Isha Gramotsava 2025; Heggadihalli team from Doddaballapur emerged as the runner-up in the grand finale..!

ಈಶ ಗ್ರಾಮೋತ್ಸವ 2025; ಗ್ರ್ಯಾಂಡ್ ಫಿನಾಲೆಯಲ್ಲಿ ರನ್ನರ್‌ಅಪ್ ಆಗಿ ಹೊರಹೊಮ್ಮಿದ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ತಂಡ..!

ಕೊಯಂಬತ್ತೂರು: ಈಶ ಗ್ರಾಮೋತ್ಸವದಲ್ಲಿ (Isha Gramotsava) ಆಯೋಜಿಸಲಾಗಿದ್ದ ಪುರುಷರ ವಾಲಿಬಾಲ್‌ನಲ್ಲಿ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿಯ ಬಿ.ರಂಜಿತ್ ನೇತೃತ್ವದ ತಂಡವು ರನ್ನರ್‌ಅಪ್ ಆಗಿ ಹೊರಹೊಮ್ಮುವ ಮೂಲಕ ಕರ್ನಾಟಕದ ಗ್ರಾಮೀಣ ಆಟಗಾರರ ಶಕ್ತಿ ಹಾಗೂ ಚೈತನ್ಯವನ್ನು ತೋರ್ಪಡಿಸಿದೆ.

Isha Gramotsava 2025; Heggadihalli team from Doddaballapur emerged as the runner-up in the grand finale..!
Isha Gramotsava 2025; Heggadihalli team from Doddaballapur emerged as the runner-up in the grand finale..!

ಮಹಿಳೆಯರ ಥ್ರೋಬಾಲ್‌ನಲ್ಲಿ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಡಗನ್ನೂರಿನಿಂದ ಬಂದ ತಂಡವು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ದೇವರಾಯಪುರಂನಿಂದ ಬಂದ ತಂಡವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.

ವಿಜೇತರು ರೂ.5 ಲಕ್ಷ ಬಹುಮಾನ ಪಡೆದರೆ, ರನ್ನರ್-ಅಪ್ ತಂಡ ರೂ.3 ಲಕ್ಷ ಬಹುಮಾನ ಪಡೆಯುವ ಮೂಲಕ ಈಶ ಗ್ರಾಮೋತ್ಸವದ ಎರೆಡು ತಿಂಗಳುಗಳ ಸರಣಿ ಪಂದ್ಯಾವಳಿಗಳಿಗೆ ವಿಜೃಂಭಣೆಯಿಂದ ತೆರೆ ಎಳೆಯಲಾಯಿತು.

“ಇಷ್ಟೊಂದು ಭಾರೀ ಮಟ್ಟದ ಕಾರ್ಯಕ್ರಮವನ್ನು ಸದ್ಗುರುಗಳು ಹೇಗೆ ಆಯೋಜಿಸಿದ್ದಾರೆ ಎಂಬುದನ್ನು ತಿಳಿಯಲು ನಾನು ಈಶ ಗ್ರಾಮೋತ್ಸವಕ್ಕೆ ಬಂದಿದ್ದೇನೆ” ಎಂದು 2025ರ ಈಶ ಗ್ರಾಮೋತ್ಸವದ ಅಪಾರ ವ್ಯಾಪ್ತಿ ಮತ್ತು ಭವ್ಯತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತ, ಭಾರತದ ಕಾರ್ಮಿಕ ಹಾಗೂ ಉದ್ಯೋಗ ಸಚಿವರು ಹಾಗೂ ಯುವಜನಾಂಗ ಮತ್ತು ಕ್ರೀಡಾ ಸಚಿವರಾದ ಮನ್ಸುಖ್ ಮಂಡಾವಿಯಾ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಎರಡು ತಿಂಗಳ ಅವಧಿಯಲ್ಲಿ ನಡೆದ ಈಶ ಗ್ರಾಮೋತ್ಸವದ 2025ರ ಆವೃತ್ತಿಯು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತೆಲಂಗಾಣ ಸೇರಿದಂತೆ ಆರು ರಾಜ್ಯಗಳಲ್ಲಿ ಮತ್ತು ಮೊದಲ ಬಾರಿಗೆ ಒಡಿಶಾದಲ್ಲಿ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಿತು.

ಈ ಬಾರಿಯ ಉತ್ಸವವು 183 ಸ್ಥಳಗಳು, 5,472 ತಂಡಗಳು, 12,000 ಕ್ಕೂ ಹೆಚ್ಚು ಮಹಿಳೆಯರನ್ನು ಒಳಗೊಂಡಂತೆ ಒಟ್ಟು 63,220 ಸ್ಪರ್ಧಿಗಳು, ಮತ್ತು 35,000ಕ್ಕೂ ಹೆಚ್ಚು ಹಳ್ಳಿಗಳ ಪ್ರಾತಿನಿಧ್ಯಕ್ಕೆ ಸಾಕ್ಷಿಯಾಯಿತು.

