ದೊಡ್ಡಬಳ್ಳಾಪುರ: ರಾಷ್ಟ್ರಪತಿ ಪದಕ ಪುರಸ್ಕೃತ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರಿಗೆ ಸನ್ಮಾನ

Tribute to Inspector Rao Ganesh Janardhan who was awarded the President Medal

ಬೆಂಗಳೂರು: ರಾಷ್ಟ್ರಪತಿ ಪದಕ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ (Rao Ganesh Janardhan) ಅವರನ್ನು ನಗರಸಭೆ ಸದಸ್ಯ ಅಲ್ತಾಫ್ ಸನ್ಮಾನಿಸಿದರು.

ದೊಡ್ಡಬಳ್ಳಾಪುರ ನಗರಸಭೆಯ ಚಿಕ್ಕಪೇಟೆ ವಾರ್ಡ್ ಸದಸ್ಯ ಅಲ್ತಾಫ್ ಅವರು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರನ್ನು ಸನ್ಮಾನಿಸಿ, ಸೇವಾ ಕಾರ್ಯವನ್ನು ಪ್ರಶಂಸೆ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಶ್ರೀನಗರ ಬಶೀರ್, ಮೂರ್ತಿ, ಮತಿನ್, ಮನ್ನಾನ್, ಹಸೀಬ್ ಮತ್ತಿತರರಿದ್ದರು.

ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರ ಸೇವಾ ಕಾರ್ಯವನ್ನು ಮೆಚ್ಚಿ ಆಗಸ್ಟ್ 30 ರಂದು ಬೆಂಗಳೂರಿನ ರಾಜಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪದಕವನ್ನು ವಿತರಣೆ ಮಾಡಿದ್ದರು.

ಆ ವೇಳೆ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್ ಮತ್ತಿತರರಿದ್ದರು.

ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್

ರಾವ್ ಗಣೇಶ್ ಜನಾರ್ಧನ್ ಅವರು 2003 ರಲ್ಲಿ ಪೊಲೀಸ್ ಸಬ್ಇನ್ಸ್ ಪೆಕ್ಟರ್ ಆಗಿ ಪೊಲೀಸ್ ಇಲಾಖೆಗೆ ಸೇರಿದ್ದು, ಸೇವೆಗೆ ಸೇರಿದಾಗಿನಿಂದಲೂ ಕಳಂಕವಿಲ್ಲದ ಶ್ರದ್ದೆ, ನಿಷ್ಟೆ ಮತ್ತು ಪ್ರಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ‌.

2005 ರಲ್ಲಿ ಬೆಂಗಳೂರು ನಗರದ ನಿಯಂತ್ರಣ ಕೋಣೆಗೆ ಸ್ಥಳ ನಿಯುಕ್ತಿಗೊಂಡಾಗ ನಿಯಂತ್ರಣ ಕೋಣೆಗೆ ಬರುವ ಪ್ರಮುಖ ಕರೆಗಳನ್ನು ಸಮಯ ಪ್ರಜ್ಞೆಯಿಂದ ಹಾಗೂ ಕಾಲವಿಳಂಬವಿಲ್ಲದೇ ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸುವ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅಪರಾಧಗಳನ್ನು ತಡೆಗಟ್ಟಲು ಶ್ರಮವಹಿಸಿದ್ದಾರೆ.

ಆನಂತರ 2005ನೇ ಡಿಸೆಂಬರ್ 28 ರಂದು ಭಾರತ ವಿಜ್ಞಾನ ಸಂಸ್ಥೆಯಲ್ಲಿ ನಡೆದ ಗುಂಡಿನ ದಾಳಿಯ ಪ್ರಕರಣವನ್ನು ತನಿಖೆ ನಡೆಸುವಲ್ಲಿ ತನಿಖಾ ತಂಡದ ಸದಸ್ಯರಾಗಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.

2006 ರಲ್ಲಿ ಶಿವಾಜಿನಗರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಸರಹದ್ದಿನಲ್ಲಿ ಸಾರ್ವಜನಿಕರಿಗೆ ಹಲವು ತರಬೇತಿ ಕಾರ್ಯಕ್ರಮಗಳನ್ನು ನಡೆಸಿರುತ್ತಾರೆ. ಇವರ ಪರಿಶ್ರಮದಿಂದ ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012ನೇ ಸಾಲಿನಲ್ಲಿ ಅತ್ಯಂತ ಕಡಿಮೆ ಅಪಘಾತಗಳು ಮತ್ತು ಅಪಘಾತ ಸಾವುಗಳು ದಾಖಲಾಗಿರುತ್ತವೆ.

ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆ, ಚಾಲಹಳ್ಳಿ ಸಂಚಾರ ಪೊಲೀಸ್ ಠಾಣೆ, ಅಶೋಕನಗರ ಸಂಚಾರ ಪೊಲೀಸ್ ಠಾಣೆ, ಹೆಚ್.ಎಸ್.ಆರ್ ಲೇಔಟ್ ಸಂಚಾರ ಪೊಲೀಸ್ ಠಾಣೆಗಳಲ್ಲಿ ಅಪಾರ ಶ್ರಮವಹಿಸಿ, ಸುಗಮ ಸಂಚಾರಕ್ಕೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಚಾರ ಸುಗಮಗೊಳಿಸಿರುತ್ತಾರೆ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಪಘಾತಗಳನ್ನು ತಡೆಯುವಲ್ಲಿ ಮತ್ತು ಪ್ರಾಣಹಾನಿಗಳನ್ನು ತಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.

ಎಸ್.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಪತ್ತೆ ಮಾಡಿರುತ್ತಾರೆ ಹಾಗೂ ಅಪರಾಧಗಳನ್ನು ತಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.

ಆನಂತರ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಂಡ ಇವರು ಪೊಲೀಸ್ ಪರಿಶೀಲನಾ ಪತ್ರಗಳು, ಪೊಲೀಸ್ ನಿರಾಕ್ಷೇಪಣಾ ಪತ್ರಗಳ ಗಣಕೀಕರಣಕ್ಕೆ ಶ್ರಮಿಸಿರುತ್ತಾರೆ. ಇದರಿಂದಾಗಿ ಸಾರ್ವಜನಿಕರು ಪಿ.ಸಿ.ಸಿ, ಪಿ.ವಿ.ಸಿ ಪತ್ರಗಳನ್ನು ಪಡೆಯಲು ಪ್ರಕ್ರಿಯೆ ಸರಳೀಕರಣವಾಗಿರುತ್ತದೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾವಣೆಗೊಂಡು ಅಲ್ಲಿಯೂ ಸಹ ಅತ್ಯುತ್ತಮ ಸೇವೆಯನ್ನು ಸಲ್ಲಿಸಿದ ಇವರು ಹಿರಿಯ ಅಧಿಕಾರಿಗಳ ಪ್ರಶಂಸೆಗೊಳಗಾಗಿರುತ್ತಾರೆ.

ಇವರ ಇಲ್ಲಿಯವರೆಗೆ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ದಕ್ಷತೆ, ವೃತ್ತಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆಯನ್ನು ಮೆಚ್ಚಿ ರಾಷ್ಟ್ರಪತಿಗಳು 2013ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಶ್ಲಾಘನೀಯ ಸೇವಾ ಪದಕವನ್ನು ನೀಡಿ ಗೌರವಿಸಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]