ದೊಡ್ಡಬಳ್ಳಾಪುರ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಮ್ಮ ವೈಯಕ್ತಿಕ ಸುಖದ ತ್ಯಾಗ, ದೃಢ ಸಂಕಲ್ಪ ಹಾಗೂ ಕಠಿಣ ಪರಿಶ್ರಮ ಇದ್ದರೆ ಯಾರು ಬೇಕಾದರೂ ಯಶಸ್ಸು (Success) ಸಾಧಿಸಬಹುದು. ಅದಕ್ಕಾಗಿ ಮಾನಸಿಕವಾಗಿ ಪಕ್ವವಾಗಿರಬೇಕು ಎಂದು ಪ್ರಾಧ್ಯಾಪಕ ಮತ್ತು ಖ್ಯಾತ ತರಬೇತುದಾರ ಸತೀಶ್ ಜೋಗ ಅಭಿಪ್ರಾಯಪಟ್ಟರು.
ನಗರದಲ್ಲಿ ಪ್ರಥಮವಾಗಿ ಪ್ರಾರಂಭಗೊಂಡಿರುವ ಸೌಭಾಗ್ಯ ಸೇವಾ ಟ್ರಸ್ಟ್ನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಬೆಳದಿಂಗಳು ಸ್ಟಡಿ ಸರ್ಕಲ್ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ದೃಢ ಮನಸ್ಸಿನಿಂದ ಸಾಧನೆ ಮಾಡುವವರಿಗೆ ಅಸಾಧ್ಯವಾದುದ್ದು ಯಾವುದೂ ಇಲ್ಲ, ಸಾಧಿಸುವ ಛಲವಿರಬೇಕಷ್ಟೆ .ಸೋತರೆ ಕುಗ್ಗದೆ ಮತ್ತೆ ಪ್ರಯತ್ನ ಮಾಡಿದರೆ ಸೋಲೂ ಗೆಲುವಾಗಿ ಪರಿವರ್ತನೆಗೊಳ್ಳುತ್ತದೆ. ಯಾವ ವಿಷಯವನ್ನು ಎಷ್ಟು ಓದಬೇಕು ಎನ್ನುವುದು ಎಷ್ಟು ಮುಖ್ಯವೋ, ಯಾವ ವಿಷಯವನ್ನು ಓದಬಾರದು ಎಂಬುದರ ಅರಿವು ಅಗತ್ಯ. ಸ್ಪರ್ಧಾರ್ಥಿಗಳು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾದ ಸಮಯ ನಿರ್ವಹಣೆಯ ತಂತ್ರವನ್ನು ರೂಪಿಸಿಕೊಂಡರೆ, ಯಶಸ್ಸು ಖಂಡಿತವಾಗಿಯೂ ಲಭಿಸುತ್ತದೆ.
ಸಕಾರಾತ್ಮಕ ಮನೋಭಾವದಿಂದ ಹೋರಾಡಿದರೆ ಬದುಕಿನ ಪ್ರತಿಯೊಂದು ಹಂತದಲ್ಲೂ ಸಾಧನೆ ಸಾಧ್ಯ ಅದಕ್ಕಾಗಿ ಸೂಕ್ತ ತರಬೇತಿ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಿರ್ಣ ರಾಗಲು ಅಗತ್ಯವಾಗಿರುವ ಹತ್ತಾರು ಸರಳ ತಂತ್ರಗಳು, ಮತ್ತು ಓದುವ ವಿಧಾನಗಳ ಬಗ್ಗೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ವಿಶ್ವನಾಥ್ ಮಾತನಾಡಿ, ವಿದ್ಯಾರ್ಥಿಗಳು ದೊಡ್ಡ ಗುರಿಯನ್ನು ಹೊಂದಿಕೊಂಡು ಅದನ್ನು ಸಾಧಿಸುವತ್ತ ಪರಿಶ್ರಮ ಪಡಬೇಕು. ಗುರಿ ದೊಡ್ಡದಾದಷ್ಟೂ ಶಿಸ್ತು, ಸಮಯ ನಿರ್ವಹಣೆ, ನಿತ್ಯದ ಅಧ್ಯಯನ ಅಭ್ಯಾಸವೂ ಗಟ್ಟಿಯಾಗಿರಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕೇವಲ eನದಿಂದ ಮಾತ್ರವಲ್ಲ, ಆತ್ಮವಿಶ್ವಾಸ ಮತ್ತು ಮನೋಬಲದಿಂದಲೂ ಬರುತ್ತದೆ ಎಂದರು.
ತರಬೇತುದಾರರಾದ ನೆಲಮಂಗಲದ ಗೋವಿಂದರಾಜು ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ರೀತಿ, ಇಂದಿನ ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ರೀತಿಯನ್ನು ವಿವರವಾಗಿ ತಿಳಿಸಿದರು. ಓದಿನ ಜೊತೆಗೆ ವ್ಯಕ್ತಿತ್ವ ವಿಕಾಸ, ಸಂವಹನ ಕೌಶಲ ಹಾಗೂ ಸಾಮಾನ್ಯ eನಕ್ಕೆ ಸಮಾನ ಆದ್ಯತೆ ನೀಡಿದರೆ, ವಿದ್ಯಾರ್ಥಿಗಳು ಬೇಗ ಗುರಿ ಮುಟ್ಟಬಹುದು ಎಂದರು.
ಬೆಳದಿಂಗಳು ಸ್ಟಡಿ ಸರ್ಕಲ್ ಕಾರ್ಯಕ್ರಮ ಸಂಯೋಜಕ ಮಾಳವ ನಾರಾಯಣ್ ಮಾತನಾಡಿ, ಶೀಘ್ರದಲ್ಲಿಯೇ ಕೆಪಿಎಸ್ಇ ಯಿಂದ ಪಿ.ಸಿ, ಪಿಎಸ್ಐ, ಎಸ್ಡಿಎ, ಎಫ್ಡಿಎ ಉಪನ್ಯಾಸಕ ಸೇರಿದಂತೆ ಹಲವು ಹುದ್ದೆಗಳಿಗೆ ಅಧಿಸೂಚನೆ ಹೊರ ಬೀಳಲಿವೆ. ವಿದ್ಯಾರ್ಥಿಗಳು ಸರ್ಕಾರಿ ಹುದ್ದೆಯನ್ನು ಪಡೆಯಲು ಕ್ರಮಬದ್ಧ ತರಬೇತಿ ಪಡೆಯುವುದು ಅತ್ಯಂತ ಅವಶ್ಯಕ. ಈ ಹಿನ್ನೆಲೆಯಲ್ಲಿ ಬೆಳದಿಂಗಳು ಸ್ಟಡಿ ಸರ್ಕಲ್ನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಅಕ್ಟೋಬರ್ 1ರಿಂದ ಮೊದಲ ಬ್ಯಾಚ್ ತರಗತಿಗಳು ಆರಂಭಗೊಳ್ಳಲಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶಿವಕುಮಾರ್, ಗೋವಿಂದ ರಾಜು, ಬೆಳದಿಂಗಳು ಸೌಭಾಗ್ಯ ಸೇವಾ ಟ್ರಸ್ಟ್ನ ಜಿ.ರಾಜಗೋಪಾಲ, ಡಾ.ಪರಮೇಶ್ವರ್, ರಾಜೇಂದ್ರ, ಮಾರ್ಗರೆಟ್ ಶರ್ಲಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.