Doddaballapura: Assault on the middle of the road, death threat.. FIR registered

ದೊಡ್ಡಬಳ್ಳಾಪುರ: ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ, ಕೊಲೆ ಬೆದರಿಕೆ.. FIR ದಾಖಲು

ದೊಡ್ಡಬಳ್ಳಾಪುರ: ಕಾರಿನಲ್ಲಿ ಕರೆದುಕೊಂಡು ಬಂದ ವ್ಯಕ್ತಿ ನಡುರಸ್ತೆಯಲ್ಲಿಯೇ ಹಲ್ಲೆ ನಡೆಸಿ, ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಹಿಂದೂಪುರ ಮೂಲದ ಮಹಿಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಿಸಿದ್ದಾರೆ.

ಹಲ್ಲೆಗೊಳಗಾದ ಮಹಿಳೆ ಶಾನೂ ಎನ್ನಲಾಗಿದ್ದು, ಈ ಕುರಿತು ಶಿವರಾಮ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಶಾನೂ ನೀಡಿರುವ ದೂರಿನ ಅನ್ವಯ, ಆಕೆಯ‌ನ್ನು 12 ವರ್ಷದ ಹಿಂದೆ ಆಂಧ್ರಪ್ರದೇಶದ ಪುಟ್ಟಪರ್ತಿ ಬಳಿ ಇರುವ ಮರಕುಂಟವರ ಗ್ರಾಮದ ಆಕ್ಬರ್ ಬಾಷ ಅವರಿಗೆ ಕೊಟ್ಟು ಮದುವೆ ಮಾಡಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಇರುತ್ತಾರೆ. ಆಕೆ ಮತ್ತು ಅಕೆಯ ಪತಿ ಸುಮಾರು 10 ವರ್ಷದ ಹಿಂದೆ ಕೆಲಸ ಹುಡುಕಿಕೊಂಡು ಯಲಹಂಕಕ್ಕೆ ಬಂದು, ಬಾಡಿಗೆ ಮನೆ ಮಾಡಿಕೊಂಡು ಗಾರೆ ಕೆಲಸಕ್ಕೆ ಮಾಡುತ್ತಿದ್ದರಂತೆ.

ಈ ವೇಳೆ ಅವರು ಗಾರೆ ಕೆಲಸ ಮಾಡುವ ಸಮಯದಲ್ಲಿ ಜೆಸಿಬಿ ಚಾಲನೆ ಮಾಡುವ ಮಂಡ್ಯ ಮೂಲದ ಶಿವರಾಮ ಎಂಬಾತ ಪರಿಚಯವಾಗಿದ್ದು, ಸ್ನೇಹಿತರಾಗಿದ್ದರಂತೆ. ಈಗ್ಗೆ ಸುಮಾರು 5 ವರ್ಷದ ಹಿಂದೆ ಸಂಸಾರ ಸಮೇತ ದೊಡ್ಡಬಳ್ಳಾಪುರಕ್ಕೆ ಗಂಡ ಹೆಂಡತಿ ಬಂದಿದ್ದು, ಪತಿ ಗಾರೆ ಕೆಲಸ ಮಾಡಿಕೊಂಡಿದ್ದರೆ, ಈಕೆ ಗಾರ್ಮೆಂಟ್ ಫ್ಯಾಕ್ಟರಿಗೆ ಕೆಲಸಕ್ಕೆ ತೆರಳುತ್ತಾರಂತೆ.

ಇವರ ಜೊತೆಯಲ್ಲಿ ಜೆಸಿಬಿ ಡ್ರೈವರ್ ಶಿವರಾಮ ಸಹ ಬಂದು ಅವರ ಮನೆಯಲ್ಲಿಯೇ ವಾಸವಾಗಿದ್ದು, ಕಾರ್ ಚಾಲನೆ ಮಾಡಿಕೊಂಡಿದ್ದನಂತೆ. ಅಲ್ಲದೆ ಅವರ ಮನೆಯಲ್ಲಿನ ಖರ್ಚುಗಳನ್ನು ನೋಡಿಕೊಳ್ಳುತ್ತಿದ್ದನಂತೆ. ಅದಕ್ಕೆ ಈ ದಂಪತಿ ಶಿವರಾಮಗೆ ಊಟ ವಸತಿ ಸೌಕರ್ಯವನ್ನು ನೋಡಿಕೊಳ್ಳುತ್ತಿದ್ದರಂತೆ.

