Will the central government return the excess GST collected from the people? CMSiddaramaiah questions

ಜನರಿಂದ ಪಡೆದ ಹೆಚ್ಚಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ (GST) ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.

ರಾಜ್ಯಕ್ಕೆ ಕೇಂದ್ರದ ಸುಮಾರು 17000 ಕೋಟಿ ಅನುದಾನದಲ್ಲಿ ಖೋತಾ

ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಉತ್ತರಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ. 3.5 ರಷ್ಟು ನೀಡುತ್ತಿರುವುದು ಅನ್ಯಾಯ. ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡಿದರೆ , ನಮಗೆ ರೂಪಾಯಿಗೆ ಕೇವಲ 14 ಪೈಸೆ ಮಾತ್ರ ರಾಜ್ಯ ದೊರೆಯುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರ ವಿತ್ತಸಚಿವರು ರದ್ದುಪಡಿಸಿದರು.

ಆಯೋಗದ ಶಿಫಾರಸ್ಸಿನಂತೆ 5490 ಕೋಟಿ ಹಾಗೂ ಕೆರೆಗಳ ಅಭಿವೃದ್ದಿ 3000 ಕೋಟಿ, ರಸ್ತೆ ನಿರ್ಮಾಣಕ್ಕೆ 3000 ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೊಟಿ ರೂ.ಗಳ ಅನುದಾನವನ್ನು ನಮಗೆ ನೀಡಲಾಗಿಲ್ಲ. ಒಟ್ಟಾರೆ 17000 ಕೋಟಿ ರೂ. ಬರಬೇಕಾಗಿದ್ದ ಅನುದಾನ ಖೋತಾ ಆಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಅಗತ್ಯಬಿದ್ದರೆ ನ್ಯಾಯಾಲಯದ ನೆರವು ಪಡೆದು ಕೇಂದ್ರದ ಅನುದಾನ ಪಡೆಯಲಾಗುವುದು ಎಂದರು.

ಬಿಜೆಪಿ ಸಂಸದರಿಗೆ ರಾಜ್ಯದ ಹಿತ ಬೇಕಾಗಿಲ್ಲ

ಕೇಂದ್ರದ ಕಡಿಮೆ ಅನುದಾನದ ನಡುವೆ ಗ್ಯಾರಂಟಿಗಳ ವೆಚ್ಚವನ್ನು ಭರಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಸವಾಲನ್ನು ದಿಟ್ಟತನದಿಂದ ಎದುರಿಸಲಾಗುವುದು. ಜಿಎಸ್ ಟಿ ಸರಳೀಕರಣದಿಂದ ರಾಜ್ಯಸರ್ಕಾರಗಳು ಹೆಚ್ಚು ನಷ್ಟ ಎದುರಿಸಲಿವೆ. ಕರ್ನಾಟಕಕ್ಕೆ ಇದರಿಂದ ವಾರ್ಷಿಕ ಅಂದಾಜು 15 ಸಾವಿರ ಕೋಟಿ ನಷ್ಟವಾಗಲಿದೆ. ಕೇಂದ್ರಸರ್ಕಾರ , ಎನ್ ಡಿ ಎ ಗೆ ಬರುವ ರಾಜ್ಯಗಳ ಅನುಕೂಲಕ್ಕೆ ತಕ್ಕಂತೆ ಜಿಎಸ್ ಟಿ ಪರಿಹಾರವನ್ನು ನೀಡುತ್ತಿದೆ. ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ ಎಂದರು.

ಅಕ್ಟೋಬರ್ 7 ರೊಳಗೆ ಸಮೀಕ್ಷೆ ಪೂರ್ಣಗೊಳ್ಳುವ ಭರವಸೆಯಿದೆ

ರಾಜ್ಯದಲ್ಲಿ ಜಾತಿಸಮೀಕ್ಷೆ ಕಾರ್ಯದ ಪ್ರಗತಿ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಮೀಕ್ಷೆಯಲ್ಲಿ ಜಾತಿವಿವರ- ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ

ಮತಾಂತರ ಹಾಗೂ ಜಾತಿಒಡೆಯುವ ದೃಷ್ಠಿಯಿಂದ ಸಮೀಕ್ಷೆಯನ್ನು ಸರ್ಕಾರ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ. ಕಾಂತರಾಜು ವರದಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್, ಎಂಬಿತ್ಯಾದಿ ಜಾತಿಗಳನ್ನು ನಮೂದಿಸಲಾಗಿತ್ತು. ಜನರು ತಮ್ಮ ಜಾತಿಯನ್ನು ಸ್ವಯಂಪ್ರೇರಿತರಾಗಿ ನಮೂದಿಸಿದರೆ ಅದಕ್ಕೆ ಸರ್ಕಾರ ಜವಾಬ್ದಾರವಾಗುವುದಿಲ್ಲ. ಆದರೆ ಆಯೋಗ, ಈ ಜಾತಿಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಆದ್ದರಿಂದ ಜನರು ಸ್ವಯಂಪ್ರೇರಿತವಾಗಿ ಹೇಳುವ ಜಾತಿಯ ಮಾಹಿತಿಯನ್ನು ಆಯೋಗ ಪಡೆಯಲಿದೆ. ಇದರಲ್ಲಿ ಜಾತಿ ಒಡೆಯುವ ಪ್ರಶ್ನೆಯಿಲ್ಲ. ಜನರನ್ನು ರಾಜಕೀಯ ಉದ್ದೇಶದಿಂದ ದಾರಿತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.

ರಾಜಕಾರಣಕ್ಕಾಗಿ ಆರೋಪ

ವಿಪಕ್ಷ ನಾಯಕ ಅಶೋಕ್ ರವರು ರೈತರ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರ ಇದ್ದರೂ ಸತ್ತಂತೆಯೇ ಎಂದು ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿ, ಅಶೋಕ್ ಅವರು ವಿಪಕ್ಷದ ನಾಯಕರಾಗಿದ್ದರೂ, ಆರ್ ಎಸ್ ಎಸ್ ನವರ ನಿರ್ದೇಶನದಂತೆ ಮಾತನಾಡುತ್ತಾರೆ. ಅಶೋಕ್ ರವರು ರಾಜಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!