲ್ಲೂ ನಡೆಯಬೇಕಾಗಿದೆ, ಇದು ನನ್ನ ಬದ್ಧತೆ. ಇದು ಕೇವಲ ಕ್ರೀಡೆಯ ವಿಷಯವಲ್ಲದೆ, ಗ್ರಾಮೀಣ ಭಾರತದಲ್ಲಿ ವಿಭಿನ್ನ ಸ್ತರದ ಜೀವನವನ್ನು ಪುನರ್ಜ್ವಲಿಸುವುದು ಮತ್ತು ಮರುಜಾಗೃತಗೊಳಿಸುವುದೇ ಇದರ ಉದ್ದೇಶ” ಎಂದು ಸಭಿಕರನ್ನುದ್ದೇಶಿಸಿ ಸದ್ಗುರುಗಳು ಹೇಳಿದರು.

2004ರಲ್ಲಿ ಸದ್ಗುರುಗಳು ಚಾಲನೆ ನೀಡಿದ ಈಶ ಗ್ರಾಮೋತ್ಸವವು ಸಾಮಾಜಿಕ ಪರಿವರ್ತನೆಗೆ ಪ್ರಬಲ ಸಾಧನವಾಗಿದೆ, ಇದರಿಂದಾಗಿ ಗ್ರಾಮೀಣ ಜನರು ವ್ಯಸನಗಳಿಂದ ಮುಕ್ತರಾಗಲು, ಜಾತಿ ವಿಭಜನೆಗಳನ್ನು ಮೀರಿ ನಿಲ್ಲಲು, ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಭಾಗಗಳಲ್ಲಿ ಉತ್ಸಾಹಪೂರ್ಣ ಆಟದ ಮನೋಭಾವವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ. ತಂಡವನ್ನು ಗ್ರಾಮ ಪಂಚಾಯಿತಿಯ ಮಿತಿಯೊಳಗಿನ ಆಟಗಾರರೊಂದಿಗೆ ಮಾತ್ರ ರಚಿಸಬಹುದಾಗಿದ್ದು, ಇದು ಸಮುದಾಯಗಳನ್ನು ಒಗ್ಗೂಡಿಸುವ ಮೂಲಕ ಸ್ಥಳೀಯ ಹೆಮ್ಮೆಯನ್ನು ಆಚರಿಸುತ್ತದೆ.

ವೃತ್ತಿಪರ ಆಟಗಾರರಿಗಲ್ಲದೆ, ಈಶ ಗ್ರಾಮೋತ್ಸವವು ಗ್ರಾಮೀಣ ಚೈತನ್ಯದ ಸಂಭ್ರಮಾಚರಣೆಯಾಗಿದೆ. ಇದು ರೈತರು, ದಿನಗೂಲಿ ಕಾರ್ಮಿಕರು ಮತ್ತು ಗೃಹಿಣಿಯರು ಸೇರಿದಂತೆ ಜನಸಾಮಾನ್ಯ ಗ್ರಾಮೀಣ ಜನರಿಗೆ ತಮ್ಮ ದೈನಂದಿನ ಕಾರ್ಯಗಳಿಂದ ಹೊರಬಂದು ಕ್ರೀಡೆಯ ಸಂಭ್ರಮ ಮತ್ತು ಐಕ್ಯತೆಯ ಶಕ್ತಿಯನ್ನು ಆನಂದಿಸಲು ಅವಕಾಶ ನೀಡುತ್ತದೆ.

ಈಶ ಗ್ರಾಮೋತ್ಸವವನ್ನು ಆಯೋಜಿಸುವ ಈಶ ಔಟ್‌ರೀಚ್ಅನ್ನು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದಿಂದ ‘ನ್ಯಾಷನಲ್ ಸ್ಪೋರ್ಟ್ಸ್ ಪ್ರಮೋಷನ್ ಆರ್ಗನೈಸೇಷನ್’(NSPO) ಎಂದು ಗುರುತಿಸಲಾಗಿದೆ. 2018ರಲ್ಲಿ, ಈ ಉಪಕ್ರಮವು ಬೇರುಮಟ್ಟದ ಕ್ರೀಡೆಗಳಿಗೆ ನೀಡಿದ ಅಸಾಧಾರಣ ಕೊಡುಗೆಗಾಗಿ ಪ್ರತಿಷ್ಠಿತ ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರವನ್ನು ಪಡೆಯಿತು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!