ಸಮೀಕ್ಷೆ ಕರ್ತವ್ಯ ಲೋಪ: ಮುಖ್ಯಶಿಕ್ಷಕಿ ಅಮಾನತು..!

Absence from survey: 8 teachers suspended..!

ಬೆಂಗಳೂರು ಉತ್ತರ ಜಿಲ್ಲೆ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಆರೋಪದಡಿ ಮಾದನಾಯಕನಹಳ್ಳಿ ಶಾಲೆಯ ಮುಖ್ಯಶಿಕ್ಷಕಿ (Headmistress) ಸೌಭಾಗ್ಯ ಅವರನ್ನು ಅಮಾನತು (Suspended) ಮಾಡಲಾಗಿದೆ.

ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 2025 ನೇ ಸೆಪ್ಟೆಂಬರ್ 22 ರಿಂದ ಪ್ರಾರಂಭಿಸಿದ್ದು ಪ್ರಗತಿಯಲ್ಲಿದೆ.

ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆಯೆಂದೂ ಹಾಗೂ ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್.ನಾಯ್ಕ್ ಅವರು ತಿಳಿಸಿದ್ದಾರೆ.

2025ನೇ ಸೆಪ್ಟೆಂಬರ್ 28 ರಂದು ಕೆಲವು ಜನಪ್ರತಿನಿಧಿಗಳು, ಮಾನ್ಯ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸುತ್ತಾ, ತಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲವೆಂದು ಹಾಗೂ ಸಾರ್ವಜನಿಕರೂ ಸಹ ಭಾಗವಹಿಸಬಾರದೆಂದು ಹೇಳಿಕೆಗಳನ್ನು ನೀಡಿರುವುದು ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ರೀತಿಯ ಹೇಳಿಕೆಗಳ ಮೂಲಕ ಸಾರ್ವಜನಿಕರು ಸಮೀಕ್ಷೆಯಲ್ಲಿ ಭಾಗವಹಿಸದಂತೆ ಪ್ರೇರೇಪಿಸಲಾಗುತ್ತಿದೆ. ಆದರೆ ವಾಸ್ತವವಾಗಿ ಈ ರೀತಿಯ ಹೇಳಿಕೆಗಳು ನ್ಯಾಯಾಲಯದ ಆದೇಶದ ಆಶಯಗಳಿಗೆ ವಿರುದ್ಧವಾಗಿವೆ (Against the spirit).

ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶದಿಂದ ಮತ್ತು ಅವರ ಕಲ್ಯಾಣ ಹಾಗೂ ಏಳಿಗೆಗಾಗಿ ಯೋಜನೆಗಳನ್ನು ರೂಪಿಸಿ, ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲು, ಶಾಸನಬದ್ಧ ನಿಯಮಾವಳಿಗಳನ್ನಯ ಸದರಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.

ಆದರೆ, ಸಾರ್ವಜನಿಕ ಹೇಳಿಕೆಗಳು ಸಮೀಕ್ಷೆಯಲ್ಲಿ ಜನರು ಭಾಗವಹಿಸದಂತೆ ಪ್ರಚೋದಿಸುತ್ತಿದ್ದು, ಸಾರ್ವಜನಿಕ ಹಿತಕ್ಕಾಗಿ ಕೈಗೊಳ್ಳಲಾದ ಸಮೀಕ್ಷೆಯ ಉದ್ದೇಶಕ್ಕೆ ವಿರುದ್ಧವಾಗಿವೆ. ನಾಗರಿಕರು ಯಾವುದೇ ಬಲವಂತವಿಲ್ಲದೆ ಸ್ವಇಚ್ಛೆಯಿಂದ ಸಮೀಕ್ಷೆಯಲ್ಲಿ ಭಾಗವಹಿಸುತ್ತಿರುವ ಸಂದರ್ಭದಲ್ಲಿ, ಅವರ ಭಾಗವಹಿಸುವಿಕೆಯನ್ನು ತಡೆಯುವ ಇಂತಹ ಹೇಳಿಕೆಗಳು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿರುತ್ತದೆ.

ಈ ರೀತಿಯ ಹೇಳಿಕೆಗಳಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ತಲುಪುವ ಸಾಧ್ಯತೆ ಇರುವ ಕಾರಣ ಹಾಗೂ ಇದು ಮಾನ್ಯ ನ್ಯಾಯಾಲಯದ ಆದೇಶದ ಆಶಯಕ್ಕೆ ವ್ಯತಿರಿಕ್ತವಾಗಿರುವುದರಿಂದ (Against the spirit) ಈ ರೀತಿಯ ಹೇಳಿಕೆಗಳನ್ನು ನೀಡದಿರುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್.ನಾಯ್ಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವದಂತಿಗಳಿಗೆ ಕಿವಿ ಕೊಡಬೇಡಿ

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳಲಾಗುತ್ತಿದ್ದು, ಕೆಲವು ಸಾರ್ವಜನಿಕರು ಗಣತಿದಾರರು ತಮ್ಮ ಪಡಿತರ ಚೀಟಿಯ ರದ್ದತಿಗೆ ಬಂದಿದ್ದಾರೆಂಬ ತಪ್ಪು ಕಲ್ಪನೆಯಿಂದ ಸರಿಯಾದ ಮಾಹಿತಿ ನೀಡಲು ಸಹಕರಿಸದೆ ಸಮೀಕ್ಷೆಗೆ ಅಡ್ಡಿಯಾಗುತ್ತಿರುವುದು ಕಂಡುಬಂದಿರುತ್ತದೆ.

ಈ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಹಿಂದುಳಿದ ವರ್ಗಗಳ ಹಾಗೂ ಇತರೆ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವನ್ನು ಸಂಗ್ರಹಿಸಲು ಮಾತ್ರ ನಡೆಸಲಾಗುತ್ತಿದೆ.

ಯಾವುದೇ ಪಡಿತರ ಚೀಟಿ ರದ್ದತಿ ಕಾರ್ಯವನ್ನು ಸಮೀಕ್ಷೆಯಲ್ಲಿ ಮಾಡಲಾಗುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಸಮಾನತೆಗಳನ್ನು ಹೋಗಲಾಡಿಸುವ ಯೋಜನೆಗಳನ್ನು ರೂಪಿಸಲು ಈ ದತ್ತಾಂಶ ಸಹಕಾರಿಯಾಗಲಿದೆ.

ಹಾಗಾಗಿ ಸಾರ್ವಜನಿಕರು ಈ ಸಮೀಕ್ಷೆ ಬಗ್ಗೆ ಯಾವುದೇ ತಪ್ಪು ಕಲ್ಪನೆ ಹೊಂದದೆ ಮತ್ತು ವದಂತಿಗಳಿಗೆ ಕಿವಿಕೊಡದೇ ನಿಶ್ಚಿಂತೆಯಿಂದ ಭಾಗವಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]