“2028ರ ವೇಳೆಗೆ ಈಶ ಗ್ರಾಮೋತ್ಸವವು ದೇಶದ 28 ರಾಜ್ಯಗಳಲ್ಲೂ ನಡೆಯಬೇಕಾಗಿದೆ, ಇದು ನನ್ನ ಬದ್ಧತೆ. ಇದು ಕೇವಲ ಕ್ರೀಡೆಯ ವಿಷಯವಲ್ಲದೆ, ಗ್ರಾಮೀಣ ಭಾರತದಲ್ಲಿ ವಿಭಿನ್ನ ಸ್ತರದ ಜೀವನವನ್ನು ಪುನರ್ಜ್ವಲಿಸುವುದು ಮತ್ತು ಮರುಜಾಗೃತಗೊಳಿಸುವುದೇ ಇದರ ಉದ್ದೇಶ” ಎಂದು ಸಭಿಕರನ್ನುದ್ದೇಶಿಸಿ ಸದ್ಗುರುಗಳು ಹೇಳಿದರು.

2004ರಲ್ಲಿ ಸದ್ಗುರುಗಳು ಚಾಲನೆ ನೀಡಿದ ಈಶ ಗ್ರಾಮೋತ್ಸವವು ಸಾಮಾಜಿಕ ಪರಿವರ್ತನೆಗೆ ಪ್ರಬಲ ಸಾಧನವಾಗಿದೆ, ಇದರಿಂದಾಗಿ ಗ್ರಾಮೀಣ ಜನರು ವ್ಯಸನಗಳಿಂದ ಮುಕ್ತರಾಗಲು, ಜಾತಿ ವಿಭಜನೆಗಳನ್ನು ಮೀರಿ ನಿಲ್ಲಲು, ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಭಾಗಗಳಲ್ಲಿ ಉತ್ಸಾಹಪೂರ್ಣ ಆಟದ ಮನೋಭಾವವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ. ತಂಡವನ್ನು ಗ್ರಾಮ ಪಂಚಾಯಿತಿಯ ಮಿತಿಯೊಳಗಿನ ಆಟಗಾರರೊಂದಿಗೆ ಮಾತ್ರ ರಚಿಸಬಹುದಾಗಿದ್ದು, ಇದು ಸಮುದಾಯಗಳನ್ನು ಒಗ್ಗೂಡಿಸುವ ಮೂಲಕ ಸ್ಥಳೀಯ ಹೆಮ್ಮೆಯನ್ನು ಆಚರಿಸುತ್ತದೆ.

ವೃತ್ತಿಪರ ಆಟಗಾರರಿಗಲ್ಲದೆ, ಈಶ ಗ್ರಾಮೋತ್ಸವವು ಗ್ರಾಮೀಣ ಚೈತನ್ಯದ ಸಂಭ್ರಮಾಚರಣೆಯಾಗಿದೆ. ಇದು ರೈತರು, ದಿನಗೂಲಿ ಕಾರ್ಮಿಕರು ಮತ್ತು ಗೃಹಿಣಿಯರು ಸೇರಿದಂತೆ ಜನಸಾಮಾನ್ಯ ಗ್ರಾಮೀಣ ಜನರಿಗೆ ತಮ್ಮ ದೈನಂದಿನ ಕಾರ್ಯಗಳಿಂದ ಹೊರಬಂದು ಕ್ರೀಡೆಯ ಸಂಭ್ರಮ ಮತ್ತು ಐಕ್ಯತೆಯ ಶಕ್ತಿಯನ್ನು ಆನಂದಿಸಲು ಅವಕಾಶ ನೀಡುತ್ತದೆ.

ಈಶ ಗ್ರಾಮೋತ್ಸವವನ್ನು ಆಯೋಜಿಸುವ ಈಶ ಔಟ್‌ರೀಚ್ಅನ್ನು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದಿಂದ ‘ನ್ಯಾಷನಲ್ ಸ್ಪೋರ್ಟ್ಸ್ ಪ್ರಮೋಷನ್ ಆರ್ಗನೈಸೇಷನ್’(NSPO) ಎಂದು ಗುರುತಿಸಲಾಗಿದೆ. 2018ರಲ್ಲಿ, ಈ ಉಪಕ್ರಮವು ಬೇರುಮಟ್ಟದ ಕ್ರೀಡೆಗಳಿಗೆ ನೀಡಿದ ಅಸಾಧಾರಣ ಕೊಡುಗೆಗಾಗಿ ಪ್ರತಿಷ್ಠಿತ ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರವನ್ನು ಪಡೆಯಿತು.

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!