ಬುಧವಾರ ಬೆಳಗ್ಗೆ ಆಕ್ಬರ್ ಬಾಷ ತೊಂಡೆಬಾವಿಗೆ ಗಾರೆ ಕೆಲಸಕ್ಕೆ ಹೋಗಿದ್ದು, ಫ್ಯಾಕ್ಟರಿಗೆ ರಜೆ ಇದ್ದುದರಿಂದ ಆಕೆ ಮನೆಯಲ್ಲಿಯೇ ಇದ್ದರಂತೆ. ಮಧ್ಯಾಹ್ನ 3.00 ಗಂಟೆ ಸಮಯದಲ್ಲಿ ಶಿವರಾಮ ಕಾರಿನಲ್ಲಿ ಬಂದು, ನಿಮ್ಮ ಯಜಮಾನರನ್ನು ಕರೆದುಕೊಂಡು ಬರೋಣ ಬಾ ಎಂದು ಆಕೆಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ, ದೊಡ್ಡಬಳಾಪುರ-ಗೌರಿಬಿದನೂರು ರಸ್ತೆ ಗುಂಡಮಗೆರೆ ಕ್ರಾಸ್ ನಿಂದ ಮುಂದೆ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ. ಆಕೆಗೆ ಕೆಟ್ಟ ಪದಗಳಿಂದ ಬೈದು, ನಿನಗೆ ಮತ್ತು ಪ್ಯಾಕ್ಟರಿಯಲ್ಲಿ ಕೆಲಸ ಮಾಡುವ ಯಾವುದೋ ಗಂಡಸಿಗೆ ಅಕ್ರಮ ಸಂಬಂಧ ಇದೆ, ನಾನು ಇದ್ದರೂ ಸಹ ನಿನಗೆ ಬೇರೆ ಗಂಡಸು ಬೇಕೆ? ನಿನ್ನನ್ನು ಈ ದಿನ ಕೊಲೆ ಮಾಡದೇ ಬಿಡುವುದಿಲ್ಲ ಎಂದು ಹೇಳಿ, ಕೈಗಳಿಂದ ಆಕೆಯನ್ನು ಹೊಡೆದಿದ್ದಾನಂತೆ.

ಅಲ್ಲದೆ ಅಲ್ಲಿಯೇ ಬಿದ್ದಿದ್ದ ಕಡ್ಡಿಯನ್ನು ತೆಗೆದುಕೊಂಡು ಬೆನ್ನಿಗೆ ಹೊಡೆದಿದ್ದು, ಆಕೆ ತಪ್ಪಿಸಿಕೊಂಡು ರಸ್ತೆಗೆ ಬಂದು ಕೂಗಿಕೊಂಡಾಗ, ಸಾರ್ವಜನಿಕರು ಬಂದು ಆಕೆಯನ್ನು ರಕ್ಷಿಸಿ, ಆಕೆಯ ಪತಿ ಆಕ್ಬರ್ ಬಾಷ ಫೋನ್ ಮಾಡಿ ತಿಳಿಸಿದ್ದು, ಆತ ಒಂದು ಆಕೆಯನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಟ್ಟ ಪದಗಳಿಂದ ಬೈದು, ಕೈಗಳಿಂದ ಮತ್ತು ಕಡ್ಡಿಯಿಂದ ಹೊಡೆದು, ಕೊಲೆ ಬೆದರಿಕೆಯನ್ನು ಹಾಕಿರುವ ಶಿವರಾಮ ಮೇಲೆ ಕ್ರಮಕೈಗೊಳ್ಳುವಂತೆ ಶಾನೂ ದೂರು ನೀಡಿದ್ದಾರೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!